AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸ್ಟಾರ್​ ನಿರ್ದೇಶಕ ಸುಕುಮಾರ್​ ಅವರು ನಟ ರಾಮ್​ ಚರಣ್​ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಮತ್ತೆ ಅವರಿಬ್ಬರು ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇದು ರಾಮ್​ ಚರಣ್​ ನಟನೆಯ 17ನೇ ಸಿನಿಮಾ ಆಗಲಿದೆ. ದೇವಿಶ್ರೀ ಪ್ರಸಾದ್​ ಸಂಗೀತ ನೀಡಲಿದ್ದಾರೆ.

‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ
ರಾಮ್​ ಚರಣ್​, ಸುಕುಮಾರ್​
ಮದನ್​ ಕುಮಾರ್​
|

Updated on: Mar 25, 2024 | 6:50 PM

Share

ನಟ ರಾಮ್​ ಚರಣ್​ (Ram Charan) ಅವರ ಅಭಿಮಾನಿಗಳಿಗೆ ಹೋಳಿ ಹಬ್ಬದ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಅವರನ್ನು ಪ್ರೀತಿಯಿಂದ ‘ಗ್ಲೋಬಲ್ ಸ್ಟಾರ್’ ಎಂದು ಕರೆಯುತ್ತಿದ್ದಾರೆ. ಪ್ರಸ್ತುತ ರಾಮ್​ ಚರಣ್​ ಅವರು ‘ಗೇಮ್ ಚೇಂಜರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಅವರ ಮುಂದಿನ ಸಿನಿಮಾಗಳ ಬಗ್ಗೆ ಎಗ್ಸೈಟಿಂಗ್​ ಮಾಹಿತಿ ಹೊರಬಿದ್ದಿದೆ. ರಾಮ್​ ಚರಣ್​ ನಟಿಸಲಿರುವ 17ನೇ ಸಿನಿಮಾಗೆ ಸುಕುಮಾರ್​ (Sukumar) ಅವರು ನಿರ್ದೇಶನ ಮಾಡಲಿದ್ದಾರೆ.

ರಾಮ್​ ಚರಣ್​ ಅವರ 15ನೇ ಚಿತ್ರವಾಗಿ ‘ಗೇಮ್​ ಚೇಂಜರ್​’ ಮೂಡಿಬರುತ್ತಿವೆ. 16ನೇ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಲಿದ್ದು ಕೆಲವೇ ದಿನಗಳ ಹಿಂದೆ ಆ ಚಿತ್ರಕ್ಕೆ ಮುಹೂರ್ತ ನೆರವೇರಿತು. ಅದರ ಬೆನ್ನಲ್ಲೇ ರಾಮ್ ಚರಣ್​ ನಟನೆಯ 17ನೇ ಸಿನಿಮಾ ಅನೌನ್ಸ್​ ಆಗಿದೆ. ಆ ಸಿನಿಮಾಗೆ ಸುಕುಮಾರ್​ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂಬುದು ತಿಳಿದು ಅಭಿಮಾನಿಗಳ ಖುಷಿ ಡಬಲ್​ ಆಗಿದೆ.

ಸುಕುಮಾರ್​ ಮತ್ತು ರಾಮ್​ ಚರಣ್​ ಅವರು ಜೊತೆಯಾಗಿ ‘ರಂಗಸ್ಥಲಂ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಯಶಸ್ವಿ ಆಗಿತ್ತು. ಈಗ ಸುಕುಮಾರ್​ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು. ಆ ಬಳಿಕ ಸುಕುಮಾರ್​ ಅವರು ರಾಮ್​ ಚರಣ್​ ಜೊತೆಗಿನ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

ರಾಮ್​ ಚರಣ್​ ಮತ್ತು ಸುಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ರಂಗಸ್ಥಲಂ’ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಈಗ ಅವರಿಬ್ಬರ ಜೊಸ ಸಿನಿಮಾ ಕೂಡ ಇದೇ ಪ್ರೊಡಕ್ಷನ್ಸ್​ ಹೌಸ್​ ಮೂಲಕ ನಿರ್ಮಾಣ ಆಗಲಿದೆ. ‘ಮೈತ್ರಿ ಮೂವೀ ಮೇಕರ್ಸ್’ ಮತ್ತು ‘ಸುಕುಮಾರ್ ರೈಟಿಂಗ್’ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಲಿವೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಸಿದ್ಧವಾಗಲಿದೆ. ಇನ್ನು, ‘ಪುಷ್ಪ’, ‘ರಂಗಸ್ಥಲಂ’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದ ದೇವಿಶ್ರೀ ಪ್ರಸಾದ್​ ಅವರೇ ಆರ್​ಸಿ17 ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು