AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​

ತಗಡು ಶೀಟ್​ನ ಚಾವಣಿ ಇರುವ ಡಾಬಾದಲ್ಲಿ ಅಲ್ಲು ಅರ್ಜುನ್​ ಅವರು ಊಟ ಮಾಡಿದ್ದಾರೆ. ಅವರ ಜೊತೆ ಪತ್ನಿ ಸ್ನೇಹಾ ರೆಡ್ಡಿ ಕೂಡ ಸಾಥ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ಫೋಟೋವನ್ನು ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಟಾಲಿವುಡ್​ ನಟನ ಸರಳತೆ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ
ಮದನ್​ ಕುಮಾರ್​
|

Updated on: May 21, 2024 | 5:42 PM

Share

ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ನಟ ಅಲ್ಲು ಅರ್ಜುನ್ (Allu Arjun)​ ಅವರು ಐಷಾರಾಮಿ ಜೀವನ ನಡೆಸುತ್ತಾರೆ. ಅದರ ನಡುವೆಯೂ ಅವರು ಕೆಲವೊಮ್ಮೆ ಸಿಂಪಲ್​ ಆಗಿ ನಡೆದುಕೊಳ್ಳುತ್ತಾರೆ. ಅದಕ್ಕೆ ಉದಾಹರಣೆ ಎಂಬಂತೆ ಒಂದು ಫೋಟೋ ವೈರಲ್​ ಆಗಿದೆ. ಅಲ್ಲು ಅರ್ಜುನ್​ ಹಾಗೂ ಅವರ ಪತ್ನಿ ಅಲ್ಲು ಸ್ನೇಹಾ ರೆಡ್ಡಿ (Sneha Reddy) ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋವನ್ನು (Allu Arjun Viral Photo) ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸ್ಟಾರ್​ ನಟನ ಸರಳತೆಯನ್ನು ಕಂಡು ಅಭಿಮಾನಿಗಳು ಹೊಗಳುತ್ತಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಲ್ಲು ಅರ್ಜುನ್​ ಅವರು ಫೇಮಸ್​ ಆಗಿದ್ದಾರೆ. ‘ಪುಷ್ಪ 2’ ಸಿನಿಮಾದ ಬಿಡುಗಡೆಗಾಗಿ ಅವರು ಕಾದಿದ್ದಾರೆ. ಈ ನಡುವೆ ಅವರು ಕುಟುಂಬದ ಜೊತೆಗೆ ಕಾಲ ಕಳೆಯುವುದನ್ನು ತಪ್ಪಿಸುವುದಿಲ್ಲ. ಪತ್ನಿ ಸ್ನೇಹಾ ರೆಡ್ಡಿ ಜೊತೆ ಪ್ರಯಾಣ ಮಾಡುವಾಗ ಅಲ್ಲು ಅರ್ಜುನ್​ ಅವರು ರಸ್ತೆಯ ಬದಿಯ ಡಾಬಾದಲ್ಲಿ ಊಟ ಮಾಡಿದ ಫೋಟೋ ವೈರಲ್ ಆಗುತ್ತಿದೆ.

ಡಾಬಾದಲ್ಲಿ ಬಾಕಿ ಗ್ರಾಹಕರು ಕಾಣಿಸಿಲ್ಲ. ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು ಊಟ ಮಾಡುತ್ತಿರುವ ಫೋಟೋವನ್ನು ಅಭಿಮಾನಿಗಳು ಯಾರೋ ದೂರದಿಂದ ಕ್ಲಿಕ್ಕಿಸಿದ್ದಾರೆ. ಫೋನ್​ನಲ್ಲಿ ಮಾತನಾಡುತ್ತಾ ಅಲ್ಲು ಅರ್ಜುನ್​ ಅವರು ಊಟ ಮಾಡುತ್ತಿದ್ದಾರೆ. ತಗಡು ಶೀಟ್​ನ ಚಾವಣಿ ಇರುವ ಡಾಬಾದಲ್ಲಿ ಅಲ್ಲು ಅರ್ಜುನ್​ ಅವರು ಪತ್ನಿ ಜೊತೆ ಬಂದು ಊಟ ಮಾಡಿದ್ದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಅಚ್ಚರಿ ಆಗಿದೆ.

ಇದನ್ನೂ ಓದಿ: ‘ನಾನು ಸುಂದರವಾಗಿರಲಿಲ್ಲ, ಹಾಗಾಗಿ ಒಳ್ಳೇ ಆಫರ್​ ಬರಲಿಲ್ಲ’: ಅಲ್ಲು ಅರ್ಜುನ್​

ಸಿನಿಮಾ ವಿಚಾರಕ್ಕೆ ಬರುವುದಾದರೆ, ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸುಕುಮಾರ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಪುಷ್ಪ 2’ ತೆರೆಕಂಡ ಬಳಿಕ ಅಲ್ಲು ಅರ್ಜುನ್​ ಅವರ ಚಾರ್ಮ್​ ಇನ್ನಷ್ಟು ಹೆಚ್ಚಾಗಲಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು