AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಬರೋ ವ್ಯಕ್ತಿ ಯಾರು? ರಿವೀಲ್ ಆಯ್ತು ಹೀರೋ ಹೆಸರು

‘ಪುಷ್ಪ 2’ ಕ್ಲೈಮ್ಯಾಕ್ಸ್ ಸಾಕಷ್ಟು ಚರ್ಚೆ ಆಗಿದೆ. ಕ್ಲೈಮ್ಯಾಕ್ಸ್ ವೇಳೆ ಓರ್ವ ವ್ಯಕ್ತಿಯ ಆಗಮನ ಆಗುತ್ತದೆ. ಅದು ಯಾರು ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕೆಲವರು ಈ ವ್ಯಕ್ತಿ ವಿಜಯ್ ದೇವರಕೊಂಡ ಎಂದು ಹೇಳುತ್ತಿದ್ದಾರೆ. ಆದರೆ, ಅದು ನಿಜ ಅಲ್ಲ ಎನ್ನಲಾಗುತ್ತಿದೆ.

‘ಪುಷ್ಪ 2’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಬರೋ ವ್ಯಕ್ತಿ ಯಾರು? ರಿವೀಲ್ ಆಯ್ತು ಹೀರೋ ಹೆಸರು
ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on:Dec 09, 2024 | 2:55 PM

Share

‘ಪುಷ್ಪ 2’ ಚಿತ್ರದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಈ ಸಿನಿಮಾದಲ್ಲಿ ಬರುವ ಪ್ರತಿ ಪಾತ್ರಗಳೂ ತೆರೆಮೆಲೆ ಗಮನ ಸೆಳೆದಿವೆ. ‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಓರ್ವ ಪಾತ್ರಧಾರಿಯ ಆಗಮನ ಆಗುತ್ತದೆ. ಅನೇಕರು ಈ ಪಾತ್ರವನ್ನು ವಿಜಯ್ ದೇವರಕೊಂಡು ಎಂದು ಹೇಳುತ್ತಿದ್ದಾರೆ. ಈಗ ಈ ಪಾತ್ರ ಯಾವುದು ಎಂಬ ವಿಚಾರ ರಿವೀಲ್ ಆಗಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿದೆ ವಿವರ. (Spoilor Alert: ಈ ಪಾತ್ರದ ಬಗ್ಗೆ ಹೇಳಬೇಕಾದರೆ ಕೆಲವು ವಿಚಾರಗಳನ್ನು ಹೇಳಲೇಬೇಕಿದೆ. ಹೀಗಾಗಿ, ನೀವಿನ್ನೂ ಸಿನಿಮಾ ನೋಡದೇ ಇದ್ದರೆ ಚಿತ್ರ ವೀಕ್ಷಿಸಿದ ಬಳಿಕ ಸ್ಟೋರಿ ಓದಿ. )

‘ಪುಷ್ಪ 2’ ಕ್ಲೈಮ್ಯಾಕ್ಸ್ ಸಾಕಷ್ಟು ಚರ್ಚೆ ಆಗಿದೆ. ಕ್ಲೈಮ್ಯಾಕ್ಸ್ ವೇಳೆ ಓರ್ವ ವ್ಯಕ್ತಿಯ ಆಗಮನ ಆಗುತ್ತದೆ. ಅದು ಯಾರು ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ಪುಷ್ಪ 3’ ಚಿತ್ರದಲ್ಲಿ ವಿಜಯ್ ನಟಿಸುತ್ತಿದ್ದಾರೆ ಎಂಬ ಮಾತಿದೆ. ಈ ಕಾರಣಕ್ಕೆ ಅನೇಕರು ಇದು ವಿಜಯ್ ದೇವರಕೊಂಡ ಎಂದು ಹೇಳುತ್ತಿದ್ದಾರೆ. ಆದರೆ, ಅದು ನಿಜ ಅಲ್ಲ ಎನ್ನಲಾಗುತ್ತಿದೆ. ಆ ವ್ಯಕ್ತಿ ಯಾರು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಪುಷ್ಪರಾಜ್ ಹಾಗೂ ಶ್ರೀವಲ್ಲಿ ಕುಟುಂಬ ಸಂತೋಷದಿಂದ ಕಾಲ ಕಳೆಯುತ್ತಾ ಇರುತ್ತದೆ. ಶ್ರೀವಲ್ಲಿ ಪ್ರೆಗ್ನೆಂಟ್ ಕೂಡ ಆಗಿದ್ದಾಳೆ. ಕ್ಲೈಮ್ಯಾಕ್ಸ್​ನಲ್ಲಿ ಇವರು ಕುಟುಂಬದ ಮದುವೆಯಲ್ಲಿ ಇರುವಾಗ ಬಾಂಬ್ ಸ್ಫೋಟ ಆಗುತ್ತದೆ. ದೂರದಲ್ಲಿ ನಿಂತು ಇದನ್ನು ಮಾಡಿದ್ದು ಓರ್ವ ವ್ಯಕ್ತಿ. ಆ ವ್ಯಕ್ತಿಯ ಮುಖವನ್ನು ತೋರಿಸಿಲ್ಲ. ಕೆಲವು ವರದಿಗಳ ಪ್ರಕಾರ ಇದು ಬೇರೆ ಯಾರೂ ಅಲ್ಲ, ಫಹಾದ್ ಫಾಸಿಲ್ ಅವರೇ ಎಂದು ಹೇಳಲಾಗಿದೆ.

ಫಹಾದ್ ಫಾಸಿಲ್ ಅವರು ಎಸ್​ಪಿ ಬನ್ವರ್ ಸಿಂಗ್ ಶೇಖಾವತ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುಷ್ಪರಾಜ್​​ನಿಂದ ಸಾಕಷ್ಟು ಹಿನ್ನಡೆ ಅನುಭವಿಸುವ ಈತ ತನ್ನನ್ನು ತಾನೇ ಸುಟ್ಟುಕೊಳ್ಳುತ್ತಾನೆ. ಆದರೆ, ಈ ಘಟನೆಯಲ್ಲಿ ಆತ ಸತ್ತಿರೋದಿಲ್ಲ ಎನ್ನಲಾಗುತ್ತಿದೆ. ಕೊನೆಯಲ್ಲಿ ಪುಷ್ಪರಾಜ್ ಕುಟುಂಬದ ಖುಷಿಯನ್ನು ಹಾಳು ಮಾಡೋದು ಇದೇ ವ್ಯಕ್ತಿ ಎನ್ನಲಾಗಿದೆ.

ಇದನ್ನೂ ಓದಿ: ಭಾನುವಾರ ಬಾಕ್ಸ್ ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್

ಕೊನೆಯಲ್ಲಿ ಕಾಣಿಸಿಕೊಳ್ಳುವ ವ್ಯಕ್ತಿಯ ಕೈ ತೆಳ್ಳಗಿದೆ. ಕೈಮೇಲೆ ಸುಟ್ಟಗಾಯಗಳಿವೆ. ಈ ಎಲ್ಲಾ ಕಾರಣದಿಂದ ಶೇಖಾವತ್ ಬದುಕಿ ಬಂದು ಪುಷ್ಪರಾಜ್ ಕುಟುಂಬವನ್ನು ನಾಶ ಮಾಡಲು ಪ್ರಯತ್ನಿಸುತ್ತಾನೆ ಎನ್ನಲಾಗಿದೆ. ಈ ಮೂಲಕ ಹಗೆ ತೀರಿಸಿಕೊಳ್ಳುತ್ತಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:41 pm, Mon, 9 December 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!