10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?

ಸಿನಿಮಾದಲ್ಲಿ ಮಾತ್ರವಲ್ಲದೇ ರಿಯಲ್​ ಲೈಫ್​ನಲ್ಲಿಯೂ ಅಲ್ಲು ಅರ್ಜುನ್​ ಅವರು ಹೀರೋ ಎನಿಸಿಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ನೀಡಿದರೂ ಕೂಡ ಕೆಲವು ಕೆಲಸಗಳನ್ನು ಮಾಡಬಾರದು ಎಂಬ ಪಾಲಿಸಿ ಅವರದ್ದು. ‘ಪುಷ್ಪ 2’ ಶೂಟಿಂಗ್​ ವೇಳೆ ಬಂದ ಒಂದು ಆಫರ್​ ಅನ್ನು ಅವರು ಈ ಕಾರಣಕ್ಕಾಗಿ ತಿರಸ್ಕರಿಸಿದ್ದಾರೆ.

10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?
ಅಲ್ಲು ಅರ್ಜುನ್​

Updated on: Dec 14, 2023 | 6:17 PM

ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ (Pushpa 2) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದು, ಶೂಟಿಂಗ್​ ಚಾಲ್ತಿಯಲ್ಲಿದೆ. ಚಿತ್ರೀಕರಣ ನಡೆಯುತ್ತಿರುವಾಗಲೇ ಅಲ್ಲು ಅರ್ಜುನ್​ (Allu Arjun) ಅವರಿಗೆ 10 ಕೋಟಿ ರೂಪಾಯಿ ಮೌಲ್ಯದ ಒಂದು ಆಫರ್​ ಬಂದಿದೆ. ಆದರೆ ಅವರು ಅದನ್ನು ಒಪ್ಪಿಕೊಂಡಿಲ್ಲ. ಏನು ಆ ಆಫರ್​? ಮದ್ಯಪಾನ ಕಂಪನಿಗೆ ಪ್ರಚಾರ ನೀಡುವುದು! ಆದರೆ ಅದನ್ನು ಅಲ್ಲು ಅರ್ಜುನ್ ಅವರು ತಿಸ್ಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

‘ಪುಷ್ಪ 2’ ಸಿನಿಮಾದಲ್ಲಿ ಕಥಾನಾಯಕ ಮದ್ಯಪಾನ ಮಾಡುತ್ತಾನೆ, ಸಿಗರೇಟ್​ ಸೇದುತ್ತಾನೆ. ಹಾಗಾಗಿ ಅಂಥ ದೃಶ್ಯಗಳಲ್ಲಿ ನಿರ್ದಿಷ್ಟ ಬ್ರ್ಯಾಂಡ್​ನ ಆಲ್ಕೋಹಾಲ್​ ತೋರಿಸಿದರೆ 10 ಕೋಟಿ ರೂಪಾಯಿ ಸಂಭಾವನೆ ಕೊಡುವುದಾಗಿ ಆಫರ್​ ನೀಡಲಾಗಿದೆ. ಆದರೆ ಅಂಥ ಕೆಲಸ ಮಾಡಲು ಅಲ್ಲು ಅರ್ಜುನ್​ ಸಿದ್ಧರಿಲ್ಲ. ಹಾಗಾಗಿ ಅವರು ಈ ಆಫರ್​ ಒಪ್ಪಿಕೊಂಡಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆಲ್ಕೋಹಾಲ್​, ಸಿಗರೇಟ್​, ಗುಟ್ಕಾ ತಯಾರು ಮಾಡುವ ಕಂಪನಿಗಳು ತಮ್ಮ ಹೆಸರಿನಲ್ಲಿ ಪರ್ಯಾಯ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ನೇರವಾಗಿ ಇಂಥ ಉತ್ಪನ್ನಗಳ ಜಾಹೀರಾತನ್ನು ನೀಡುವಂತಿಲ್ಲ ಎಂಬ ಕಾರಣಕ್ಕೆ ಪ್ರರ್ಯಾಯ ಮಾರ್ಗಗಳನ್ನು ಹುಡುಕಲಾಗುತ್ತದೆ. ಗುಟ್ಕಾ ಬದಲಿಗೆ ಪಾನ್​ ಮಸಾಲ ಎನ್ನುವುದು, ಆಲ್ಕೋಹಾಲ್​ ಬ್ರ್ಯಾಂಡ್​ನ ಹೆಸರನ್ನು ತುಂಪು ಪಾನೀಯಕ್ಕೆ ಇಡುವುದು ಸೇರಿದಂತೆ ಅನೇಕ ಅಡ್ಡದಾರಿಗಳು ಇವೆ. ಆದರೆ ಇಂಥ ಜಾಹೀರಾತಿನಲ್ಲಿ ನಟಿಸಲು ಅಲ್ಲು ಅರ್ಜುನ್​ ಸಿದ್ಧರಿಲ್ಲ.

ಇದನ್ನೂ ಓದಿ: ‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಅಲ್ಲು ಅರ್ಜುನ್​ ಅವರು ಈ ನಿರ್ಧಾರ ತೆಗೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ಹೆಮ್ಮೆ ಆಗಿದೆ. ಸದ್ಯ ಅವರ ಸಂಪೂರ್ಣ ಗಮನ ‘ಪುಷ್ಪ 2’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಕನ್ನಡದ ನಟ ಡಾಲಿ ಧನಂಜಯ್​, ಮಲಯಾಳಂ ನಟ ಫಹಾದ್​ ಫಾಸಿಲ್​ ಮುಂತಾದವರು ಕೂಡ ಅಭಿನಯಿಸುತ್ತಿದ್ದಾರೆ. 2024ರ ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us