AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಅಭಿಮಾನಿಯ ಭೇಟಿ ಈಗ ಸಾಧ್ಯವಿಲ್ಲ: ಕಾರಣ ತಿಳಿಸಿದ ಅಲ್ಲು ಅರ್ಜುನ್

ನಟ ಅಲ್ಲು ಅರ್ಜುನ್ ಅವರು ಸಂದಿಗ್ಧ ಸ್ಥಿತಿಯಲ್ಲಿ ಇದ್ದಾರೆ. ಒಂದೆಡೆ ‘ಪುಷ್ಪ 2’ ಸಿನಿಮಾದ ಯಶಸ್ಸಿನ ಖುಷಿ, ಇನ್ನೊಂದೆಡೆ ಅಭಿಮಾನಿಯ ಸಾವಿನ ನೋವು. ಈ ನಡುವೆ ಕಾಲ್ತುಳಿತದಲ್ಲಿ ಗಾಯಗೊಂಡ ಅಭಿಮಾನಿಯನ್ನು ಅವರು ಭೇಟಿ ಮಾಡುವಂತೆಯೂ ಇಲ್ಲ. ಈ ಪರಿಸ್ಥಿತಿಯ ಬಗ್ಗೆ ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಗಾಯಗೊಂಡ ಅಭಿಮಾನಿಯ ಭೇಟಿ ಈಗ ಸಾಧ್ಯವಿಲ್ಲ: ಕಾರಣ ತಿಳಿಸಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Dec 15, 2024 | 9:59 PM

Share

ಟಾಲಿವುಡ್​ ಹೀರೋ ಅಲ್ಲು ಅರ್ಜುನ್​ ಅವರಿಗೆ ಇದು ಕಷ್ಟದ ಕಾಲ. ‘ಪುಷ್ಪ 2’ ಸಿನಿಮಾ ಪ್ರದರ್ಶನ ಕಾಣುತ್ತಿದ್ದ ‘ಸಂಧ್ಯಾ’ ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ 39ರ ಪ್ರಾಯದ ರೇವತಿ ಎಂಬ ಅಭಿಮಾನಿ ನಿಧನರಾದರು. ರೇವತಿ ಪುತ್ರ, 9ನೇ ವಯಸ್ಸಿನ ಶ್ರೀತೇಜ್​ ಪರಿಸ್ಥಿತಿ ಗಂಭೀರವಾಗಿದೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆತನ ಬಗ್ಗೆ ಅಲ್ಲು ಅರ್ಜುನ್​ ಅವರಿಗೆ ಅಪಾರ ಕಾಳಜಿ ಇದೆ. ಆದರೆ ಶ್ರೀತೇಜ್​ ಭೇಟಿ ಮಾಡಲು ಅಲ್ಲು ಅರ್ಜುನ್​ ಅವರಿಗೆ ಸಾಧ್ಯವಿಲ್ಲ. ಈ ಕುರಿತು ಅಲ್ಲು ಅರ್ಜುನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಸ್ಪಷ್ಟನೆ ನೀಡಿದ್ದಾರೆ.

‘ದುರದೃಷ್ಟಕರ ಘಟನೆಯ ಬಳಿಕ ನಿರಂತರ ವೈದ್ಯಕೀಯ ನಿಗಾದಲ್ಲಿ ಇರುವ ಬಾಲಕ ಶ್ರೀತೇಜ್​ ಬಗ್ಗೆ ನನಗೆ ಅಪಾರ ಕಾಳಜಿ ಇದೆ. ಆದರೆ ಕಾನೂನು ಪ್ರಕ್ರಿಯೆಯ ಕಾರಣದಿಂದ ಆತನನ್ನಾಗಲೀ ಅಥವಾ ಅವನ ಕುಟುಂಬದವರನ್ನಾಗಲೀ ನಾನು ಭೇಟಿಯಾಗಬಾರದು ಎಂದು ಸೂಚಿಸಿದ್ದಾರೆ’ ಎಂದು ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಪ್ರಕರಣ: ಜೂ ಎನ್​ಟಿಆರ್, ರಾಮ್ ಚರಣ್, ಶಾರುಖ್ ಅನ್ನು ಬಂಧಿಸಲಿಲ್ಲ ಏಕೆ?

‘ಶ್ರೀತೇಜ್​ ಕುಟುಂಬಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಆ ಕುಟುಂಬದ ಅಗತ್ಯತೆಗಳನ್ನು ಪೂರೈಸಿ, ಚಿಕಿತ್ಸೆ ಕೊಡಿಸುವ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ. ಆತ ಬೇಗ ಚೇತರಿಕ ಕಾಣಲಿ ಅಂತ ನಾನು ಪ್ರಾರ್ಥನೆ ಮಾಡುತ್ತೇನೆ. ಆದಷ್ಟು ಬೇಗ ಆತನನ್ನು ಮತ್ತು ಆತನ ಕುಟುಂಬದವರನ್ನು ಭೇಟಿ ಮಾಡಲು ಕಾಯುತ್ತಿದ್ದೇನೆ’ ಎಂದು ಅಲ್ಲು ಅರ್ಜುನ್ ಅವರು ಬರಹ ಪೂರ್ಣಗೊಳಿಸಿದ್ದಾರೆ.

ಕಾಲ್ತುಳಿದ ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್​ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಆದೇಶಿಸಲಾಗಿತ್ತು. ಆದರೆ ಮಧ್ಯಂತರ ಜಾಮೀನು ಸಿಕ್ಕಿದ್ದರಿಂದ ಅಲ್ಲು ಅರ್ಜುನ್ ಅವರಿಗೆ ರಿಲೀಫ್​ ಸಿಕ್ಕಿತು. ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಕ್ಕೆ ತೆಲಂಗಾಣ ಸರ್ಕಾರವನ್ನು ಅನೇಕರು ಟೀಕಿಸಿದ್ದಾರೆ. ಇನ್ನೊಂದೆಡೆ, ‘ಪುಷ್ಪ 2’ ಸಿನಿಮಾ ಸೂಪರ್​ ಹಿಟ್​ ಆಗಿದೆ. ವಿಶ್ವಾದ್ಯಂತ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಅಲ್ಲು ಅರ್ಜುನ್ ಅವರ ವೃತ್ತಿಜೀವನದ ಅತಿ ದೊಡ್ಡ ಸಕ್ಸಸ್​ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!