AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?

ಸಿನಿಮಾದಲ್ಲಿ ಮಾತ್ರವಲ್ಲದೇ ರಿಯಲ್​ ಲೈಫ್​ನಲ್ಲಿಯೂ ಅಲ್ಲು ಅರ್ಜುನ್​ ಅವರು ಹೀರೋ ಎನಿಸಿಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ನೀಡಿದರೂ ಕೂಡ ಕೆಲವು ಕೆಲಸಗಳನ್ನು ಮಾಡಬಾರದು ಎಂಬ ಪಾಲಿಸಿ ಅವರದ್ದು. ‘ಪುಷ್ಪ 2’ ಶೂಟಿಂಗ್​ ವೇಳೆ ಬಂದ ಒಂದು ಆಫರ್​ ಅನ್ನು ಅವರು ಈ ಕಾರಣಕ್ಕಾಗಿ ತಿರಸ್ಕರಿಸಿದ್ದಾರೆ.

10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Dec 14, 2023 | 6:17 PM

Share

ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ (Pushpa 2) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದು, ಶೂಟಿಂಗ್​ ಚಾಲ್ತಿಯಲ್ಲಿದೆ. ಚಿತ್ರೀಕರಣ ನಡೆಯುತ್ತಿರುವಾಗಲೇ ಅಲ್ಲು ಅರ್ಜುನ್​ (Allu Arjun) ಅವರಿಗೆ 10 ಕೋಟಿ ರೂಪಾಯಿ ಮೌಲ್ಯದ ಒಂದು ಆಫರ್​ ಬಂದಿದೆ. ಆದರೆ ಅವರು ಅದನ್ನು ಒಪ್ಪಿಕೊಂಡಿಲ್ಲ. ಏನು ಆ ಆಫರ್​? ಮದ್ಯಪಾನ ಕಂಪನಿಗೆ ಪ್ರಚಾರ ನೀಡುವುದು! ಆದರೆ ಅದನ್ನು ಅಲ್ಲು ಅರ್ಜುನ್ ಅವರು ತಿಸ್ಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

‘ಪುಷ್ಪ 2’ ಸಿನಿಮಾದಲ್ಲಿ ಕಥಾನಾಯಕ ಮದ್ಯಪಾನ ಮಾಡುತ್ತಾನೆ, ಸಿಗರೇಟ್​ ಸೇದುತ್ತಾನೆ. ಹಾಗಾಗಿ ಅಂಥ ದೃಶ್ಯಗಳಲ್ಲಿ ನಿರ್ದಿಷ್ಟ ಬ್ರ್ಯಾಂಡ್​ನ ಆಲ್ಕೋಹಾಲ್​ ತೋರಿಸಿದರೆ 10 ಕೋಟಿ ರೂಪಾಯಿ ಸಂಭಾವನೆ ಕೊಡುವುದಾಗಿ ಆಫರ್​ ನೀಡಲಾಗಿದೆ. ಆದರೆ ಅಂಥ ಕೆಲಸ ಮಾಡಲು ಅಲ್ಲು ಅರ್ಜುನ್​ ಸಿದ್ಧರಿಲ್ಲ. ಹಾಗಾಗಿ ಅವರು ಈ ಆಫರ್​ ಒಪ್ಪಿಕೊಂಡಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆಲ್ಕೋಹಾಲ್​, ಸಿಗರೇಟ್​, ಗುಟ್ಕಾ ತಯಾರು ಮಾಡುವ ಕಂಪನಿಗಳು ತಮ್ಮ ಹೆಸರಿನಲ್ಲಿ ಪರ್ಯಾಯ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ನೇರವಾಗಿ ಇಂಥ ಉತ್ಪನ್ನಗಳ ಜಾಹೀರಾತನ್ನು ನೀಡುವಂತಿಲ್ಲ ಎಂಬ ಕಾರಣಕ್ಕೆ ಪ್ರರ್ಯಾಯ ಮಾರ್ಗಗಳನ್ನು ಹುಡುಕಲಾಗುತ್ತದೆ. ಗುಟ್ಕಾ ಬದಲಿಗೆ ಪಾನ್​ ಮಸಾಲ ಎನ್ನುವುದು, ಆಲ್ಕೋಹಾಲ್​ ಬ್ರ್ಯಾಂಡ್​ನ ಹೆಸರನ್ನು ತುಂಪು ಪಾನೀಯಕ್ಕೆ ಇಡುವುದು ಸೇರಿದಂತೆ ಅನೇಕ ಅಡ್ಡದಾರಿಗಳು ಇವೆ. ಆದರೆ ಇಂಥ ಜಾಹೀರಾತಿನಲ್ಲಿ ನಟಿಸಲು ಅಲ್ಲು ಅರ್ಜುನ್​ ಸಿದ್ಧರಿಲ್ಲ.

ಇದನ್ನೂ ಓದಿ: ‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಅಲ್ಲು ಅರ್ಜುನ್​ ಅವರು ಈ ನಿರ್ಧಾರ ತೆಗೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ಹೆಮ್ಮೆ ಆಗಿದೆ. ಸದ್ಯ ಅವರ ಸಂಪೂರ್ಣ ಗಮನ ‘ಪುಷ್ಪ 2’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಕನ್ನಡದ ನಟ ಡಾಲಿ ಧನಂಜಯ್​, ಮಲಯಾಳಂ ನಟ ಫಹಾದ್​ ಫಾಸಿಲ್​ ಮುಂತಾದವರು ಕೂಡ ಅಭಿನಯಿಸುತ್ತಿದ್ದಾರೆ. 2024ರ ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು