‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸ್ಟಾರ್​ ನಿರ್ದೇಶಕ ಸುಕುಮಾರ್​ ಅವರು ನಟ ರಾಮ್​ ಚರಣ್​ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಮತ್ತೆ ಅವರಿಬ್ಬರು ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇದು ರಾಮ್​ ಚರಣ್​ ನಟನೆಯ 17ನೇ ಸಿನಿಮಾ ಆಗಲಿದೆ. ದೇವಿಶ್ರೀ ಪ್ರಸಾದ್​ ಸಂಗೀತ ನೀಡಲಿದ್ದಾರೆ.

‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ
ರಾಮ್​ ಚರಣ್​, ಸುಕುಮಾರ್​
Follow us
|

Updated on: Mar 25, 2024 | 6:50 PM

ನಟ ರಾಮ್​ ಚರಣ್​ (Ram Charan) ಅವರ ಅಭಿಮಾನಿಗಳಿಗೆ ಹೋಳಿ ಹಬ್ಬದ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಅವರನ್ನು ಪ್ರೀತಿಯಿಂದ ‘ಗ್ಲೋಬಲ್ ಸ್ಟಾರ್’ ಎಂದು ಕರೆಯುತ್ತಿದ್ದಾರೆ. ಪ್ರಸ್ತುತ ರಾಮ್​ ಚರಣ್​ ಅವರು ‘ಗೇಮ್ ಚೇಂಜರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಅವರ ಮುಂದಿನ ಸಿನಿಮಾಗಳ ಬಗ್ಗೆ ಎಗ್ಸೈಟಿಂಗ್​ ಮಾಹಿತಿ ಹೊರಬಿದ್ದಿದೆ. ರಾಮ್​ ಚರಣ್​ ನಟಿಸಲಿರುವ 17ನೇ ಸಿನಿಮಾಗೆ ಸುಕುಮಾರ್​ (Sukumar) ಅವರು ನಿರ್ದೇಶನ ಮಾಡಲಿದ್ದಾರೆ.

ರಾಮ್​ ಚರಣ್​ ಅವರ 15ನೇ ಚಿತ್ರವಾಗಿ ‘ಗೇಮ್​ ಚೇಂಜರ್​’ ಮೂಡಿಬರುತ್ತಿವೆ. 16ನೇ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಲಿದ್ದು ಕೆಲವೇ ದಿನಗಳ ಹಿಂದೆ ಆ ಚಿತ್ರಕ್ಕೆ ಮುಹೂರ್ತ ನೆರವೇರಿತು. ಅದರ ಬೆನ್ನಲ್ಲೇ ರಾಮ್ ಚರಣ್​ ನಟನೆಯ 17ನೇ ಸಿನಿಮಾ ಅನೌನ್ಸ್​ ಆಗಿದೆ. ಆ ಸಿನಿಮಾಗೆ ಸುಕುಮಾರ್​ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂಬುದು ತಿಳಿದು ಅಭಿಮಾನಿಗಳ ಖುಷಿ ಡಬಲ್​ ಆಗಿದೆ.

ಸುಕುಮಾರ್​ ಮತ್ತು ರಾಮ್​ ಚರಣ್​ ಅವರು ಜೊತೆಯಾಗಿ ‘ರಂಗಸ್ಥಲಂ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಯಶಸ್ವಿ ಆಗಿತ್ತು. ಈಗ ಸುಕುಮಾರ್​ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು. ಆ ಬಳಿಕ ಸುಕುಮಾರ್​ ಅವರು ರಾಮ್​ ಚರಣ್​ ಜೊತೆಗಿನ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

ರಾಮ್​ ಚರಣ್​ ಮತ್ತು ಸುಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ರಂಗಸ್ಥಲಂ’ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಈಗ ಅವರಿಬ್ಬರ ಜೊಸ ಸಿನಿಮಾ ಕೂಡ ಇದೇ ಪ್ರೊಡಕ್ಷನ್ಸ್​ ಹೌಸ್​ ಮೂಲಕ ನಿರ್ಮಾಣ ಆಗಲಿದೆ. ‘ಮೈತ್ರಿ ಮೂವೀ ಮೇಕರ್ಸ್’ ಮತ್ತು ‘ಸುಕುಮಾರ್ ರೈಟಿಂಗ್’ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಲಿವೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಸಿದ್ಧವಾಗಲಿದೆ. ಇನ್ನು, ‘ಪುಷ್ಪ’, ‘ರಂಗಸ್ಥಲಂ’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದ ದೇವಿಶ್ರೀ ಪ್ರಸಾದ್​ ಅವರೇ ಆರ್​ಸಿ17 ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್