AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಲಿದೆ.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?
ಅಲ್ಲು ಅರ್ಜುನ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 28, 2024 | 2:25 PM

Share

‘ಪುಷ್ಪ 2’ ಚಿತ್ರದ (Pushpa 2 Movie) ‘ಪುಷ್ಪ ಪುಷ್ಪ..’ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಈ ಹಾಡು ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಈ ಹಾಡನ್ನು ಟ್ರೋಲ್ ಮಾಡಿದ್ದಾರೆ. ಮನಸ್ಸಿಗೆ ಬಂದಂತೆ ಈ ಹಾಡಿನ ಸಾಲುಗಳನ್ನು ಬರೆಯಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಅಲ್ಲು ಅರ್ಜುನ್ ಹಾಕಿದ ಸ್ಟೆಪ್ ಕೂಡ ಟ್ರೋಲ್ ಆಗಿದೆ. ಈ ಟ್ರೋಲ್​​ಗಳಿಂದ ಆದ ಹಾನಿಯನ್ನು ಮುಚ್ಚಲು ತಂಡ ಮತ್ತೊಂದು ಹಾಡನ್ನು ರಿಲೀಸ್ ಮಾಡುತ್ತಿದೆ. ತೆಲುಗಿನಲ್ಲಿ ‘ಸೂಸೆಕಿ..’ ಎಂದಿದ್ದು, ಕನ್ನಡದಲ್ಲಿ ‘ನೋಡೋಕ..’ ಟೈಟಲ್ ಕೊಡಲಾಗಿದೆ.

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಒಂದೊಂದಾಗಿ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ‘ನೋಡೋಕ..’ ಹಾಡು ಯಾವ ರೀತಿಯಲ್ಲಿ ಮ್ಯಾಜಿಕ್ ಮಾಡಲಿದೆ ಎನ್ನುವ ಕುತೂಹಲ ಮೂಡಿದೆ.

‘ನೋಡೋಕ’ ಹಾಡಿಗೆ ರಾಕ್​ಸ್ಟಾರ್ ದೇವಿಶ್ರೀ ಪ್ರಸಾದ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಶ್ರೇಯಾ ಘೋಷಾಲ್ ಅವರು ಹಾಡಿದ್ದಾರೆ. ಈ ಹಾಡನ್ನು ಚಿತ್ರತಂಡ ‘ದಿ ಕಪಲ್ ಸಾಂಗ್’ ಎಂದು ಕರೆದಿದೆ. ಈ ಹಾಡಿನ ಪೋಸ್ಟರ್ ಗಮನ ಸೆಳೆದಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಒಟ್ಟಾಗಿ ನಿಂತಿದ್ದಾರೆ. ರಶ್ಮಿಕಾ ಮೊಗದಲ್ಲಿರೋ ನಗು ಗಮನ ಸೆಳೆದಿದೆ.

ಇದನ್ನೂ ಓದಿ: ‘ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲಿದೆ ಪುಷ್ಪ ತಂಡ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ

‘ಪುಷ್ಪ 2’ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?