AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್

ಈ ಪಟ್ಟಿಯಲ್ಲಿ ‘ಪುಷ್ಪ: ದಿ ರೂಲ್​’ (ಹಿಂದಿ) ಇದೆ. ಎರಡನೇ ಸ್ಥಾನದಲ್ಲಿ ‘ಹೇರಾ ಫೇರಿ 3’ ಸಿನಿಮಾ ಇದೆ. ಶಾರುಖ್ ಖಾನ್ ನಟನೆಯ ‘ಜವಾನ್​’ ಮೂರನೇ ಸ್ಥಾನದಲ್ಲಿದೆ.

2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಶಾರುಖ್​-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Apr 19, 2023 | 11:04 AM

Share

ಭಾರತ ಚಿತ್ರರಂಗ ಎಂದರೆ ಬಾಲಿವುಡ್ ಎನ್ನುವ ಕಾಲ ಒಂದಿತ್ತು. ಆದರೆ, ಇತ್ತೀಚೆಗೆ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಬಾಲಿವುಡ್​ನಲ್ಲಿ ಅಬ್ಬರಿಸುತ್ತಿವೆ. ಹಿಂದಿ ಚಿತ್ರಗಳ ಎದುರು ದಕ್ಷಿಣ ಭಾರತದ ಸಿನಿಮಾಗಳು ರಿಲೀಸ್ ಆಗಿ ಗೆದ್ದಿವೆ. ಇತ್ತೀಚಿನ ವರ್ಷಗಳಲ್ಲಿ ರಿಲೀಸ್ ಆದ ‘ಕೆಜಿಎಫ್ 2’, ‘ಕಾಂತಾರ’ (Kantara Movie), ಆರ್​ಆರ್​ಆರ್’ ಸೇರಿ ಅನೇಕ ಸಿನಿಮಾಗಳು ಬಾಲಿವುಡ್ ಮಂದಿಯ ಗಮನ ಸೆಳೆದಿವೆ. ಈಗ 2023ನೇ ಸಾಲಿನ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಪುಷ್ಪ 2’ (Pushpa 2 Movie) ಮೊದಲ ಸ್ಥಾನದಲ್ಲಿದೆ.

ಒರಮ್ಯಾಕ್ಸ್​ ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದೆ. ಬಹುನಿರೀಕ್ಷಿತ ಸಿನಿಮಾಗಳು, ಬೇಡಿಕೆ ಇರುವ ನಟರ ಪಟ್ಟಿಯನ್ನು ಒರಮ್ಯಾಕ್ಸ್ ರಿಲೀಸ್ ಮಾಡುತ್ತದೆ. 2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಈ ಪೈಕಿ ಶಾರುಖ್ ಖಾನ್, ಅಕ್ಷಯ್ ಕುಮಾರ್ ಸಿನಿಮಾಗಳನ್ನು ಅಲ್ಲು ಅರ್ಜುನ್ ಚಿತ್ರ ಹಿಂದಿಕ್ಕಿದೆ. ದಕ್ಷಿಣ ಭಾರತದ ಮಂದಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಒರಮ್ಯಾಕ್ಸ್ ರಿಲೀಸ್ ಮಾಡಿರುವ ಪಟ್ಟಿಯಲ್ಲಿ ‘ಪುಷ್ಪ: ದಿ ರೂಲ್​’ (ಹಿಂದಿ) ಇದೆ. ಎರಡನೇ ಸ್ಥಾನದಲ್ಲಿ ‘ಹೇರಾ ಫೇರಿ 3’ ಸಿನಿಮಾ ಇದೆ. ಶಾರುಖ್ ಖಾನ್ ನಟನೆಯ ‘ಜವಾನ್​’ ಮೂರನೇ ಸ್ಥಾನದಲ್ಲಿದೆ. ‘ಟೈಗರ್ 3’ ಸಿನಿಮಾ ನಾಲ್ಕನೇ ಸ್ಥಾನದಲ್ಲಿದೆ. ಸಲ್ಮಾನ್ ಖಾನ್ ನಟನೆಯ ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ಹೀಗಾಗಿ ನಿರೀಕ್ಷೆ ಸೃಷ್ಟಿ ಆಗಿದೆ. ‘ಭೂಲ್ ಭುಲಯ್ಯ 3’ ಸಿನಿಮಾ ಕೂಡ ಈ ಪಟ್ಟಿಯಲ್ಲಿದೆ.

ಇದನ್ನೂ ಓದಿ: Pushpa 2: ಪುಷ್ಪ2 ನಲ್ಲಿ ಸೊಂಟ ಬಳುಕಿಸಲಿದ್ದಾರೆಯೇ ಸಮಂತಾ? ಉತ್ತರಿಸಿದ ಚೆಲುವೆ

‘ಪುಷ್ಪ 2’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡೋಕೆ ಸಾಕಷ್ಟು ಕಾರಣಗಳಿವೆ. ‘ಪುಷ್ಪ’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಬಾಲಿವುಡ್​ನಲ್ಲೂ ಚಿತ್ರ ಗೆದ್ದು ಬೀಗಿದೆ. ‘ಪುಷ್ಪ’ ಸಿನಿಮಾದ ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಹೀಗಾಗಿ ‘ಪುಷ್ಪ 2’ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇನ್ನು ಸೀಕ್ವೆಲ್​ಗಾಗಿ ದೊಡ್ಡ ಮೊತ್ತದ ಹಣವನ್ನು ಚೆಲ್ಲುವ ಕೆಲಸ ಆಗುತ್ತಿದೆ. ಅಲ್ಲು ಅರ್ಜುನ್ ಬರ್ತ್​ಡೇ ಪ್ರಯುಕ್ತ ರಿಲೀಸ್ ಆದ ಟೀಸರ್ ಹಾಗೂ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ