AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ

Telugu Film Industry | Tollywood News: 20 ವರ್ಷಗಳ ಸಿನಿಪಯಣದಲ್ಲಿ ಅಲ್ಲು ಅರ್ಜುನ್​ ಅವರು ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on:Mar 28, 2023 | 3:58 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ಭಾರತೀಯ ಚಿತ್ರರಂಗದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಅವರಿಗೆ ಭರ್ಜರಿ ಬೇಡಿಕೆ ಇದೆ. ‘ಪುಷ್ಪ’ ಸಿನಿಮಾ (Pushpa Movie) ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಇಂದಿಗೆ (ಮಾರ್ಚ್​ 28) ಅಲ್ಲು ಅರ್ಜುನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 20 ವರ್ಷ ಕಳೆದಿದೆ. ಈ ವಿಶೇಷ ಸಂದರ್ಭದಲ್ಲಿ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. 2 ದಶಕಗಳ ಕಾಲ ಬಣ್ಣದ ಲೋಕದಲ್ಲಿ ಚಾರ್ಮ್​ ಉಳಿಸಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಈ ಸಾಧನೆ ಮಾಡಿರುವ ಅಲ್ಲು ಅರ್ಜುನ್​ಗೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಅಲ್ಲು ಅರ್ಜುನ್​ ಅವರು ಬ್ಯುಸಿ ಆಗಿದ್ದಾರೆ. ಟಾಲಿವುಡ್​ನಲ್ಲಿ 20 ವರ್ಷ ಪೂರೈಸಿದ್ದಕ್ಕಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್​ ಹಂಚಿಕೊಂಡಿದ್ದಾರೆ. ‘ಚಿತ್ರರಂಗದಲ್ಲಿ ನಾನು ಇಂದು 20 ವರ್ಷಗಳನ್ನು ಪೂರೈಸಿದ್ದೇನೆ. ನನಗೆ ಸಾಕಷ್ಟು ಪ್ರೀತಿ ಸಿಕ್ಕಿದೆ. ಚಿತ್ರರಂಗದ ಎಲ್ಲ ಆಪ್ತರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಅಭಿಮಾನಿಗಳು ಮತ್ತು ಪ್ರೇಕ್ಷಕರು ತೋರಿದ ಪ್ರೀತಿಯಿಂದಲೇ ನಾನು ಇಂದು ಈ ಸ್ಥಾನದಲ್ಲಿದ್ದೇನೆ. ಅವರಿಗೆ ಎಂದೆಂದಿಗೂ ಚಿರಋಣಿ’ ಎಂದು ಅಲ್ಲು ಅರ್ಜುನ್​ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

ಇದನ್ನೂ ಓದಿ: ವಿಶ್ ಮಾಡಲಿಲ್ಲ, ಬರ್ತ್​ಡೇ ಪಾರ್ಟಿಗೂ ಬರಲಿಲ್ಲ; ರಾಮ್​ ಚರಣ್ ಬಗ್ಗೆ ಮುನಿಸಿಕೊಂಡ್ರಾ ಅಲ್ಲು ಅರ್ಜುನ್?

ಸೆಲೆಬ್ರಿಟಿಗಳಾದ ಸಮಂತಾ ರುತ್​ ಪ್ರಭು, ರಾಕುಲ್​ ಪ್ರೀತ್​ ಸಿಂಗ್​, ಅರ್ಮಾನ್​ ಮಲಿಕ್​, ಲಕ್ಷ್ಮಿ ಮಂಚು, ಶ್ರೇಯಾ ಘೋಷಾಲ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅಲ್ಲು ಅರ್ಜುನ್​ ಅವರ ಪೋಸ್ಟ್​ಗೆ ಕಮೆಂಟ್​ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಸಾವಿರಾರು ಅಭಿಮಾಗಳು ಕಮೆಂಟ್​ ಮಾಡಿದ್ದಾರೆ. ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ.

ಅಲ್ಲು ಅರ್ಜುನ್​ ಅವರು 2003ರ ಮಾರ್ಚ್​ 28ರಂದು ಹೀರೋ ಆಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ಅವರು ನಟಿಸಿದ ಮೊದಲ ಸಿನಿಮಾ ‘ಗಂಗೋತ್ರಿ’ ಅಂದು ತೆರೆಕಂಡಿತು. ಆಗ ಅಲ್ಲು ಅರ್ಜುನ್​ ಅವರಿಗೆ 21ರ ಪ್ರಾಯ. ಮೊದಲ ಚಿತ್ರದಲ್ಲೇ ಅವರು ದೊಡ್ಡ ಗೆಲುವು ಪಡೆದುಕೊಂಡರು. ತೆಲುಗು ಪ್ರೇಕ್ಷಕರ ಮನ ಗೆದ್ದರು. ಬಳಿಕ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತ ಅಭಿಮಾನಿಗಳಿಗೆ ಹತ್ತಿರವಾದರು.

20 ವರ್ಷಗಳ ಸಿನಿಪಯಣದಲ್ಲಿ ಅಲ್ಲು ಅರ್ಜುನ್​ ಅವರು ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ವೃತ್ತಿಜೀವನದಲ್ಲಿ ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ. ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:58 pm, Tue, 28 March 23

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ