‘ಪುಷ್ಪ 2’ ಕಲಾವಿದರ ಸಂಭಾವನೆ ಎಷ್ಟು? ಯಾರಿಗೆ ಎಷ್ಟು ಕೋಟಿ ರೂಪಾಯಿ?

Pushpa 2: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಇಂದು ಬಿಡುಗಡೆ ಆಗಿ, ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿದೆ. ಇದು ಭಾರಿ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾದ ನಟ-ನಟಿಯರಿಗೆ ಭರ್ಜರಿ ಸಂಭಾವನೆ ನೀಡಲಾಗಿದೆ. ಇಲ್ಲಿದೆ ಪಟ್ಟಿ.

‘ಪುಷ್ಪ 2’ ಕಲಾವಿದರ ಸಂಭಾವನೆ ಎಷ್ಟು? ಯಾರಿಗೆ ಎಷ್ಟು ಕೋಟಿ ರೂಪಾಯಿ?
ಅಲ್ಲು ಅರ್ಜುನ್
Edited By:

Updated on: Dec 05, 2024 | 4:38 PM

ಸದ್ಯ ಎಲ್ಲ ಕಡೆಗಳಲ್ಲಿ ‘ಪುಷ್ಪ 2’ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರವು ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂಬಿತ್ಯಾದಿ ವಿಚಾರಗಳು ಚರ್ಚೆಯಲ್ಲಿ ಇವೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ 250 ಕೋಟಿ ರೂಪಾಯಿ ಗಳಿಸಬಹುದು ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಕಲಾವಿದರ ಸಂಭಾವನೆ ವಿಚಾರದ ಬಗ್ಗೆ ನಾವು ಹೇಳುತ್ತಿದ್ದೇವೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಮುಖ್ಯ ಪಿಲ್ಲರ್. ಅವರು ಈ ಚಿತ್ರಕ್ಕಾಗಿ 300 ಕೋಟಿ ರೂಪಾಯಿ ಪಡೆದಿದ್ದಾರೆ. ಪುಷ್ಪರಾಜ್ ಆಗಿ ಅವರು ಗಮನ ಸೆಳೆಯುತ್ತಾರೆ. ಅವರ ಸಂಭಾವನೆ ವಿಚಾರದ ಬಗ್ಗೆ ಇತ್ತೀಚೆಗೆ ಫೋರ್ಬ್ಸ್ ಕೂಡ ವರದಿ ಬಿಡುಗಡೆ ಮಾಡಿತ್ತು. ಈ ಮೂಲಕ ಅವರು ರಜನಿಕಾಂತ್, ದಳಪತಿ ವಿಜಯ್ ಮೊದಲಾದವರನ್ನು ಹಿಂದಿಕ್ಕಿದ್ದಾರೆ.

ಈ ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಶ್ರೀವಲ್ಲಿ ಗೆಟಪ್ನಲ್ಲಿ ಅವರು ಗಮನ ಸೆಳೆಯುತ್ತಾರೆ. ಈ ಚಿತ್ರದಲ್ಲಿ ಅವರಿಗೆ ಪ್ರಮುಖ ಪಾತ್ರ ನೀಡಲಾಗಿದೆ ಎನ್ನಲಾಗಿದೆ. ಈ ಚಿತ್ರಕ್ಕಾಗಿ ಅವರು 10 ಕೋಟಿ ರೂಪಾಯಿ ಪಡೆದಿದ್ದಾರೆ. ಅಲ್ಲು ಅರ್ಜುನ್ ಜೊತೆಗಿನ ಕೆಮಿಸ್ಟ್ರಿ ಹೈಲೈಟ್ ಆಗಿದೆ.

ಇದನ್ನೂ ಓದಿ:ವಿಡಿಯೋ: ‘ಪುಷ್ಪ 2’ ನೋಡಿ ತಗ್ಗೋದೆ ಇಲ್ಲ ಎಂದ ಅಭಿಮಾನಿಗಳು

ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಬನ್ವರ್ ಸಿಂಗ್ ಶೇಖಾವತ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು 8 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಶ್ರೀಲೀಲಾ ಅವರು ‘ಪುಷ್ಪ 2’ ಚಿತ್ರದಲ್ಲಿ ‘ಕಿಸಕ್’ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಸಿನಿಮಾ ಉದ್ದಕ್ಕೂ ಇದೊಂದೇ ಹಾಡಿನಲ್ಲಿ ಕಾಣಿಸಿಕೊಳ್ಳೋದು. ಈ ಹಾಡಿಗಾಗಿ ಅವರು 2 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಈ ಹಾಡಿನ ಬೆನ್ನಲ್ಲೇ ಅವರು ಹೊಸ ಕಾರು ಖರೀದಿ ಮಾಡಿದರು.

ಸಮಂತಾ ಅವರು ಈ ಮೊದಲು ‘ಊ ಅಂಟಾವ’ ಹಾಡಿನಲ್ಲಿ ನಟಿಸಿದ್ದರು. ಈ ಹಾಡಿಗಾಗಿ ಅವರು 5 ಕೋಟಿ ರೂಪಾಯಿ ಪಡೆದಿದ್ದರು. ಆದರೆ, ಶ್ರೀಲೀಲಾ ಅಷ್ಟು ದೊಡ್ಡ ಮೊತ್ತದಲ್ಲಿ ಚಾರ್ಜ್ ಮಾಡಿಲ್ಲ. ಉಳಿದ ಪಾತ್ರಧಾರಿಗಳು ಸಾಕಷ್ಟು ಹಣ ಪಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us