AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಚಿತ್ರದ ಶೂಟಿಂಗ್​ಗೆ ಬಂದ ಅಲ್ಲು ಅರ್ಜುನ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

Pushpa 2 Movie Shooting Update: ‘ಪುಷ್ಪ’ ಚಿತ್ರಕ್ಕೆ ಹೋಲಿಸಿದರೆ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಭಿನ್ನವಾಗಿ ಇರಲಿದೆ ಎಂಬ ಮಾತಿದೆ. ಈಗ ಅವರು ಶೂಟಿಂಗ್​ ಆರಂಭಿಸಿದ್ದಾರೆ.

Allu Arjun: ‘ಪುಷ್ಪ 2’ ಚಿತ್ರದ ಶೂಟಿಂಗ್​ಗೆ ಬಂದ ಅಲ್ಲು ಅರ್ಜುನ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಅಲ್ಲು ಅರ್ಜುನ್
TV9 Web
| Edited By: |

Updated on: Jan 20, 2023 | 7:26 PM

Share

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರ ವೃತ್ತಿಜೀವನದಲ್ಲಿ ಅತಿ ದೊಡ್ಡ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ‘ಪುಷ್ಪ’ ಸಿನಿಮಾವನ್ನು ಪ್ರೇಕ್ಷಕರು ಸಖತ್​ ಇಷ್ಟಪಟ್ಟರು. ಆ ಚಿತ್ರ ಎರಡು ಪಾರ್ಟ್​ನಲ್ಲಿ ಬರಲಿದೆ ಎಂದು ಮೊದಲೇ ಹೇಳಲಾಗಿತ್ತು. ಮೊದಲ ಪಾರ್ಟ್​ ಬಿಡುಗಡೆಯಾಗಿ ವರ್ಷವೇ ಉರುಳಿದರೂ ಕೂಡ 2ನೇ ಪಾರ್ಟ್​ಗೆ (Pushpa The Rule) ಚಿತ್ರೀಕರಣ ಶುರುವಾಗಲಿಲ್ಲ. ಆದರೆ ಈಗ ‘ಪುಷ್ಪ 2’ (Pushpa 2) ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ನಾಯಕ ನಟ ಅಲ್ಲು ಅರ್ಜುನ್​ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್​ ಸಲುವಾಗಿ ವಿಶಾಖಪಟ್ಟಣಕ್ಕೆ ಆಗಮಿಸಿದ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಅವರ ಹೊಸ ಲುಕ್​ ಗಮನ ಸೆಳೆದಿದೆ.

‘ಪುಷ್ಪ 2’ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ‘ಪುಷ್ಪ 2’ ಶೂಟಿಂಗ್​ ಶುರುವಾಗಲಿದೆ ಎಂದು ಅವರು ಇತ್ತೀಚೆಗಷ್ಟೇ ಹೇಳಿದ್ದರು. ಈಗ ಅಲ್ಲು ಅರ್ಜುನ್​ ಅವರು ಚಿತ್ರೀಕರಣಕ್ಕಾಗಿ ವಿಶಾಖಪಟ್ಟಣಕ್ಕೆ ಆಗಮಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆದಷ್ಟು ಬೇಗ ಈ ಚಿತ್ರದ ಶೂಟಿಂಗ್​ ಮುಗಿಯಲು ಮತ್ತು ದೊಡ್ಡ ಪರದೆಯಲ್ಲಿ ಸಿನಿಮಾವನ್ನು ಕಣ್ತುಂಬಿಕೊಳ್ಳುವ ಸಮಯ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

ಇದನ್ನೂ ಓದಿ: Dhananjay: ‘ಪುಷ್ಪ 2’ ಚಿತ್ರದ ಶೂಟಿಂಗ್​ ಬಗ್ಗೆ ಧನಂಜಯ್ ಕೊಟ್ರು ಅಪ್​ಡೇಟ್​

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಪುಷ್ಪ’ ಚಿತ್ರ ಮೂಡಿಬಂತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಸಖತ್​ ಇಷ್ಟಪಟ್ಟರು. ಪರಿಣಾಮವಾಗಿ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ಆದ್ದರಿಂದ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ನಿರ್ದೇಶಕ ಸುಕುಮಾರ್​ ಅವರು ಸ್ಕ್ರಿಪ್ಟ್​​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ಆ ಕಾರಣದಿಂದಲೂ ಶೂಟಿಂಗ್ ಆರಂಭ ಆಗುವುದು ವಿಳಂಬ ಆಯ್ತು.

ಇದನ್ನೂ ಓದಿ: Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ತುಂಬ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಸೀಕ್ವೆಲ್​ನಲ್ಲಿ ಅವರ ಲುಕ್​ ಬದಲಾಗಲಿದೆ. ಅವರು ಸ್ಪೈಲಿಶ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದ ಕಥೆ ವಿದೇಶದಲ್ಲಿಯೂ ನಡೆಯಲಿದೆ ಎಂಬ ಮಾತು ಕೇಳಿಬಂದಿದೆ. ಇದರ ಸಲುವಾಗಿ ಅಲ್ಲು ಅರ್ಜುನ್​ ಅವರು ದೇಹದ ತೂಕ ಹೆಚ್ಚಿಸಿಕೊಂಡಿದ್ದಾರೆ. ಆ ಬದಲಾವಣೆಯನ್ನು ಫ್ಯಾನ್ಸ್​ ಗಮನಿಸಿದ್ದಾರೆ.

ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ