AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 15ರ ಅಖಾಡದಲ್ಲಿ ‘ಪುಷ್ಪ 2’ ಎದುರು ಘಟಾನುಘಟಿ ನಟರ ಪೈಪೋಟಿ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾ ಆಗಸ್ಟ್​ 15ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಆ ಸಿನಿಮಾ ಎದುರು ಘಟಾನುಘಟಿ ಸ್ಟಾರ್​ ನಟರ ಸಿನಿಮಾಗಳು ಪೈಪೋಟಿ ನೀಡುವ ಸೂಚನೆ ಸಿಗುತ್ತಿದೆ. ಇದರಿಂದಾಗಿ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್​ ಆಗುವ ಸಾಧ್ಯತೆ ಇದೆ. ಇದರಿಂದಾಗಿ ‘ಪುಷ್ಪ 2’ ಕಲೆಕ್ಷನ್​ ಕಡಿಮೆ ಆದರೂ ಆಚ್ಚರಿಯೇನಿಲ್ಲ.

ಆಗಸ್ಟ್​ 15ರ ಅಖಾಡದಲ್ಲಿ ‘ಪುಷ್ಪ 2’ ಎದುರು ಘಟಾನುಘಟಿ ನಟರ ಪೈಪೋಟಿ?
ಅಲ್ಲು ಅರ್ಜುನ್​, ಅಜಯ್​ ದೇವಗನ್​, ದಳಪತಿ ವಿಜಯ್​, ರಜನಿಕಾಂತ್​
ಮದನ್​ ಕುಮಾರ್​
|

Updated on: Mar 06, 2024 | 6:20 PM

Share

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಪುಷ್ಪ 2’ (Pushpa 2) ಸಿನಿಮಾದಿಂದ ದೊಡ್ಡ ಗೆಲುವು ಪಡೆಯಲು ಅಲ್ಲು ಅರ್ಜುನ್​ (Allu Arjun) ಕಾದಿದ್ದಾರೆ. ನೂರು ಕೋಟಿ ರೂಪಾಯಿ ಎಂಬುದೆಲ್ಲ ಈಗ ಸಣ್ಣ ಮೊತ್ತವಾಗಿ ಕಾಣುತ್ತಿದೆ. ಸ್ಟಾರ್​ ನಟರ ಸಿನಿಮಾಗಳು ಬ್ಲಾಕ್​ ಬಸ್ಟರ್​ ಎನಿಸಿಕೊಳ್ಳಬೇಕು ಎಂದರೆ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಬೇಕು. ‘ಪುಷ್ಪ 2’ ಸಿನಿಮಾ ಕೂಡ ಅದೇ ಗುರಿ ಇಟ್ಟುಕೊಂಡಿದೆ. ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಕಲೆಕ್ಷನ್​ ಆಗಲಿ ಎಂಬ ಉದ್ದೇಶದಿಂದಲೇ ವಿದೇಶದಲ್ಲೂ ಈ ಚಿತ್ರಕ್ಕೆ ಪ್ರಚಾರ ನೀಡಲಾಗುತ್ತಿದೆ. ಆದರೆ ಭಾರತದಲ್ಲಿ ‘ಪುಷ್ಪ 2’ ಚಿತ್ರಕ್ಕೆ ಅಜಯ್​ ದೇವಗನ್​ (Ajay Devgn), ರಜನಿಕಾಂತ್​, ದಳಪತಿ ವಿಜಯ್​ ಮುಂತಾದವರ ಸಿನಿಮಾಗಳು ಅಡ್ಡಗಾಲು ಹಾಕುವ ಸೂಚನೆ ಸಿಕ್ಕಿದೆ.

‘ಪುಷ್ಪ 2’ ಸಿನಿಮಾ ಆಗಸ್ಟ್​ 15ರಂದು ತೆರೆಕಾಣಲಿದೆ. ಸರ್ಕಾರಿ ರಜೆ ಇರುವುದರಿಂದ ಅಂದು ಸಿನಿಮಾ ಬಿಡುಗಡೆಯಾದರೆ ಭರ್ಜರಿ ಕಲೆಕ್ಷನ್​ ಆಗುತ್ತದೆ. ಹಾಗಾಗಿ ಆ ದಿನಾಂಕದ ಮೇಲೆ ಬೇರೆ ಸಿನಿಮಾ ತಂಡಗಳು ಕೂಡ ಕಣ್ಣು ಇಟ್ಟಿವೆ. ಅಜಯ್​ ದೇವಗನ್​ ನಟನೆಯ, ರೋಹಿತ್​ ಶೆಟ್ಟಿ ನಿರ್ದೇಶನದ ‘ಸಿಂಗಂ ಅಗೇನ್​’ ಸಿನಿಮಾ ಈಗಾಗಲೇ ರೇಸ್​ನಲ್ಲಿದೆ. ಬಾಲಿವುಡ್​ನ ಹಲವು ಕಲಾವಿದರು ಅಭಿನಯಿಸಿರುವ ಈ ಸಿನಿಮಾ ಕೂಡ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಹಾಗಾಗಿ ಹಿಂದಿ ಮಾರುಕಟ್ಟೆಯಲ್ಲಿ ‘ಪುಷ್ಪ 2’ ಸಿನಿಮಾದ ಕಲೆಕ್ಷನ್​ ಮೇಲೆ ಪರಿಣಾಮ ಬೀರಲಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್​ಗೆ ಟಿವಿ9 ನಕ್ಷತ್ರ ಅವಾರ್ಡ್: ‘ಪುಷ್ಪ’ ಹೇಳಿದ್ದೇನು?

ತಮಿಳುನಾಡಿನಲ್ಲಿ ಕೂಡ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ವರದಿಗಳ ಪ್ರಕಾರ, ‘ದಳಪತಿ’ ವಿಜಯ್​ ನಟನೆಯ ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾ ಕೂಡ ಆಗಸ್ಟ್​ 15ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ವೆಂಕಟ್​ ಪ್ರಭು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸೈನ್ಸ್​ ಫಿಕ್ಷನ್​ ಕಹಾನಿ ಇರಲಿದೆ. ಬೇರೆ ನಟರ ಜೊತೆ ಕ್ಲ್ಯಾಶ್​ ಮಾಡಿಕೊಳ್ಳಲು ದಳಪತಿ ವಿಜಯ್​ ಎಂದಿಗೂ ಹೆದರುವವರಲ್ಲ. ಹಾಗಾಗಿ ಅವರ ಸಿನಿಮಾ ‘ಪುಷ್ಪ 2’ ಚಿತ್ರದ ಎದುರು ಬಿಡುಗಡೆಯಾದರೆ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಅಲ್ಲು ಅರ್ಜುನ್​ ವಿವಾಹ ವಾರ್ಷಿಕೋತ್ಸವ; ಸ್ನೇಹಾ ರೆಡ್ಡಿ ಜತೆಗಿನ ದಾಂಪತ್ಯಕ್ಕೆ ಈಗ 13 ವರ್ಷ

ರಜನಿಕಾಂತ್​ ಕೂಡ ಆಗಸ್ಟ್​ 15ರ ಬಾಕ್ಸ್​ ಆಫೀಸ್​ ರೇಸ್​ನಲ್ಲಿ ಪೈಪೋಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ‘ವೆಟ್ಟೈಯನ್​’ ಸಿನಿಮಾದಲ್ಲಿ ರಜನಿಕಾಂತ್​ ಈಗ ನಟಿಸುತ್ತಿದ್ದಾರೆ. ಈ ಸಿನಿಮಾ ಕೂಡ ಆಗಸ್ಟ್​ ತಿಂಗಳಲ್ಲೇ ಬಿಡುಗಡೆ ಆಗಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಆಗಸ್ಟ್​ನಲ್ಲಿ ನಿಖರವಾಗಿ ಯಾವ ದಿನಾಂಕ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಒಂದು ವೇಳೆ ‘ವೆಟ್ಟೈಯನ್​’ ಕೂಡ ಆಗಸ್ಟ್​ 15ರಂದೇ ತೆರೆಕಂಡರೆ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್​ ಆಗಲಿದೆ.

ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ ಜೊತೆ ಫಹಾದ್ ಫಾಸಿಲ್​, ಡಾಲಿ ಧನಂಜಯ್​, ರಶ್ಮಿಕಾ ಮಂದಣ್ಣ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಕ್ರೇಜ್​ ಸೃಷ್ಟಿ ಮಾಡಿವೆ. ಹೈದರಾಬಾದ್​ನಲ್ಲಿ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್