AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಮುಂದಿನ ವರ್ಷ ಜನವರಿ 16ರಂದು ಜಪಾನ್‌ನಲ್ಲಿ ತೆರೆ ಕಾಣಲು ಸಜ್ಜಾಗಿದೆ. ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ಭಾರತೀಯ ಸಿನಿಮಾಗಳಿಗೆ ಜಪಾನ್‌ನಲ್ಲಿರುವ ಬೇಡಿಕೆಯೇ ಇದಕ್ಕೆ ಕಾರಣ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್ 2’, ‘ಆರ್​ಆರ್​ಆರ್’ ಹಾಗೂ 'ಪುಷ್ಪ' ಚಿತ್ರಗಳು ಅಲ್ಲಿ ಮೆಚ್ಚುಗೆ ಗಳಿಸಿದ್ದವು. ಚಿತ್ರದ ಕಥೆಗೂ ಜಪಾನ್ ಲಿಂಕ್ ಇರುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಮೂಡಿದೆ.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 04, 2025 | 8:59 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (Pushpa 2) ಸಿನಿಮಾ ಕಳೆದ ವರ್ಷ ಡಿಸೆಂಬರ್ 4ರಂದು ರಿಲೀಸ್ ಆಯಿತು. ಅಂದರೆ ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಈ ಚಿತ್ರ ತೆರೆಗೆ ಬಂದು ದಾಖಲೆಗಳ ಮೇಲೆ ದಾಖಲೆ ಬರೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿದ್ದು ಗೊತ್ತೇ ಇದೆ. ಈಗ ಈ ಸಿನಿಮಾ ಮತ್ತೆ ತೆರೆ ಕಾಣಲು ರೆಡಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಾಗಾದರೆ, ಈ ಚಿತ್ರ ಮತ್ತೆ ತೆರೆ ಕಾಣಲು ಕಾರಣ ಏನು? ಅಂದಹಾಗೆ ಈ ಚಿತ್ರವು ಭಾರತದಲ್ಲಿ ಬಿಡುಗಡೆ ಕಾಣುತ್ತಿಲ್ಲ. ಈ ಚಿತ್ರ ತೆರೆಗೆ ಬರುತ್ತಿರುವುದು ಜಪಾನ್​ ಅಲ್ಲಿ.

ಜಪಾನ್ ಅಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಇದೆ. ಈಗಾಗಲೇ ‘ಬಾಹುಬಲಿ’, ‘ಬಾಹುಬಲಿ 2’, ‘ಕೆಜಿಎಫ್ 2’ ‘ಆರ್​ಆರ್​ಆರ್’ ಅಂತಹ ಸಿನಿಮಾಗಳು ಜಪಾನ್ ಭಾಷೆಗೆ ಡಬ್ ಆಗಿ ಯಶಸ್ಸು ಕಂಡವು. ‘ಪುಷ್ಪ’ ಸಿನಿಮಾ ಕೂಡ ಈ ಮೊದಲು ಜಪಾನ್ ಅಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈಗ ‘ಪುಷ್ಪ 2’ ಚಿತ್ರದ ಸರದಿ.

ಮುಂದಿನ ವರ್ಷ ಜನವರಿ 16ರಂದು ‘ಪುಷ್ಪ 2’ ಚಿತ್ರ ಜಪಾನ್​ನಲ್ಲಿ ತೆರೆಗೆ ಬರಲಿದೆಯಂತೆ. ‘ಪುಷ್ಪ’ ಚಿತ್ರದಲ್ಲಿ ಕಥೆಗೆ ಜಪಾನ್ ಲಿಂಕ್ ಇತ್ತು. ಎರಡನೇ ಪಾರ್ಟ್ ಆರಂಭ ಆಗೋದು ಕೂಡ ಜಪಾನ್ ಕಥೆಯೊಂದಿಗೆ. ಕಥಾ ನಾಯಕ ಜಪಾನ್​ಗೆ ತೆರಳುತ್ತಾನೆ ಮತ್ತು ಅಲ್ಲಿ ಫೈಟ್ ನಡೆಯುತ್ತದೆ. ಹೀಗಾಗಿ ಜಪಾನ್ ಜನರಿಗೆ ಸಿನಿಮಾ ಮತ್ತಷ್ಟು ಇಷ್ಟ ಆಗಬಹುದು ಎಂಬ ಆಲೋಚನೆಯಲ್ಲಿ ತಂಡ ಇದೆ.

‘ಪುಷ್ಪ’ ಸಿನಿಮಾ ಜಪಾನ್ ಅಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತ್ತು. ಈಗ ಸೀಕ್ವೆಲ್​ನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ಸಿನಿಮಾ ಗ್ಲೋಬಲ್ ಮಟ್ಟದಲ್ಲಿ ಸಾಕಷ್ಟು ಯಶಸ್ಸು ಕಂಡಿದೆ. ಇದು ಚಿತ್ರಕ್ಕೆ ಸಹಕಾರಿ ಆಗಲಿದೆ.

ಇದನ್ನೂ ಓದಿ: ‘ಪುಷ್ಪ 3’ ಅಲ್ಲ, ಅಲ್ಲು ಅರ್ಜುನ್ ಬದಲು ಬೇರೊಬ್ಬ ಸ್ಟಾರ್ ಜೊತೆ ಕೈ ಜೋಡಿಸಿದ ಸುಕುಮಾರ್

ಸುಕುಮಾರ್ ಅವರು ‘ಪುಷ್ಪ 2’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಮೂರನೇ ಪಾರ್ಟ್ ಇನ್ನಷ್ಟೇ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್