ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್

ನಟ ಅಲ್ಲು ಅರ್ಜುನ್ ಅವರು ಪುಷ್ಪ ರಾಜ್ ಪಾತ್ರಕ್ಕೆ ಜೀವ ತುಂಬಿದರು. ಅದು ಒಬ್ಬ ನಿಜವಾದ ಸ್ಮಗ್ಲರ್​ನ ಹೆಸರು ಎಂದು ಸುಕುಮಾರ್ ಹೇಳಿದ್ದಾರೆ. ಆ ಸ್ಮಗರ್​ನನ್ನು ಸುಕುಮಾರ್​ ಅವರು ಭೇಟಿ ಆಗಿದ್ದರು. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸುಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ.

ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್
Allu Arjun, Sukumar

Updated on: Apr 03, 2025 | 6:47 PM

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳು ಮಾಡಿದ ಮೋಡಿ ಸಣ್ಣದಲ್ಲ. ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿತು. ನಿರ್ದೇಶಕ ಸುಕುಮಾರ್​ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದರು. ರಕ್ತಚಂದನದ ಸ್ಮಗ್ಲಿಂಗ್ ಬಗ್ಗೆ ‘ಪುಷ್ಪ 2’ ಸಿನಿಮಾದ ಕಥೆ ಇದೆ. ಅಷ್ಟಕ್ಕೂ ಈ ಸಿನಿಮಾದ ಕಥಾನಾಯಕನ ಪಾತ್ರ ಹುಟ್ಟಿದ್ದು ಹೇಗೆ ಎಂಬುದನ್ನು ನಿರ್ದೇಶಕ ಸುಕುಮಾರ್ (Sukumar) ಅವರು ಈಗ ತಿಳಿಸಿದ್ದಾರೆ. ಆ ಪಾತ್ರಕ್ಕೆ ಒಬ್ಬ ನಿಜವಾದ ಸ್ಮಗ್ಲರ್ ಕಾರಣ ಎಂದು ಅವರು ಹೇಳಿದ್ದಾರೆ.

ನಿರ್ದೇಶಕ ಸುಕುಮಾರ್ ಅವರು ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ‘ಪುಷ್ಪ 2’ ಸಿನಿಮಾದ ತೆರೆ ಹಿಂದಿನ ವಿಷಯಗಳ ಬಗ್ಗೆ ಮಾತನಾಡಿದರು. ‘ದಕ್ಷಿಣ ಭಾರತದಲ್ಲಿ ದಶಕಗಳ ಕಾಲ ರಕ್ತ ಚಂದನದ ಕಳ್ಳ ಸಾಗಾಣಿಕೆ ಮಿತಿಮೀರಿತ್ತು. ಆ ಬಗ್ಗೆ ನಾನು ಸಾಕ್ಷ್ಯಚಿತ್ರ ಮಾಡಬೇಕು ಎಂದು ನಿರ್ಧರಿಸಿದ್ದೆ. ಅದಕ್ಕಾಗಿ ಅಧ್ಯಯನ ನಡೆಸುತ್ತಿದಾಗ ಅನೇಕ ಸ್ಮಗ್ಲರ್​ಗಳನ್ನು ನಾನು ಭೇಟಿಯಾಗಿದ್ದೆ’ ಎಂದು ನಿರ್ದೇಶಕ ಸುಕುಮಾರ್ ತಿಳಿಸಿದ್ದಾರೆ.

‘ನಾನು ಭೇಟಿ ಮಾಡಿದ ಸ್ಮಗ್ಲರ್​ಗಳಲ್ಲಿ ಒಬ್ಬನ ಹೆಸರು ಪುಷ್ಪ ರಾಜ್ ಆಗಿತ್ತು. ಎಲ್ಲರೂ ಅವನನ್ನು ಪುಷ್ಪ ಎಂದು ಕರೆಯುತ್ತಿದ್ದರು. ಆ ಹೆಸರು ನನಗೆ ಇಂಟರೆಸ್ಟಿಂಗ್ ಎನಿಸಿತು. ಹಾಗಾಗಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಪುಷ್ಪ ರಾಜ್ ಎಂದು ಹೆಸರು ಇಡಲು ನಿರ್ಧರಿಸಿದೆ’ ಎಂದಿದ್ದಾರೆ ಸುಕುಮಾರ್. ಡಿಫರೆಂಟ್ ಗೆಟಪ್ ಇರುವ ಆ ಪಾತ್ರವನ್ನು ಅಲ್ಲು ಅರ್ಜುನ್ ಅವರು ಉತ್ತಮವಾಗಿ ನಿಭಾಯಿಸಿದರು. ‘ಪುಷ್ಪ’ ಚಿತ್ರದಲ್ಲಿನ ನಟನೆಗೆ ಅವರು ರಾಷ್ಟ್ರ ಪ್ರಶಸ್ತಿ ಪಡೆದರು.

ಇದನ್ನೂ ಓದಿ: ‘ಪುಷ್ಪ 3’ನಲ್ಲಿ ಅಲ್ಲು ಅರ್ಜುನ್ ಜೊತೆ ಇನ್ನಿಬ್ಬರು ಸ್ಟಾರ್ ಹೀರೋಗಳು

‘ಪುಷ್ಪ 3’ ಕೂಡ ಬರಲಿದೆ ಎಂದು ಈಗಾಗಲೇ ಹೇಳಲಾಗಿದೆ. ಆದರ ಆ ಪ್ರಾಜೆಕ್ಟ್ ಸೆಟ್ಟೇರಲು ಸಾಕಷ್ಟು ಸಮಯ ಹಿಡಿಯಲಿದೆ. ಸದ್ಯಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂಬುದು ಖಚಿತ ಆಗಿಲ್ಲ. ಆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ‘ಪುಷ್ಪ 3’ ಭರ್ಜರಿ ಹಿಟ್ ಆಗಿದ್ದರಿಂದ ಮುಂದಿನ ಸಿನಿಮಾವನ್ನು ಅದಕ್ಕಿಂತಲೂ ಚೆನ್ನಾಗಿ ಮಾಡಬೇಕಾದ ಒತ್ತಡ ಸುಕುಮಾರ್ ಅವರ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:44 pm, Thu, 3 April 25

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us