AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್

ನಟ ಅಲ್ಲು ಅರ್ಜುನ್ ಅವರು ಪುಷ್ಪ ರಾಜ್ ಪಾತ್ರಕ್ಕೆ ಜೀವ ತುಂಬಿದರು. ಅದು ಒಬ್ಬ ನಿಜವಾದ ಸ್ಮಗ್ಲರ್​ನ ಹೆಸರು ಎಂದು ಸುಕುಮಾರ್ ಹೇಳಿದ್ದಾರೆ. ಆ ಸ್ಮಗರ್​ನನ್ನು ಸುಕುಮಾರ್​ ಅವರು ಭೇಟಿ ಆಗಿದ್ದರು. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸುಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ.

ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್
Allu Arjun, Sukumar
ಮದನ್​ ಕುಮಾರ್​
|

Updated on:Apr 03, 2025 | 6:47 PM

Share

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳು ಮಾಡಿದ ಮೋಡಿ ಸಣ್ಣದಲ್ಲ. ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿತು. ನಿರ್ದೇಶಕ ಸುಕುಮಾರ್​ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದರು. ರಕ್ತಚಂದನದ ಸ್ಮಗ್ಲಿಂಗ್ ಬಗ್ಗೆ ‘ಪುಷ್ಪ 2’ ಸಿನಿಮಾದ ಕಥೆ ಇದೆ. ಅಷ್ಟಕ್ಕೂ ಈ ಸಿನಿಮಾದ ಕಥಾನಾಯಕನ ಪಾತ್ರ ಹುಟ್ಟಿದ್ದು ಹೇಗೆ ಎಂಬುದನ್ನು ನಿರ್ದೇಶಕ ಸುಕುಮಾರ್ (Sukumar) ಅವರು ಈಗ ತಿಳಿಸಿದ್ದಾರೆ. ಆ ಪಾತ್ರಕ್ಕೆ ಒಬ್ಬ ನಿಜವಾದ ಸ್ಮಗ್ಲರ್ ಕಾರಣ ಎಂದು ಅವರು ಹೇಳಿದ್ದಾರೆ.

ನಿರ್ದೇಶಕ ಸುಕುಮಾರ್ ಅವರು ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ‘ಪುಷ್ಪ 2’ ಸಿನಿಮಾದ ತೆರೆ ಹಿಂದಿನ ವಿಷಯಗಳ ಬಗ್ಗೆ ಮಾತನಾಡಿದರು. ‘ದಕ್ಷಿಣ ಭಾರತದಲ್ಲಿ ದಶಕಗಳ ಕಾಲ ರಕ್ತ ಚಂದನದ ಕಳ್ಳ ಸಾಗಾಣಿಕೆ ಮಿತಿಮೀರಿತ್ತು. ಆ ಬಗ್ಗೆ ನಾನು ಸಾಕ್ಷ್ಯಚಿತ್ರ ಮಾಡಬೇಕು ಎಂದು ನಿರ್ಧರಿಸಿದ್ದೆ. ಅದಕ್ಕಾಗಿ ಅಧ್ಯಯನ ನಡೆಸುತ್ತಿದಾಗ ಅನೇಕ ಸ್ಮಗ್ಲರ್​ಗಳನ್ನು ನಾನು ಭೇಟಿಯಾಗಿದ್ದೆ’ ಎಂದು ನಿರ್ದೇಶಕ ಸುಕುಮಾರ್ ತಿಳಿಸಿದ್ದಾರೆ.

‘ನಾನು ಭೇಟಿ ಮಾಡಿದ ಸ್ಮಗ್ಲರ್​ಗಳಲ್ಲಿ ಒಬ್ಬನ ಹೆಸರು ಪುಷ್ಪ ರಾಜ್ ಆಗಿತ್ತು. ಎಲ್ಲರೂ ಅವನನ್ನು ಪುಷ್ಪ ಎಂದು ಕರೆಯುತ್ತಿದ್ದರು. ಆ ಹೆಸರು ನನಗೆ ಇಂಟರೆಸ್ಟಿಂಗ್ ಎನಿಸಿತು. ಹಾಗಾಗಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಪುಷ್ಪ ರಾಜ್ ಎಂದು ಹೆಸರು ಇಡಲು ನಿರ್ಧರಿಸಿದೆ’ ಎಂದಿದ್ದಾರೆ ಸುಕುಮಾರ್. ಡಿಫರೆಂಟ್ ಗೆಟಪ್ ಇರುವ ಆ ಪಾತ್ರವನ್ನು ಅಲ್ಲು ಅರ್ಜುನ್ ಅವರು ಉತ್ತಮವಾಗಿ ನಿಭಾಯಿಸಿದರು. ‘ಪುಷ್ಪ’ ಚಿತ್ರದಲ್ಲಿನ ನಟನೆಗೆ ಅವರು ರಾಷ್ಟ್ರ ಪ್ರಶಸ್ತಿ ಪಡೆದರು.

ಇದನ್ನೂ ಓದಿ: ‘ಪುಷ್ಪ 3’ನಲ್ಲಿ ಅಲ್ಲು ಅರ್ಜುನ್ ಜೊತೆ ಇನ್ನಿಬ್ಬರು ಸ್ಟಾರ್ ಹೀರೋಗಳು

‘ಪುಷ್ಪ 3’ ಕೂಡ ಬರಲಿದೆ ಎಂದು ಈಗಾಗಲೇ ಹೇಳಲಾಗಿದೆ. ಆದರ ಆ ಪ್ರಾಜೆಕ್ಟ್ ಸೆಟ್ಟೇರಲು ಸಾಕಷ್ಟು ಸಮಯ ಹಿಡಿಯಲಿದೆ. ಸದ್ಯಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂಬುದು ಖಚಿತ ಆಗಿಲ್ಲ. ಆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ‘ಪುಷ್ಪ 3’ ಭರ್ಜರಿ ಹಿಟ್ ಆಗಿದ್ದರಿಂದ ಮುಂದಿನ ಸಿನಿಮಾವನ್ನು ಅದಕ್ಕಿಂತಲೂ ಚೆನ್ನಾಗಿ ಮಾಡಬೇಕಾದ ಒತ್ತಡ ಸುಕುಮಾರ್ ಅವರ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:44 pm, Thu, 3 April 25

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ