AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಲಿದೆ.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?
ಅಲ್ಲು ಅರ್ಜುನ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 28, 2024 | 2:25 PM

Share

‘ಪುಷ್ಪ 2’ ಚಿತ್ರದ (Pushpa 2 Movie) ‘ಪುಷ್ಪ ಪುಷ್ಪ..’ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಈ ಹಾಡು ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಈ ಹಾಡನ್ನು ಟ್ರೋಲ್ ಮಾಡಿದ್ದಾರೆ. ಮನಸ್ಸಿಗೆ ಬಂದಂತೆ ಈ ಹಾಡಿನ ಸಾಲುಗಳನ್ನು ಬರೆಯಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಅಲ್ಲು ಅರ್ಜುನ್ ಹಾಕಿದ ಸ್ಟೆಪ್ ಕೂಡ ಟ್ರೋಲ್ ಆಗಿದೆ. ಈ ಟ್ರೋಲ್​​ಗಳಿಂದ ಆದ ಹಾನಿಯನ್ನು ಮುಚ್ಚಲು ತಂಡ ಮತ್ತೊಂದು ಹಾಡನ್ನು ರಿಲೀಸ್ ಮಾಡುತ್ತಿದೆ. ತೆಲುಗಿನಲ್ಲಿ ‘ಸೂಸೆಕಿ..’ ಎಂದಿದ್ದು, ಕನ್ನಡದಲ್ಲಿ ‘ನೋಡೋಕ..’ ಟೈಟಲ್ ಕೊಡಲಾಗಿದೆ.

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಒಂದೊಂದಾಗಿ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ‘ನೋಡೋಕ..’ ಹಾಡು ಯಾವ ರೀತಿಯಲ್ಲಿ ಮ್ಯಾಜಿಕ್ ಮಾಡಲಿದೆ ಎನ್ನುವ ಕುತೂಹಲ ಮೂಡಿದೆ.

‘ನೋಡೋಕ’ ಹಾಡಿಗೆ ರಾಕ್​ಸ್ಟಾರ್ ದೇವಿಶ್ರೀ ಪ್ರಸಾದ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಶ್ರೇಯಾ ಘೋಷಾಲ್ ಅವರು ಹಾಡಿದ್ದಾರೆ. ಈ ಹಾಡನ್ನು ಚಿತ್ರತಂಡ ‘ದಿ ಕಪಲ್ ಸಾಂಗ್’ ಎಂದು ಕರೆದಿದೆ. ಈ ಹಾಡಿನ ಪೋಸ್ಟರ್ ಗಮನ ಸೆಳೆದಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಒಟ್ಟಾಗಿ ನಿಂತಿದ್ದಾರೆ. ರಶ್ಮಿಕಾ ಮೊಗದಲ್ಲಿರೋ ನಗು ಗಮನ ಸೆಳೆದಿದೆ.

ಇದನ್ನೂ ಓದಿ: ‘ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲಿದೆ ಪುಷ್ಪ ತಂಡ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ

‘ಪುಷ್ಪ 2’ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ