AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​

‘ಇಂದು ಮೇಣದ ಪ್ರತಿಮೆ ಅನಾವರಣ. ಪ್ರತಿಯೊಬ್ಬ ನಟನಿಗೂ ಇದು ಮೈಲುಗಲ್ಲಿನ ಕ್ಷಣ. ಇದಕ್ಕಾಗಿ ಧನ್ಯವಾದಗಳು’ ಎಂಬ ಕ್ಯಾಪ್ಷನ್​ ಜೊತೆ ನಟ ಅಲ್ಲು ಅರ್ಜುನ್​ ಅವರು ಮೇಣದ ಪ್ರತಿಮೆಯ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಗೌರವ ಪಡೆದ ಅವರಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಹಾಗೂ ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 28, 2024 | 5:16 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ‘ಪುಷ್ಪ’ ಸಿನಿಮಾ ಬಿಡುಗಡೆ ಆದ ಬಳಿಕ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಆ ಸಿನಿಮಾದ ನಟನೆಗಾಗಿ ಅವರು ರಾಷ್ಟ್ರ ಪ್ರಶಸ್ತಿ ಪಡೆದ ನಂತರವಂತೂ ಜನಪ್ರಿಯತೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ಅವರ ಮುಡಿಗೆ ಇನ್ನೊಂದು ಗರಿ ಸೇರ್ಪಡೆ ಆಗಿದೆ. ದುಬೈನಲ್ಲಿ ಅವರ ಮೇಣದ ಪ್ರತಿಮೆಯನ್ನು (Allu Arjun Wax Statue) ಅನಾವರಣ ಮಾಡಲಾಗಿದೆ. ಸ್ವತಃ ಅಲ್ಲು ಅರ್ಜುನ್​ ಅವರು ದುಬೈನ ಮೇಡಂ ಟುಸ್ಸಾಡ್ಸ್​ (Madame Tussauds) ಮ್ಯೂಸಿಯಂಗೆ ತೆರಳಿ ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅದರ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಗಣ್ಯರಿಗೆ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂ ಕಡೆಯಿಂದ ಮೇಣದ ಪ್ರತಿಮೆಯ ಗೌರವ ನೀಡಲಾಗುತ್ತದೆ. ಚಿತ್ರರಂಗದಲ್ಲಿ ಸಾಧನೆ ಮಾಡಿದ ಅನೇಕ ಸೆಲೆಬ್ರಿಟಿಗಳನ್ನು ಈ ರೀತಿ ಗೌರವಿಸಲಾಗಿದೆ. ಈಗ ಅಲ್ಲು ಅರ್ಜುನ್​ ಅವರಿಗೂ ಮೇಣದ ಪ್ರತಿಮೆಯ ಗೌರವ ಸಿಕ್ಕಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ಅಲ್ಲು ಅರ್ಜುನ್​ ಹಂಚಿಕೊಂಡ ಫೋಟೋ ಎಲ್ಲ ಕಡೆ ವೈರಲ್​ ಆಗಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾದ ರೀತಿಯಲ್ಲಿ ಅಲ್ಲು ಅರ್ಜುನ್​ ಅವರ ಈ ಪ್ರತಿಮೆ ನಿರ್ಮಾಣ ಆಗಿದೆ. ಕುಟುಂಬ ಸಮೇತರಾಗಿ ದುಬೈಗೆ ತೆರಳಿರುವ ಅವರು ತಮ್ಮದೇ ಪ್ರತಿಮೆಯ ಪಕ್ಕದಲ್ಲಿ ನಿಂತು ಅದೇ ರೀತಿ ಪೋಸ್​ ನೀಡಿದ್ದಾರೆ. ಸದ್ಯಕ್ಕೆ ಪ್ರತಿಮೆಯ ಹಿಂಬದಿ ಫೋಟೋ ಮಾತ್ರ ಅನಾವರಣ ಆಗಿದೆ. ಮುಂಬದಿಯ ಫೋಟೋಗಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಅದು ಕೂಡ ಶೀಘ್ರವೇ ರಿವೀಲ್​ ಆಗಲಿದೆ.

‘ಮೇಡಂ ಟುಸ್ಸಾಡ್ಸ್​ನಲ್ಲಿ ಇಂದು ಮೇಣದ ಪ್ರತಿಮೆಯ ಅನಾವರಣ. ಪ್ರತಿ ಕಲಾವಿದರಿಗೂ ಇದು ಮೈಲುಗಲ್ಲಿನ ಕ್ಷಣ. ಧನ್ಯವಾದಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅಲ್ಲು ಅರ್ಜುನ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಅಪರೂಪದ ಗೌರವ ಪಡೆದಿರುವ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ಪ್ರತಿಮೆಯಿಂದಾಗಿ ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ.

ಇದನ್ನೂ ಓದಿ: ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರ ನಡುವೆ ಬ್ರೇಕ್​ ಪಡೆದುಕೊಂಡು ಅವರು ದುಬೈಗೆ ಹೋಗಿದ್ದಾರೆ. ಅವರಿಗೆ ಪತ್ನಿ ಅಲ್ಲು ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಕೂಡ ಸಾಥ್​ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?