AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಕೆಜಿಎಫ್ 2’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್​ ಮಾಡುತ್ತಾ ‘ಪುಷ್ಪ 2’?

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗುತ್ತಿದೆ. ‘ಪುಷ್ಪ’ ಸೂಪರ್​ ಹಿಟ್ ಆಗಿದ್ದರಿಂದ ‘ಪುಷ್ಪ 2’ ಸಿನಿಮಾ ಹೈಪ್​ ಕ್ರಿಯೇಟ್ ಮಾಡಿದೆ. ಡಿಸೆಂಬರ್​ 5ರಂದು ಈ ಸಿನಿಮಾ ತೆರೆಕಾಣಲಿದೆ. ಕರ್ನಾಟಕದಲ್ಲಿ ಈ ಚಿತ್ರ ದಾಖಲೆ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲಿದೆ ಎಂದು ವಿತರಕರು ನಿರೀಕ್ಷಿಸಿದ್ದಾರೆ.

ಕರ್ನಾಟಕದಲ್ಲಿ ‘ಕೆಜಿಎಫ್ 2’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್​ ಮಾಡುತ್ತಾ ‘ಪುಷ್ಪ 2’?
ಅಲ್ಲು ಅರ್ಜುನ್, ಯಶ್
ಮದನ್​ ಕುಮಾರ್​
|

Updated on: Oct 27, 2024 | 5:06 PM

Share

‘ಪುಷ್ಪ’ ಮತ್ತು ‘ಕೆಜಿಎಫ್​’ ಸಿನಿಮಾಗಳ ನಡುವೆ ಮೊದಲಿನಿಂದಲೂ ಪರೋಕ್ಷವಾದ ಪೈಪೋಟಿ ಇದೆ. ಈಗ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಹಾಗಾದರೆ ಈ ಸಿನಿಮಾ ‘ಕೆಜಿಎಫ್​ 2’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್ ಮಾಡುತ್ತಾ ಎಂಬ ಕೌತುಕ ಎಲ್ಲರಲ್ಲೂ ಇದೆ. ಈ ಬಗ್ಗೆ ವಿತರಕರು ಮಾತನಾಡಿದ್ದಾರೆ. ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಪುಷ್ಪ 2’ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಈ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡಲಿರುವ ಲಕ್ಷ್ಮಿಕಾಂತ ರೆಡ್ಡಿ ಅವರ ಕೆಲವು ವಿಷಯಗಳನ್ನು ಹಂಚಿಕೊಂಡರು.

‘ಎನ್​ ಸಿನಿಮಾಸ್​’ ಮೂಲಕ ಲಕ್ಷ್ಮಿಕಾಂತ ರೆಡ್ಡಿ ಅವರು ಕರ್ನಾಟಕದಾದ್ಯಂತ ‘ಪುಷ್ಪ 2’ ಸಿನಿಮಾವನ್ನು ವಿತರಣೆ ಮಾಡಲಿದ್ದಾರೆ. ಈ ಮೊದಲು ತೆಲುಗಿನ ಹಲವು ಸೂಪರ್​ ಹಿಟ್ ಸಿನಿಮಾಗಳನ್ನು ಅವರು ಕರ್ನಾಟಕದಲ್ಲಿ ರಿಲೀಸ್ ಮಾಡಿದ್ದರು. ಆ ಎಲ್ಲ ಚಿತ್ರಗಳಿಗಿಂತಲೂ ‘ಪುಷ್ಪ 2’ ಸಿನಿಮಾ ಅತಿ ಹೆಚ್ಚು ಬಿಸ್ನೆಸ್​ ಮಾಡಲಿದೆ ಎಂದು ಲಕ್ಷ್ಮಿಕಾಂತ ರೆಡ್ಡಿ ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನ 420 ಕೋಟಿ ರೂಪಾಯಿ ಗಳಿಸಿದ ‘ಪುಷ್ಪ 2’ ಸಿನಿಮಾ

‘ಕರ್ನಾಟಕದಲ್ಲಿ ಈ ಸಿನಿಮಾ ಅತಿ ಹೆಚ್ಚು ಕಲೆಕ್ಷನ್ ಮಾಡಲಿದೆ. ಈವರೆಗೂ ಕರ್ನಾಟಕದಲ್ಲಿ 90ರಿಂದ 95 ಕೋಟಿ ರೂಪಾಯಿ ಕಲೆಕ್ಷನ್ ಆದ ಉದಾಹರಣೆ ಇದೆ. ಈಗ ‘ಪುಷ್ಪ 2’ ಸಿನಿಮಾ ಅಲ್ಲು ಅರ್ಜುನ್​ ಅವರ ವೃತ್ತಿ ಜೀವನದ ಮೈಲಿಗಲ್ಲಿನ ಸಿನಿಮಾ ಆಗಲಿದೆ. ಈ ಮೊದಲು ಕೆಜಿಎಫ್ ಸಿನಿಮಾವನ್ನು 350 ಸಿಂಗಲ್ ಸ್ಕ್ರೀನ್ ಹಾಗೂ 80 ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ ನಾವು ಈಗ ಅದಕ್ಕಿಂತಲೂ ಹೆಚ್ಚು, ಅಂದರೆ 500 ಪರದೆಗಳಲ್ಲಿ ಬಿಡುಗಡೆ ಮಾಡುತ್ತೇನೆ’ ಎಂದ ಲಕ್ಷ್ಮಿಕಾಂತ ರೆಡ್ಡಿ ಹೇಳಿದ್ದಾರೆ.

View this post on Instagram

A post shared by Pushpa (@pushpamovie)

‘ಕೆಜಿಎಫ್​ ಸಿನಿಮಾ ಮೊದಲ ದಿನ 28ರಿಂದ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ ‘ಪುಷ್ಪ 2’ ಸಿನಿಮಾ ಅದನ್ನು ಮೀರಿಸಲಿದೆ. ಅಲ್ಲು ಅರ್ಜುನ್ ಅವರಿಗೆ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ’ ಎಂದಿದ್ದಾರೆ ಲಕ್ಷ್ಮಿಕಾಂತ ರೆಡ್ಡಿ. ಆದರೆ ಅವರ ಈ ಮಾತುಗಳನ್ನು ಕರ್ನಾಟಕದಲ್ಲಿ ಕೆಲವರು ಟೀಕಿಸಿದ್ದಾರೆ. ‘ಕೆಜಿಎಫ್​ 2’ ದಾಖಲೆಯನ್ನು ‘ಪುಷ್ಪ 2’ ಮುರಿಯಲು ಸಾಧ್ಯವಿಲ್ಲ ಎಂದು ಕೆಲವು ನೆಟ್ಟಗರು ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!