AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1 ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ವಿಶೇಷ ದಿನ; ‘ಪುಷ್ಪ 2’ ತಂಡದ ಸಿಹಿ ಸುದ್ದಿ

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾದ ಆಡಿಯೋ ಬಿಡುಗಡೆಗೆ ಸಿದ್ಧತೆ ನಡೆದಿದೆ. ಒಂದೊಂದೇ ಹಾಡುಗಳನ್ನು ರಿಲೀಸ್​ ಮಾಡಲು ಸಕಲ ತಯಾರಿ ಆಗಿದೆ. ಈಗ ಮೊದಲ ಹಾಡಿನ ಲಿರಿಕಲ್ ವಿಡಿಯೋ ಮೇ 1ಕ್ಕೆ ಅನಾವರಣ ಆಗಲಿದೆ. ಈ ಹಾಡಿನಲ್ಲಿ ಪುಷ್ಪ ರಾಜ್​ ಪಾತ್ರದ ಗುಣಗಾನ ಮಾಡಲಾಗುವುದು. ಈ ಸಿನಿಮಾಗೆ ದೇವಿ ಶ್ರೀ ಪ್ರಸಾದ್​ ಸಂಗೀತ ನೀಡಿದ್ದಾರೆ.

ಮೇ 1 ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ವಿಶೇಷ ದಿನ; ‘ಪುಷ್ಪ 2’ ತಂಡದ ಸಿಹಿ ಸುದ್ದಿ
ಪುಷ್ಪ 2
ಮದನ್​ ಕುಮಾರ್​
|

Updated on: Apr 24, 2024 | 6:42 PM

Share

ಭಾರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಪುಷ್ಪ 2’ (Pushpa 2) ಸಿನಿಮಾಗೆ ಈಗಾಗಲೇ ಪ್ರಚಾರ ಕಾರ್ಯ ಆರಂಭ ಆಗಿದೆ. ಸಿನಿಮಾದ ಆಡಿಯೋ ರಿಲೀಸ್​ಗಾಗಿ ಎಲ್ಲರೂ ಕಾದಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಪ್​ಡೇಟ್​ ಸಿಕ್ಕಿದೆ. ಅಲ್ಲು ಅರ್ಜುನ್​ (Allu Arjun), ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾದ ಮೊದಲ ಹಾಡಿನ (Pushpa 2 First Song) ಬಿಡುಗಡೆಗೆ ತಯಾರಿ ನಡೆದಿದೆ. ಇಂದು (ಏಪ್ರಿಲ್​ 24) ಪ್ರೋಮೋ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರ ಜೊತೆಗೆ ದಿನಾಂಕವನ್ನು ತಿಳಿಸಲಾಗಿದೆ. ಮೇ 1ರಂದು ‘ಪುಷ್ಪ 2’ ಚಿತ್ರದ ಮೊದಲ ಹಾಡಿನ ಲಿರಿಕಲ್​ ವಿಡಿಯೋ ಬಿಡುಗಡೆ ಆಗಲಿದೆ.

ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ‘ಶ್ರೀವಲ್ಲಿ..’, ‘ಉ ಅಂಟಾವಾ ಮಾವ..’ ಮುಂತಾದ ಹಾಡುಗಳಿಂದ ದೇವಿ ಶ್ರೀ ಪ್ರಸಾದ್​ ಅವರು ಹೊಸ ಕ್ರೇಜ್​ ಸೃಷ್ಟಿ ಮಾಡಿದ್ದರು. ಈಗ ಅವರ ಮೇಲೆ ‘ಪುಷ್ಪ 2’ ಹಾಡುಗಳ ಕುರಿತಂತೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಮೊದಲ ಹಾಡು ಹೊರಬಂದ ಬಳಿಕ ಅಭಿಮಾನಿಗಳ ಹೈಪ್​ ಇನ್ನಷ್ಟು ಜೋರಾಗುವುದು ಖಚಿತ.

ಇದನ್ನೂ ಓದಿ: 51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದ್ದ ‘ಪುಷ್ಪ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಈಗ ಅದರ ಸೀಕ್ವೆಲ್​ ಸಿದ್ಧವಾಗಿದ್ದು, ಆಗಸ್ಟ್​ 15ಕ್ಕೆ ‘ಪುಷ್ಪ 2’ ರಿಲೀಸ್​ ಆಗಲಿದೆ. ಈ ಬಾರಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಆಗಬೇಕು ಎಂಬ ಟಾರ್ಗೆಟ್​ ಚಿತ್ರತಂಡಕ್ಕೆ ಇದೆ. ಅದು ಈಡೇರಬೇಕು ಎಂದರೆ ಹಾಡುಗಳು ಸಾಥ್​ ನೀಡಲೇಬೇಕು.

‘ಪುಷ್ಪ 2’ ಸಿನಿಮಾವನ್ನು ನಿರ್ದೇಶಕ ಸುಕುಮಾರ್​ ಅವರು ಬಹಳ ಕಾಳಜಿಯಿಂದ ನಿರ್ದೇಶಿಸುತ್ತಿದ್ದಾರೆ. ಪ್ರಚಾರಕ್ಕಾಗಿ ದೊಡ್ಡ ದೊಡ್ಡ ಪ್ಲ್ಯಾನ್​ ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ. ಈಗಾಗಲೇ ಬಿಡುಗಡೆ ಆಗಿರುವ ಗಂಗಮ್ಮ ಜಾತ್ರೆ ಸನ್ನಿವೇಶದ ಪ್ರೋಮೋ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!