Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್

ನಟ ಅಲ್ಲು ಅರ್ಜುನ್ ಅವರು ಪುಷ್ಪ ರಾಜ್ ಪಾತ್ರಕ್ಕೆ ಜೀವ ತುಂಬಿದರು. ಅದು ಒಬ್ಬ ನಿಜವಾದ ಸ್ಮಗ್ಲರ್​ನ ಹೆಸರು ಎಂದು ಸುಕುಮಾರ್ ಹೇಳಿದ್ದಾರೆ. ಆ ಸ್ಮಗರ್​ನನ್ನು ಸುಕುಮಾರ್​ ಅವರು ಭೇಟಿ ಆಗಿದ್ದರು. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸುಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ.

ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್
Allu Arjun, Sukumar
Follow us
ಮದನ್​ ಕುಮಾರ್​
|

Updated on:Apr 03, 2025 | 6:47 PM

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳು ಮಾಡಿದ ಮೋಡಿ ಸಣ್ಣದಲ್ಲ. ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿತು. ನಿರ್ದೇಶಕ ಸುಕುಮಾರ್​ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದರು. ರಕ್ತಚಂದನದ ಸ್ಮಗ್ಲಿಂಗ್ ಬಗ್ಗೆ ‘ಪುಷ್ಪ 2’ ಸಿನಿಮಾದ ಕಥೆ ಇದೆ. ಅಷ್ಟಕ್ಕೂ ಈ ಸಿನಿಮಾದ ಕಥಾನಾಯಕನ ಪಾತ್ರ ಹುಟ್ಟಿದ್ದು ಹೇಗೆ ಎಂಬುದನ್ನು ನಿರ್ದೇಶಕ ಸುಕುಮಾರ್ (Sukumar) ಅವರು ಈಗ ತಿಳಿಸಿದ್ದಾರೆ. ಆ ಪಾತ್ರಕ್ಕೆ ಒಬ್ಬ ನಿಜವಾದ ಸ್ಮಗ್ಲರ್ ಕಾರಣ ಎಂದು ಅವರು ಹೇಳಿದ್ದಾರೆ.

ನಿರ್ದೇಶಕ ಸುಕುಮಾರ್ ಅವರು ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ‘ಪುಷ್ಪ 2’ ಸಿನಿಮಾದ ತೆರೆ ಹಿಂದಿನ ವಿಷಯಗಳ ಬಗ್ಗೆ ಮಾತನಾಡಿದರು. ‘ದಕ್ಷಿಣ ಭಾರತದಲ್ಲಿ ದಶಕಗಳ ಕಾಲ ರಕ್ತ ಚಂದನದ ಕಳ್ಳ ಸಾಗಾಣಿಕೆ ಮಿತಿಮೀರಿತ್ತು. ಆ ಬಗ್ಗೆ ನಾನು ಸಾಕ್ಷ್ಯಚಿತ್ರ ಮಾಡಬೇಕು ಎಂದು ನಿರ್ಧರಿಸಿದ್ದೆ. ಅದಕ್ಕಾಗಿ ಅಧ್ಯಯನ ನಡೆಸುತ್ತಿದಾಗ ಅನೇಕ ಸ್ಮಗ್ಲರ್​ಗಳನ್ನು ನಾನು ಭೇಟಿಯಾಗಿದ್ದೆ’ ಎಂದು ನಿರ್ದೇಶಕ ಸುಕುಮಾರ್ ತಿಳಿಸಿದ್ದಾರೆ.

‘ನಾನು ಭೇಟಿ ಮಾಡಿದ ಸ್ಮಗ್ಲರ್​ಗಳಲ್ಲಿ ಒಬ್ಬನ ಹೆಸರು ಪುಷ್ಪ ರಾಜ್ ಆಗಿತ್ತು. ಎಲ್ಲರೂ ಅವನನ್ನು ಪುಷ್ಪ ಎಂದು ಕರೆಯುತ್ತಿದ್ದರು. ಆ ಹೆಸರು ನನಗೆ ಇಂಟರೆಸ್ಟಿಂಗ್ ಎನಿಸಿತು. ಹಾಗಾಗಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಪುಷ್ಪ ರಾಜ್ ಎಂದು ಹೆಸರು ಇಡಲು ನಿರ್ಧರಿಸಿದೆ’ ಎಂದಿದ್ದಾರೆ ಸುಕುಮಾರ್. ಡಿಫರೆಂಟ್ ಗೆಟಪ್ ಇರುವ ಆ ಪಾತ್ರವನ್ನು ಅಲ್ಲು ಅರ್ಜುನ್ ಅವರು ಉತ್ತಮವಾಗಿ ನಿಭಾಯಿಸಿದರು. ‘ಪುಷ್ಪ’ ಚಿತ್ರದಲ್ಲಿನ ನಟನೆಗೆ ಅವರು ರಾಷ್ಟ್ರ ಪ್ರಶಸ್ತಿ ಪಡೆದರು.

ಇದನ್ನೂ ಓದಿ: ‘ಪುಷ್ಪ 3’ನಲ್ಲಿ ಅಲ್ಲು ಅರ್ಜುನ್ ಜೊತೆ ಇನ್ನಿಬ್ಬರು ಸ್ಟಾರ್ ಹೀರೋಗಳು

‘ಪುಷ್ಪ 3’ ಕೂಡ ಬರಲಿದೆ ಎಂದು ಈಗಾಗಲೇ ಹೇಳಲಾಗಿದೆ. ಆದರ ಆ ಪ್ರಾಜೆಕ್ಟ್ ಸೆಟ್ಟೇರಲು ಸಾಕಷ್ಟು ಸಮಯ ಹಿಡಿಯಲಿದೆ. ಸದ್ಯಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂಬುದು ಖಚಿತ ಆಗಿಲ್ಲ. ಆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ‘ಪುಷ್ಪ 3’ ಭರ್ಜರಿ ಹಿಟ್ ಆಗಿದ್ದರಿಂದ ಮುಂದಿನ ಸಿನಿಮಾವನ್ನು ಅದಕ್ಕಿಂತಲೂ ಚೆನ್ನಾಗಿ ಮಾಡಬೇಕಾದ ಒತ್ತಡ ಸುಕುಮಾರ್ ಅವರ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:44 pm, Thu, 3 April 25

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ