AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಕಲಾವಿದರ ಸಂಭಾವನೆ ಎಷ್ಟು? ಯಾರಿಗೆ ಎಷ್ಟು ಕೋಟಿ ರೂಪಾಯಿ?

Pushpa 2: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಇಂದು ಬಿಡುಗಡೆ ಆಗಿ, ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿದೆ. ಇದು ಭಾರಿ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾದ ನಟ-ನಟಿಯರಿಗೆ ಭರ್ಜರಿ ಸಂಭಾವನೆ ನೀಡಲಾಗಿದೆ. ಇಲ್ಲಿದೆ ಪಟ್ಟಿ.

‘ಪುಷ್ಪ 2’ ಕಲಾವಿದರ ಸಂಭಾವನೆ ಎಷ್ಟು? ಯಾರಿಗೆ ಎಷ್ಟು ಕೋಟಿ ರೂಪಾಯಿ?
ಅಲ್ಲು ಅರ್ಜುನ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Dec 05, 2024 | 4:38 PM

ಸದ್ಯ ಎಲ್ಲ ಕಡೆಗಳಲ್ಲಿ ‘ಪುಷ್ಪ 2’ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರವು ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂಬಿತ್ಯಾದಿ ವಿಚಾರಗಳು ಚರ್ಚೆಯಲ್ಲಿ ಇವೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ 250 ಕೋಟಿ ರೂಪಾಯಿ ಗಳಿಸಬಹುದು ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಕಲಾವಿದರ ಸಂಭಾವನೆ ವಿಚಾರದ ಬಗ್ಗೆ ನಾವು ಹೇಳುತ್ತಿದ್ದೇವೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಮುಖ್ಯ ಪಿಲ್ಲರ್. ಅವರು ಈ ಚಿತ್ರಕ್ಕಾಗಿ 300 ಕೋಟಿ ರೂಪಾಯಿ ಪಡೆದಿದ್ದಾರೆ. ಪುಷ್ಪರಾಜ್ ಆಗಿ ಅವರು ಗಮನ ಸೆಳೆಯುತ್ತಾರೆ. ಅವರ ಸಂಭಾವನೆ ವಿಚಾರದ ಬಗ್ಗೆ ಇತ್ತೀಚೆಗೆ ಫೋರ್ಬ್ಸ್ ಕೂಡ ವರದಿ ಬಿಡುಗಡೆ ಮಾಡಿತ್ತು. ಈ ಮೂಲಕ ಅವರು ರಜನಿಕಾಂತ್, ದಳಪತಿ ವಿಜಯ್ ಮೊದಲಾದವರನ್ನು ಹಿಂದಿಕ್ಕಿದ್ದಾರೆ.

ಈ ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಶ್ರೀವಲ್ಲಿ ಗೆಟಪ್ನಲ್ಲಿ ಅವರು ಗಮನ ಸೆಳೆಯುತ್ತಾರೆ. ಈ ಚಿತ್ರದಲ್ಲಿ ಅವರಿಗೆ ಪ್ರಮುಖ ಪಾತ್ರ ನೀಡಲಾಗಿದೆ ಎನ್ನಲಾಗಿದೆ. ಈ ಚಿತ್ರಕ್ಕಾಗಿ ಅವರು 10 ಕೋಟಿ ರೂಪಾಯಿ ಪಡೆದಿದ್ದಾರೆ. ಅಲ್ಲು ಅರ್ಜುನ್ ಜೊತೆಗಿನ ಕೆಮಿಸ್ಟ್ರಿ ಹೈಲೈಟ್ ಆಗಿದೆ.

ಇದನ್ನೂ ಓದಿ:ವಿಡಿಯೋ: ‘ಪುಷ್ಪ 2’ ನೋಡಿ ತಗ್ಗೋದೆ ಇಲ್ಲ ಎಂದ ಅಭಿಮಾನಿಗಳು

ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಬನ್ವರ್ ಸಿಂಗ್ ಶೇಖಾವತ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು 8 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಶ್ರೀಲೀಲಾ ಅವರು ‘ಪುಷ್ಪ 2’ ಚಿತ್ರದಲ್ಲಿ ‘ಕಿಸಕ್’ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಸಿನಿಮಾ ಉದ್ದಕ್ಕೂ ಇದೊಂದೇ ಹಾಡಿನಲ್ಲಿ ಕಾಣಿಸಿಕೊಳ್ಳೋದು. ಈ ಹಾಡಿಗಾಗಿ ಅವರು 2 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಈ ಹಾಡಿನ ಬೆನ್ನಲ್ಲೇ ಅವರು ಹೊಸ ಕಾರು ಖರೀದಿ ಮಾಡಿದರು.

ಸಮಂತಾ ಅವರು ಈ ಮೊದಲು ‘ಊ ಅಂಟಾವ’ ಹಾಡಿನಲ್ಲಿ ನಟಿಸಿದ್ದರು. ಈ ಹಾಡಿಗಾಗಿ ಅವರು 5 ಕೋಟಿ ರೂಪಾಯಿ ಪಡೆದಿದ್ದರು. ಆದರೆ, ಶ್ರೀಲೀಲಾ ಅಷ್ಟು ದೊಡ್ಡ ಮೊತ್ತದಲ್ಲಿ ಚಾರ್ಜ್ ಮಾಡಿಲ್ಲ. ಉಳಿದ ಪಾತ್ರಧಾರಿಗಳು ಸಾಕಷ್ಟು ಹಣ ಪಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ