AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ 2: ಒಂದೇ ದಿನದಲ್ಲಿ ಲಕ್ಷಾಂತರ ಟಿಕೆಟ್​ಗಳು ಮುಂಗಡ ಬುಕ್

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತ ಮಾತ್ರವಲ್ಲದೆ ಅಮೆರಿಕದಲ್ಲೂ ದಾಖಲೆ ಬರೆಯುತ್ತಿದೆ ಈ ಸಿನಿಮಾ.

ಪುಷ್ಪ 2: ಒಂದೇ ದಿನದಲ್ಲಿ ಲಕ್ಷಾಂತರ ಟಿಕೆಟ್​ಗಳು ಮುಂಗಡ ಬುಕ್
ಅಲ್ಲು ಅರ್ಜುನ್
ಮಂಜುನಾಥ ಸಿ.
|

Updated on: Dec 01, 2024 | 11:34 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಉಳಿದಿವೆ. ಹಲವು ರಾಜ್ಯಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ನಿನ್ನೆ ಓಪನ್ ಆಗಿದೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಅಮೆರಿಕ ಇನ್ನಿತರೆ ಕಡೆಗಳಲ್ಲಿ ನಿನ್ನೆಯೇ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಕೇವಲ ಒಂದೇ ದಿನದಲ್ಲಿ ದಾಖಲೆ ಮೊತ್ತದ ಟಿಕೆಟ್​ಗಳು ಮುಂಗಡವಾಗಿ ಬುಕ್ ಆಗಿವೆ. ಟಿಕೆಟ್ ಬುಕಿಂಗ್ ವೇಗ ನೋಡಿದರೆ ‘ಪುಷ್ಪ 2’ ಸಿನಿಮಾ ‘ಬಾಹುಬಲಿ 2’ ದಾಖಲೆ ಮುರಿಯಲಿದೆಯಾ ಎಂಬ ಅನುಮಾನ ಮೂಡುತ್ತಿದೆ.

ಆಂಧ್ರ, ತೆಲಂಗಾಣ, ಕೇರಳ ಇನ್ನೂ ಕೆಲವು ರಾಜ್ಯಗಳಲ್ಲಿ ನಿನ್ನೆ ಬುಕಿಂಗ್ ಓಪನ್ ಆಗಿರಲಿಲ್ಲ. ಹಾಗಿದ್ದರೂ ಸಹ ಭಾರತ ಒಂದರಲ್ಲೇ ನಿನ್ನೆ ಒಂದೇ ದಿನದಲ್ಲಿ ಕೇವಲ ಮಲ್ಟಿಪ್ಲೆಕ್ಸ್​ಗಳಲ್ಲಿ 55 ಸಾವಿರಕ್ಕೂ ಹೆಚ್ಚು ಟಿಕೆಟ್​ಗಳು ಮುಂಗಡವಾಗಿ ಬುಕಿಂಗ್ ಆಗಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಸೇರಿಸಿಕೊಂಡರೆ ಮೊದಲ ದಿನವೇ 2.79 ಲಕ್ಷ ಟಿಕೆಟ್​ಗಳು ಮುಂಗಡವಾಗಿ ಬುಕ್ ಆಗಿವೆಯಂತೆ ಅದೂ ಕೇವಲ ಒಂದೇ ಒಂದು ದಿನದಲ್ಲಿ.

ಇಂದು ಕೇರಳದಲ್ಲಿ ಬುಕಿಂಗ್ ಓಪನ್ ಆಗಿದ್ದು, ಓಪನ್ ಆದ ಕೂಡಲೇ ಹಲವು ಪ್ರಮುಖ ಚಿತ್ರಮಂದಿರಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗುತ್ತಿವೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಟಿಕೆಟ್ ಬುಕಿಂಗ್ ಇನ್ನೂ ಓಪನ್ ಆಗಿಲ್ಲ. ಒಂದೊಮ್ಮೆ ಆ ಎರಡು ರಾಜ್ಯಗಳಲ್ಲಿ ಟಿಕೆಟ್ ಬುಕಿಂಗ್ ಓಪನ್ ಆದರೆ ಈ ಸಂಖ್ಯೆ ದುಪ್ಪಟ್ಟಾಗಲಿದೆ. ಕೆಲ ವರದಿಗಳ ಪ್ರಕಾರ ಈ ವರೆಗೆ ಆಗಿರುವ ಕೇವಲ ಒಂದು ದಿನದ ಅಡ್ವಾನ್ಸ್ ಟಿಕೆಟ್ ಬುಕಿಂಗ್​ ನಿಂದಲೇ ಸುಮಾರು 15 ಕೋಟಿಗೂ ಹೆಚ್ಚು ಹಣ ಗಳಿಕೆ ಆಗಲಿದೆಯಂತೆ. ಮುಂದಿನ ನಾಲ್ಕು ದಿನಗಳಲ್ಲಿ ಅಡ್ವಾನ್ಸ್ ಬುಕಿಂಗ್ ಟಿಕೆಟ್​ನಿಂದಲೇ ಸುಮಾರು ನೂರು ಕೋಟಿ ಗಳಿಕೆ ಆದರೆ ಆಶ್ಚರ್ಯ ಪಡುವಂತಿಲ್ಲ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ಕೊಟ್ಟ ತೆಲಂಗಾಣ ಸರ್ಕಾರ, ಷರತ್ತುಗಳು ಏನೇನು?

ಅಮೆರಿಕದಲ್ಲಿ ‘ಪುಷ್ಪ 2’ ಅಡ್ವಾನ್ಸ್ ಬುಕಿಂಗ್ ಬಲು ಜೋರಾಗಿ ನಡೆಯುತ್ತಿದೆ. ಕೇವಲ ನಾರ್ತ್ ಅಮೆರಿಕ ಒಂದರಲ್ಲೇ ಈ ವರೆಗೆ 16 ಕೋಟಿ ರೂಪಾಯಿ ಮೌಲ್ಯದ ಟಿಕೆಟ್​ಗಳು ಮುಂಗಡವಾಗಿ ಬುಕಿಂಗ್ ಆಗಿವೆ. ನಾರ್ತ್ ಅಮೆರಿಕನಲ್ಲಿ ಡಿಸೆಂಬರ್ 04 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಭಾರತದಲ್ಲಿ ಸಿನಿಮಾ ಡಿಸೆಂಬರ್ 05 ರಂದು ತೆರೆಗೆ ಬರಲಿದೆ. ತೆಲಂಗಾಣದಲ್ಲಿ ಮಾತ್ರ ಡಿಸೆಂಬರ್ 04 ರ ಮಧ್ಯ ರಾತ್ರಿ ಕೆಲ ಶೋ ಪ್ರದರ್ಶನಗೊಳ್ಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?