AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಆ ಒಂದು ಸಾಂಗ್ ಬಗ್ಗೆ ನಿರ್ದೇಶಕರಿಗೆ ಮೂಡಿದೆ ಗೊಂದಲ

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಆಗಲಿದೆ. ಆದರೆ ಚಿತ್ರತಂಡ ಒಂದು ಹಾಡಿನ ಬಗ್ಗೆ ಇನ್ನೂ ಗೊಂದಲದಲ್ಲಿಯೇ ಇದೆ. ಗೊಂದಲಕ್ಕೆ ಕಾರಣವೇನು?

‘ಪುಷ್ಪ 2’ ಚಿತ್ರದ ಆ ಒಂದು ಸಾಂಗ್ ಬಗ್ಗೆ ನಿರ್ದೇಶಕರಿಗೆ ಮೂಡಿದೆ ಗೊಂದಲ
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Nov 06, 2024 | 6:30 PM

Share

ತೆಲುಗು ಚಿತ್ರರಂಗದವರು ಸಾಂಗ್​ನ ಅದ್ದೂರಿಯಾಗಿ ಶೂಟ್ ಮಾಡಲು ಆದ್ಯತೆ ನೀಡುತ್ತಾರೆ. ಸಿನಿಮಾದ ಕೊನೆಯಲ್ಲಿ ಹಾಡನ್ನು ಶೂಟ್ ಮಾಡಲು ಮತ್ತು ಇದಕ್ಕೆ ದೊಡ್ಡ ಸೆಟ್ ಹಾಕಲು ತೆಲುಗು ಮಂದಿ ಬಯಸುತ್ತಾರೆ. ‘ಪುಷ್ಪ’ ಚಿತ್ರದಲ್ಲಿ ಭರ್ಜರಿ ಹಾಡುಗಳು ಇದ್ದವು. ಇವೆಲ್ಲ ಹಿಟ್ ಆಗಿದ್ದವು. ಈಗ ‘ಪುಷ್ಪ 2’ ಚಿತ್ರದಲ್ಲೂ ಸಾಂಗ್ಗೆ ಆದ್ಯತೆ ನೀಡಲಾಗಿದೆ. ಹಲವು ಸಾಂಗ್ಗಳ ಶೂಟ್ ಮಾಡಲಾಗಿದೆ. ಈಗ ಒಂದು ಹಾಡಿನ ಬಗ್ಗೆ ನಿರ್ದೇಶಕ ಸುಕುಮಾರ್ ಅವರು ಆಲೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಚಿತ್ರದ ಐಟಂ ಸಾಂಗ್ ಹಿಟ್ ಆಗಿತ್ತು. ಅದೇ ರೀತಿ ‘ಪುಷ್ಪ 2’ ಚಿತ್ರದಲ್ಲೂ ವಿಶೇಷ ಸಾಂಗ್ ಇದೆ. ಇದನ್ನು ಸುಕುಮಾರ್ ಈ ವಾರ ಶೂಟ್ ಮಾಡಿ ಮುಗಿಸಲಿದ್ದಾರೆ. ಮತ್ತೊಂದು ಹಾಡಿನ ಶೂಟ್ ಬಗ್ಗೆ ಅವರು ಆಲೋಚನೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ನಡುವಿನ ಸಾಂಗ್ ಶೂಟ್ ಬೇಕೆ ಅಥವಾ ಬೇಡವೇ ಎನ್ನುವ ಗೊಂದಲದಲ್ಲಿ ಇದ್ದಾರೆ.

‘ಪುಷ್ಪ 2’ ಸಿನಿಮಾದ ರಿಲೀಸ್ ದಿನಾಂಕ ಈಗಾಗಲೇ ಕೆಲವು ಬಾರಿ ಮುಂದಕ್ಕೆ ಹೋಗಿವೆ. ಈ ಸಿನಿಮಾ ರಿಲೀಸ್ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಅದಕ್ಕೂ ಮೊದಲು ‘ಪುಷ್ಪ 2’ ಚಿತ್ರದ ಶೂಟ್ನ ಪೂರ್ಣಗೊಳಿಸಬೇಕಿದೆ. ಕೆಲವು ವರದಿಗಳ ಪ್ರಕಾರ ಐಟಂ ಸಾಂಗ್ ಹಾಗೂ ಡ್ಯೂಯೆಟ್ ಸಾಂಗ್ ಪೂರ್ಣಗೊಂಡರೆ ಶೂಟಿಂಗ್ ಮುಗಿದಂತೆ. ಡ್ಯುಯೆಟ್ ಸಾಂಗ್​ನ ಮಾಡದಿರಲು ಸುಕುಮಾರ್ ಆಲೋಚಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:‘ಪುಷ್ಪ 2’ ಪ್ರಚಾರಕ್ಕೆ ಖರ್ಚು ಮಾಡುತ್ತಿರುವ ಹಣದಲ್ಲಿ 3 ಸಿನಿಮಾ ನಿರ್ಮಿಸಬಹುದು

ಸದ್ಯ ‘ಸೂಸೇಕಿ..’ ಹಾಗೂ ಟೈಟಲ್ ಸಾಂಗ್ ‘ಪುಷ್ಪ ಪುಷ್ಪ..’ ರಿಲೀಸ್ ಆಗಿದೆ. ಜಾತ್ರೆಯಲ್ಲಿ ನಡೆಯೋ ಹಾಡನ್ನು ಕೂಡ ರಿಲೀಸ್ ಮಾಡಲು ತಂಡ ರೆಡಿ ಆಗಿದೆ. ಈಗ ಇದರ ಜೊತೆ ಮತ್ತೊಂದು ಹಾಡನ್ನು ಶೂಟ್ ಮಾಡೋದಾದರೆ ಸಿನಿಮಾದ ಅವಧಿ ಕೂಡ ಹೆಚ್ಚುತ್ತದೆ. ಅದನ್ನು ಕೇವಲ ಪ್ರಚಾರಕ್ಕೆ ಮಾತ್ರ ಬಳಕೆ ಮಾಡಿಕೊಳ್ಳೋಣ ಎಂದರೆ ಬಜೆಟ್ ಹೆಚ್ಚಲಿದೆ. ಹೀಗಾಗಿ, ಸುಕುಮಾರ್ ಈ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ.

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಫಹಾದ್ ಫಾಸಿಲ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌