AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​

‘ಇಂದು ಮೇಣದ ಪ್ರತಿಮೆ ಅನಾವರಣ. ಪ್ರತಿಯೊಬ್ಬ ನಟನಿಗೂ ಇದು ಮೈಲುಗಲ್ಲಿನ ಕ್ಷಣ. ಇದಕ್ಕಾಗಿ ಧನ್ಯವಾದಗಳು’ ಎಂಬ ಕ್ಯಾಪ್ಷನ್​ ಜೊತೆ ನಟ ಅಲ್ಲು ಅರ್ಜುನ್​ ಅವರು ಮೇಣದ ಪ್ರತಿಮೆಯ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಗೌರವ ಪಡೆದ ಅವರಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಹಾಗೂ ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 28, 2024 | 5:16 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ‘ಪುಷ್ಪ’ ಸಿನಿಮಾ ಬಿಡುಗಡೆ ಆದ ಬಳಿಕ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಆ ಸಿನಿಮಾದ ನಟನೆಗಾಗಿ ಅವರು ರಾಷ್ಟ್ರ ಪ್ರಶಸ್ತಿ ಪಡೆದ ನಂತರವಂತೂ ಜನಪ್ರಿಯತೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ಅವರ ಮುಡಿಗೆ ಇನ್ನೊಂದು ಗರಿ ಸೇರ್ಪಡೆ ಆಗಿದೆ. ದುಬೈನಲ್ಲಿ ಅವರ ಮೇಣದ ಪ್ರತಿಮೆಯನ್ನು (Allu Arjun Wax Statue) ಅನಾವರಣ ಮಾಡಲಾಗಿದೆ. ಸ್ವತಃ ಅಲ್ಲು ಅರ್ಜುನ್​ ಅವರು ದುಬೈನ ಮೇಡಂ ಟುಸ್ಸಾಡ್ಸ್​ (Madame Tussauds) ಮ್ಯೂಸಿಯಂಗೆ ತೆರಳಿ ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅದರ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಗಣ್ಯರಿಗೆ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂ ಕಡೆಯಿಂದ ಮೇಣದ ಪ್ರತಿಮೆಯ ಗೌರವ ನೀಡಲಾಗುತ್ತದೆ. ಚಿತ್ರರಂಗದಲ್ಲಿ ಸಾಧನೆ ಮಾಡಿದ ಅನೇಕ ಸೆಲೆಬ್ರಿಟಿಗಳನ್ನು ಈ ರೀತಿ ಗೌರವಿಸಲಾಗಿದೆ. ಈಗ ಅಲ್ಲು ಅರ್ಜುನ್​ ಅವರಿಗೂ ಮೇಣದ ಪ್ರತಿಮೆಯ ಗೌರವ ಸಿಕ್ಕಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ಅಲ್ಲು ಅರ್ಜುನ್​ ಹಂಚಿಕೊಂಡ ಫೋಟೋ ಎಲ್ಲ ಕಡೆ ವೈರಲ್​ ಆಗಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾದ ರೀತಿಯಲ್ಲಿ ಅಲ್ಲು ಅರ್ಜುನ್​ ಅವರ ಈ ಪ್ರತಿಮೆ ನಿರ್ಮಾಣ ಆಗಿದೆ. ಕುಟುಂಬ ಸಮೇತರಾಗಿ ದುಬೈಗೆ ತೆರಳಿರುವ ಅವರು ತಮ್ಮದೇ ಪ್ರತಿಮೆಯ ಪಕ್ಕದಲ್ಲಿ ನಿಂತು ಅದೇ ರೀತಿ ಪೋಸ್​ ನೀಡಿದ್ದಾರೆ. ಸದ್ಯಕ್ಕೆ ಪ್ರತಿಮೆಯ ಹಿಂಬದಿ ಫೋಟೋ ಮಾತ್ರ ಅನಾವರಣ ಆಗಿದೆ. ಮುಂಬದಿಯ ಫೋಟೋಗಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಅದು ಕೂಡ ಶೀಘ್ರವೇ ರಿವೀಲ್​ ಆಗಲಿದೆ.

‘ಮೇಡಂ ಟುಸ್ಸಾಡ್ಸ್​ನಲ್ಲಿ ಇಂದು ಮೇಣದ ಪ್ರತಿಮೆಯ ಅನಾವರಣ. ಪ್ರತಿ ಕಲಾವಿದರಿಗೂ ಇದು ಮೈಲುಗಲ್ಲಿನ ಕ್ಷಣ. ಧನ್ಯವಾದಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅಲ್ಲು ಅರ್ಜುನ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಇಂಥ ಅಪರೂಪದ ಗೌರವ ಪಡೆದಿರುವ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ಪ್ರತಿಮೆಯಿಂದಾಗಿ ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ.

ಇದನ್ನೂ ಓದಿ: ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರ ನಡುವೆ ಬ್ರೇಕ್​ ಪಡೆದುಕೊಂಡು ಅವರು ದುಬೈಗೆ ಹೋಗಿದ್ದಾರೆ. ಅವರಿಗೆ ಪತ್ನಿ ಅಲ್ಲು ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಕೂಡ ಸಾಥ್​ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ