AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​

‘ಇಂದು ಮೇಣದ ಪ್ರತಿಮೆ ಅನಾವರಣ. ಪ್ರತಿಯೊಬ್ಬ ನಟನಿಗೂ ಇದು ಮೈಲುಗಲ್ಲಿನ ಕ್ಷಣ. ಇದಕ್ಕಾಗಿ ಧನ್ಯವಾದಗಳು’ ಎಂಬ ಕ್ಯಾಪ್ಷನ್​ ಜೊತೆ ನಟ ಅಲ್ಲು ಅರ್ಜುನ್​ ಅವರು ಮೇಣದ ಪ್ರತಿಮೆಯ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಗೌರವ ಪಡೆದ ಅವರಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಹಾಗೂ ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 28, 2024 | 5:16 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ‘ಪುಷ್ಪ’ ಸಿನಿಮಾ ಬಿಡುಗಡೆ ಆದ ಬಳಿಕ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಆ ಸಿನಿಮಾದ ನಟನೆಗಾಗಿ ಅವರು ರಾಷ್ಟ್ರ ಪ್ರಶಸ್ತಿ ಪಡೆದ ನಂತರವಂತೂ ಜನಪ್ರಿಯತೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ಅವರ ಮುಡಿಗೆ ಇನ್ನೊಂದು ಗರಿ ಸೇರ್ಪಡೆ ಆಗಿದೆ. ದುಬೈನಲ್ಲಿ ಅವರ ಮೇಣದ ಪ್ರತಿಮೆಯನ್ನು (Allu Arjun Wax Statue) ಅನಾವರಣ ಮಾಡಲಾಗಿದೆ. ಸ್ವತಃ ಅಲ್ಲು ಅರ್ಜುನ್​ ಅವರು ದುಬೈನ ಮೇಡಂ ಟುಸ್ಸಾಡ್ಸ್​ (Madame Tussauds) ಮ್ಯೂಸಿಯಂಗೆ ತೆರಳಿ ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅದರ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಗಣ್ಯರಿಗೆ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂ ಕಡೆಯಿಂದ ಮೇಣದ ಪ್ರತಿಮೆಯ ಗೌರವ ನೀಡಲಾಗುತ್ತದೆ. ಚಿತ್ರರಂಗದಲ್ಲಿ ಸಾಧನೆ ಮಾಡಿದ ಅನೇಕ ಸೆಲೆಬ್ರಿಟಿಗಳನ್ನು ಈ ರೀತಿ ಗೌರವಿಸಲಾಗಿದೆ. ಈಗ ಅಲ್ಲು ಅರ್ಜುನ್​ ಅವರಿಗೂ ಮೇಣದ ಪ್ರತಿಮೆಯ ಗೌರವ ಸಿಕ್ಕಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ಅಲ್ಲು ಅರ್ಜುನ್​ ಹಂಚಿಕೊಂಡ ಫೋಟೋ ಎಲ್ಲ ಕಡೆ ವೈರಲ್​ ಆಗಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾದ ರೀತಿಯಲ್ಲಿ ಅಲ್ಲು ಅರ್ಜುನ್​ ಅವರ ಈ ಪ್ರತಿಮೆ ನಿರ್ಮಾಣ ಆಗಿದೆ. ಕುಟುಂಬ ಸಮೇತರಾಗಿ ದುಬೈಗೆ ತೆರಳಿರುವ ಅವರು ತಮ್ಮದೇ ಪ್ರತಿಮೆಯ ಪಕ್ಕದಲ್ಲಿ ನಿಂತು ಅದೇ ರೀತಿ ಪೋಸ್​ ನೀಡಿದ್ದಾರೆ. ಸದ್ಯಕ್ಕೆ ಪ್ರತಿಮೆಯ ಹಿಂಬದಿ ಫೋಟೋ ಮಾತ್ರ ಅನಾವರಣ ಆಗಿದೆ. ಮುಂಬದಿಯ ಫೋಟೋಗಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಅದು ಕೂಡ ಶೀಘ್ರವೇ ರಿವೀಲ್​ ಆಗಲಿದೆ.

‘ಮೇಡಂ ಟುಸ್ಸಾಡ್ಸ್​ನಲ್ಲಿ ಇಂದು ಮೇಣದ ಪ್ರತಿಮೆಯ ಅನಾವರಣ. ಪ್ರತಿ ಕಲಾವಿದರಿಗೂ ಇದು ಮೈಲುಗಲ್ಲಿನ ಕ್ಷಣ. ಧನ್ಯವಾದಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅಲ್ಲು ಅರ್ಜುನ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಅಪರೂಪದ ಗೌರವ ಪಡೆದಿರುವ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ಪ್ರತಿಮೆಯಿಂದಾಗಿ ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ.

ಇದನ್ನೂ ಓದಿ: ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರ ನಡುವೆ ಬ್ರೇಕ್​ ಪಡೆದುಕೊಂಡು ಅವರು ದುಬೈಗೆ ಹೋಗಿದ್ದಾರೆ. ಅವರಿಗೆ ಪತ್ನಿ ಅಲ್ಲು ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಕೂಡ ಸಾಥ್​ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ