ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​

ತಗಡು ಶೀಟ್​ನ ಚಾವಣಿ ಇರುವ ಡಾಬಾದಲ್ಲಿ ಅಲ್ಲು ಅರ್ಜುನ್​ ಅವರು ಊಟ ಮಾಡಿದ್ದಾರೆ. ಅವರ ಜೊತೆ ಪತ್ನಿ ಸ್ನೇಹಾ ರೆಡ್ಡಿ ಕೂಡ ಸಾಥ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ಫೋಟೋವನ್ನು ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಟಾಲಿವುಡ್​ ನಟನ ಸರಳತೆ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ
Follow us
|

Updated on: May 21, 2024 | 5:42 PM

ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ನಟ ಅಲ್ಲು ಅರ್ಜುನ್ (Allu Arjun)​ ಅವರು ಐಷಾರಾಮಿ ಜೀವನ ನಡೆಸುತ್ತಾರೆ. ಅದರ ನಡುವೆಯೂ ಅವರು ಕೆಲವೊಮ್ಮೆ ಸಿಂಪಲ್​ ಆಗಿ ನಡೆದುಕೊಳ್ಳುತ್ತಾರೆ. ಅದಕ್ಕೆ ಉದಾಹರಣೆ ಎಂಬಂತೆ ಒಂದು ಫೋಟೋ ವೈರಲ್​ ಆಗಿದೆ. ಅಲ್ಲು ಅರ್ಜುನ್​ ಹಾಗೂ ಅವರ ಪತ್ನಿ ಅಲ್ಲು ಸ್ನೇಹಾ ರೆಡ್ಡಿ (Sneha Reddy) ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋವನ್ನು (Allu Arjun Viral Photo) ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸ್ಟಾರ್​ ನಟನ ಸರಳತೆಯನ್ನು ಕಂಡು ಅಭಿಮಾನಿಗಳು ಹೊಗಳುತ್ತಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಲ್ಲು ಅರ್ಜುನ್​ ಅವರು ಫೇಮಸ್​ ಆಗಿದ್ದಾರೆ. ‘ಪುಷ್ಪ 2’ ಸಿನಿಮಾದ ಬಿಡುಗಡೆಗಾಗಿ ಅವರು ಕಾದಿದ್ದಾರೆ. ಈ ನಡುವೆ ಅವರು ಕುಟುಂಬದ ಜೊತೆಗೆ ಕಾಲ ಕಳೆಯುವುದನ್ನು ತಪ್ಪಿಸುವುದಿಲ್ಲ. ಪತ್ನಿ ಸ್ನೇಹಾ ರೆಡ್ಡಿ ಜೊತೆ ಪ್ರಯಾಣ ಮಾಡುವಾಗ ಅಲ್ಲು ಅರ್ಜುನ್​ ಅವರು ರಸ್ತೆಯ ಬದಿಯ ಡಾಬಾದಲ್ಲಿ ಊಟ ಮಾಡಿದ ಫೋಟೋ ವೈರಲ್ ಆಗುತ್ತಿದೆ.

ಡಾಬಾದಲ್ಲಿ ಬಾಕಿ ಗ್ರಾಹಕರು ಕಾಣಿಸಿಲ್ಲ. ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು ಊಟ ಮಾಡುತ್ತಿರುವ ಫೋಟೋವನ್ನು ಅಭಿಮಾನಿಗಳು ಯಾರೋ ದೂರದಿಂದ ಕ್ಲಿಕ್ಕಿಸಿದ್ದಾರೆ. ಫೋನ್​ನಲ್ಲಿ ಮಾತನಾಡುತ್ತಾ ಅಲ್ಲು ಅರ್ಜುನ್​ ಅವರು ಊಟ ಮಾಡುತ್ತಿದ್ದಾರೆ. ತಗಡು ಶೀಟ್​ನ ಚಾವಣಿ ಇರುವ ಡಾಬಾದಲ್ಲಿ ಅಲ್ಲು ಅರ್ಜುನ್​ ಅವರು ಪತ್ನಿ ಜೊತೆ ಬಂದು ಊಟ ಮಾಡಿದ್ದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಅಚ್ಚರಿ ಆಗಿದೆ.

ಇದನ್ನೂ ಓದಿ: ‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​

ಸಿನಿಮಾ ವಿಚಾರಕ್ಕೆ ಬರುವುದಾದರೆ, ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸುಕುಮಾರ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಪುಷ್ಪ 2’ ತೆರೆಕಂಡ ಬಳಿಕ ಅಲ್ಲು ಅರ್ಜುನ್​ ಅವರ ಚಾರ್ಮ್​ ಇನ್ನಷ್ಟು ಹೆಚ್ಚಾಗಲಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ