AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

ಅಲ್ಲು ಅರ್ಜುನ್​ ಅವರು ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ‘ಪುಷ್ಪ’ ಗೆಲುವಿನ ಬಳಿಕ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆದರು. ಈಗ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ತೆರೆಕಾಣುವುದಕ್ಕೂ ಮೊದಲೇ ಅವರ ಸಂಭಾವನೆ ಏರಿಕೆ ಆಗಿದೆ. ಅಲ್ಲು ಅರ್ಜುನ್​ ಅವರು 150 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Apr 25, 2024 | 10:43 PM

Share

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ (Pushpa 2) ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣ ತೊಡಗಿಕೊಂಡಿದ್ದಾರೆ. ರಿಲೀಸ್​ ದಿನಾಂಕ ಹತ್ತಿರ ಆದಂತೆಲ್ಲ ಹೈಪ್​ ಹೆಚ್ಚಾಗುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ದೊಡ್ಡ ಮ್ಯಾಜಿಕ್​ ಮಾಡುವ ಲಕ್ಷಣ ಕಾಣಿಸುತ್ತಿದೆ. ಬಿಡುಗಡೆಗೂ ಮುನ್ನವೇ ಬೇರೆ ಬೇರೆ ಮೂಲಗಳಿಂದ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಇಷ್ಟೆಲ್ಲ ಕ್ರೇಜ್​ ಸೃಷ್ಟಿ ಆಗಿರುವುದರಿಂದ ಅಲ್ಲು ಅರ್ಜುನ್​ (Allu Arjun) ಅವರು ಸಂಬಳ ಜಾಸ್ತಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ಸಿನಿಮಾಗಳು ಸೂಪರ್​ ಹಿಟ್​ ಆದ ಬಳಿಕ ನಟರ ಸಂಭಾವನೆ ಜಾಸ್ತಿ ಆಗುವುದು ಸಹಜ. ಆದರೆ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಬಿಡುಗಡೆಗೂ ಮುನ್ನವೇ ಬರೋಬ್ಬರಿ 150 ಕೋಟಿ ರೂಪಾಯಿಗೆ ತಮ್ಮ ಸಂಭಾವನೆ ಏರಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟು ದಿನಗಳ ಕಾಲ ಅವರು 100 ಕೋಟಿ ರೂಪಾಯಿ ಪಡೆಯುತ್ತಿದ್ದರು. ಈಗ 150 ಕೋಟಿ ಡಿಮ್ಯಾಂಡ್​ ಮಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಅಲ್ಲು ಅರ್ಜುನ್​ ಅವರ ಚಾರ್ಮ್​ ಹೆಚ್ಚಲು ಬರೀ ಮಾರುಕಟ್ಟೆ ಮಾತ್ರ ಕಾರಣವಲ್ಲ. ಪ್ರತಿಭೆಯ ದೃಷ್ಟಿಯಿಂದಲೂ ಅವರ ಹವಾ ಹೆಚ್ಚಾಗಿದೆ. ‘ಪುಷ್ಪ’ ಸಿನಿಮಾದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ದುಬೈನ ಮೇಡಂ ಟುಸಾಡ್ಸ್​ ಮ್ಯೂಸಿಯಂನಲ್ಲಿ ಅವರ ಮೇಣದ ಪ್ರತಿಮೆ ನಿರ್ಮಾಣ ಆಗಿದೆ. ಅದರಿಂದ ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಬಂದಿದೆ. ಈ ಎಲ್ಲ ಕಾರಣದಿಂದಲೂ ಅವರ ಬೇಡಿಕೆ ಡಬಲ್​ ಆಗಿದೆ. ‘ಪುಷ್ಪ 2’ ನಂತರ ಅವರು ನಟಿಸಲಿರುವ ಸಿನಿಮಾಗಳ ಬಜೆಟ್​ ಖಂಡಿತವಾಗಿ ಮುಗಿಲು ಮುಟ್ಟಲಿದೆ. ಅದರಲ್ಲಿ ಹೆಚ್ಚಿನ ಪಾಲು ಅಲ್ಲು ಅರ್ಜುನ್​ ಅವರ ಸಂಭಾವನೆಗೆ ಸೇರಲಿದೆ.

ಇದನ್ನೂ ಓದಿ: 51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ

ಆಗಸ್ಟ್ 15ರಂದು ‘ಪುಷ್ಪ 2’ ತೆರೆಕಾಣಲಿದೆ. ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಮೇ 1ರಂದು ಮೊದಲ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸುಕುಮಾರ್​ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಅಲ್ಲು ಅರ್ಜುನ್​ಗೆ ರಶ್ಮಿಕಾ ಮಂದಣ್ಣ ಜೋಡಿ ಆಗಿದ್ದಾರೆ. ಅವರು ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರದ ಮೇಲೆ ಕೂಡ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾ ತೆರೆಕಂಡ ನಂತರ ರಶ್ಮಿಕಾ ಮಂದಣ್ಣ ಸಹ ಸಂಭಾವನೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ‘ಪುಷ್ಪ 2’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು