AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kissik Song: ‘ಪುಷ್ಪ 2’ ಚಿತ್ರದ ಕಿಸಿಕ್ ಹಾಡು ರಿಲೀಸ್; ಮಿಂಚಿದ ಶ್ರೀಲೀಲಾ

ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಚೆನ್ನೈನಲ್ಲಿ ಅದ್ದೂರಿ ಇವೆಂಟ್ ಮಾಡುವ ಮೂಲಕ ಈ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಕಿಸಿಕ್..’ ಹಾಡಿನಲ್ಲಿ ಕನ್ನಡದ ನಟಿ ಶ್ರೀಲೀಲಾ ಮತ್ತು ಅಲ್ಲು ಅರ್ಜುನ್ ಅವರು ಹೆಜ್ಜೆ ಹಾಕಿದ್ದಾರೆ. ದೇವಿ ಶ್ರೀಪ್ರಸಾದ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಹಾಡು ಟ್ರೆಂಡ್ ಆಗುತ್ತಿದೆ.

Kissik Song: ‘ಪುಷ್ಪ 2’ ಚಿತ್ರದ ಕಿಸಿಕ್ ಹಾಡು ರಿಲೀಸ್; ಮಿಂಚಿದ ಶ್ರೀಲೀಲಾ
ಅಲ್ಲು ಅರ್ಜುನ್​, ಶ್ರೀಲೀಲಾ
ಮದನ್​ ಕುಮಾರ್​
|

Updated on: Nov 24, 2024 | 8:22 PM

Share

ಡಿಸೆಂಬರ್​ 5ರಂದು ‘ಪುಷ್ಪ 2’ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಟ್ರೇಲರ್​ ಮೂಲಕ ಈಗಾಗಲೇ ಧೂಳೆಬ್ಬಿಸಲಾಗಿದೆ. ಅಲ್ಲದೇ, ಟೈಟಲ್​ ಸಾಂಗ್ ಕೂಡ ಅಬ್ಬರಿಸಿದೆ. ಈಗ ಇನ್ನೊಂದು ಹಾಡು ಬಿಡುಗಡೆ ಆಗಿದೆ. ಈ ಸಾಂಗ್​ನಲ್ಲಿ ಶ್ರೀಲೀಲಾ ಅವರು ಅಲ್ಲು ಅರ್ಜುನ್ ಜೊತೆ ಬಿಂದಾಸ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ‘ಕಿಸಿಕ್..’ ಹಾಡಿನ ಅಬ್ಬರ ಜೋರಾಗಿದೆ. ಎಲ್ಲ ಕಡೆಗಳಲ್ಲಿ ಈ ಹಾಡು ಟ್ರೆಂಡ್ ಆಗುತ್ತಿದೆ. ‘ಪುಷ್ಪ 2’ ಚಿತ್ರಕ್ಕೆ ದೇವಿ ಶ್ರೀಪ್ರಸಾದ್ ಅವರು ಸಂಗೀತ ನೀಡಿದ್ದಾರೆ. ಚೈನ್ನೈನಲ್ಲಿ ಅದ್ದೂರಿಯಾಗಿ ಸಾಂಗ್ ರಿಲೀಸ್ ಮಾಡಲಾಗಿದೆ.

ನಿರ್ದೇಶಕ ಸುಕುಮಾರ್​ ಅವರು ತಮ್ಮ ಪ್ರತಿ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಮಹತ್ವ ನೀಡುತ್ತಾರೆ. ‘ಪುಷ್ಪ 2’ ಸಿನಿಮಾದಲ್ಲೂ ಅದು ಮುಂದುವರಿದಿದೆ. ‘ಕಿಸಿಕ್..’ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್ ಪ್ರಭು ಅವರು ಐಟಂ ಡ್ಯಾನ್ಸ್ ಮಾಡಿದ್ದರು. ಈಗ ಸೀಕ್ವೆಲ್​ನಲ್ಲಿ ಶ್ರೀಲೀಲಾ ಅವರು ಹೆಜ್ಜೆ ಹಾಕಿದ್ದಾರೆ. ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

‘ಕಿಸಿಕ್’ ಹಾಡಿಗೆ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಝಗಮಗಿಸುವ ಸೆಟ್​ನಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಸದ್ಯಕ್ಕೆ ಬಿಡುಗಡೆ ಆಗಿರುವುದು ಲಿರಿಕಲ್ ವಿಡಿಯೋ ಮಾತ್ರ. ಚಿತ್ರಮಂದಿರದಲ್ಲಿ ಪೂರ್ತಿ ಸಾಂಗ್ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಹಾಡು: ವಾರಾಣಸಿಗೆ ತೆರಳಿ ಆಶೀರ್ವಾದ ಪಡೆದ ಶ್ರೀಲೀಲಾ

ಅಲ್ಲು ಅರ್ಜುನ್ ಅವರ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾ ಇದು. ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ. ಪ್ರಚಾರಕ್ಕಾಗಿಯೂ ದೊಡ್ಡ ಬಜೆಟ್​ ಮೀಸಲಿಡಲಾಗಿದೆ. ಡಿಸೆಂಬರ್​ 5ರಂದು ದೇಶಾದ್ಯಂತ ‘ಪುಷ್ಪ 2’ ಸಿನಿಮಾ ಅಬ್ಬರಿಸಲಿದೆ. ಬಾಕ್ಸ್​ ಆಫೀಸ್​ನಲ್ಲಿ ಸುನಾಮಿಯೇ ಏಳುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ