AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​

Pushpa 2 First Glimpse: ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾದ ಕಥೆಗೆ ಟ್ವಿಸ್ಟ್​ ನೀಡುತ್ತಿದ್ದಾರೆ. ಅದರ ಝಲಕ್​ ತೋರಿಸಲು ಒಂದು ಚಿಕ್ಕ ವಿಡಿಯೋ ಹಂಚಿಕೊಳ್ಳಲಾಗಿದೆ.

Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Apr 05, 2023 | 6:35 PM

Share

ಮುಖ್ಯಾಂಶಗಳು

  • ಭಾರಿ ಕೌತುಕ ಮೂಡಿಸಿದ ‘ಪುಷ್ಪ 2’ ಸಿನಿಮಾದ ಕಥೆ
  • ಅಲ್ಲು ಅರ್ಜುನ್​ ಹುಟ್ಟುಹಬ್ಬಕ್ಕೆ ಬರಲಿದೆ ಫಸ್ಟ್​ ಗ್ಲಿಂಪ್ಸ್​
  • ತಿರುಪತಿ ಜೈಲಿನಿಂದ ಪುಷ್ಪರಾಜ್​ ಎಸ್ಕೇಪ್​ ಆಗಿದ್ದು ಹೇಗೆ?

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ (Pushpa 2) ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದರು. ಅಂಥವರಿಗೆಲ್ಲ ಶುಭ ಸಮಾಚಾರ ಸಿಕ್ಕಿದೆ. ಅಲ್ಲು ಅರ್ಜುನ್​ (Allu Arjun) ಹುಟ್ಟುಹಬ್ಬದ ಸಲುವಾಗಿ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಅದನ್ನು ತಿಳಿಸುವ ಸಲುವಾಗಿ ಇಂದು (ಏಪ್ರಿಲ್​ 5) ಚಿಕ್ಕ ವಿಡಿಯೋ​ ಬಿಡುಗಡೆ ಮಾಡಲಾಗಿದೆ. ಇದನ್ನು ನೋಡಿದ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಬರ್ತ್​ಡೇ (Allu Arjun Birthday) ಆಚರಿಸಲು ಅಭಿಮಾನಿಗಳು ಕಾದಿದ್ದಾರೆ. ಅದಕ್ಕೂ ಒಂದು ದಿನ ಮುನ್ನ ಅಂದರೆ, ಏಪ್ರಿಲ್​ 7ರ ಸಂಜೆ 4 ಗಂಟೆ 5 ನಿಮಿಷಕ್ಕೆ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆಗಲಿದೆ.

‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್​ ಬಸ್ಟರ್​ ಆಯಿತು. ಈಗ ‘ಪುಷ್ಪ 2’ ಚಿತ್ರ ಕೂಡ ಅದ್ದೂರಿಯಾಗಿ ತಯಾರಾಗುತ್ತಿದೆ. ಬಹುಭಾಷೆಯಲ್ಲಿ ಫಸ್ಟ್​ ಗ್ಲಿಂಪ್ಸ್​ ಅನಾವರಣ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಮೊದಲು ಯೂಟ್ಯೂಬ್​ನಲ್ಲಿ ಬಹುಭಾಷೆಯ ಆಡಿಯೋ ಆಯ್ಕೆ ಇರಲಿಲ್ಲ. ಪ್ರತಿ ಭಾಷೆಯ ಕಾಂಟೆಂಟ್​ಗಳನ್ನು ಪ್ರತ್ಯೇಕವಾಗಿ ಅಪ್​ಲೋಡ್​ ಮಾಡಬೇಕಿತ್ತು. ಆದರೆ ಈಗ ಮಲ್ಟಿ ಆಡಿಯೋ ಆಯ್ಕೆಯ ಅವಕಾಶ ನೀಡಲಾಗಿದೆ. ‘ಪುಷ್ಪ 2’ ಗ್ಲಿಂಪ್ಸ್​ ಕೂಡ ಅದೇ ರೀತಿಯಲ್ಲಿ ಬಿಡುಗಡೆ ಆಗಲಿದೆ ಎಂಬುದು ವಿಶೇಷ.

ಇದನ್ನೂ ಓದಿ
Image
ಪ್ರಶಾಂತ್ ನೀಲ್ ಜತೆ ಸ್ಪರ್ಧೆಗೆ ಇಳಿಯಲಿದ್ದಾರೆ ‘ಪುಷ್ಪ 2’ ನಿರ್ದೇಶಕ ಸುಕುಮಾರ್​; ಗೆಲ್ಲೋದು ಯಾರು?
Image
ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?
Image
‘ಕೆಜಿಎಫ್ 2’ ಎಫೆಕ್ಟ್​; ಹೆಚ್ಚಿತು ‘ಪುಷ್ಪ 2’ ಚಿತ್ರದ ಬೇಡಿಕೆ, ಶೂಟಿಂಗ್​ಗೂ​ ಮೊದಲೇ 700 ಕೋಟಿ ರೂಪಾಯಿ ಡೀಲ್
Image
‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

ಈಗ ಬಿಡುಗಡೆ ಆಗಿರುವ ಚಿಕ್ಕ ವಿಡಿಯೋದಲ್ಲಿ ಕಥೆ ಬಗ್ಗೆ ಸಣ್ಣ ಸುಳಿವು ನೀಡಲಾಗಿದೆ. ‘ಗುಂಡಿನಿಂದ ಗಾಯಗೊಂಡಿರುವ ಪುಷ್ಪರಾಜ್​ ತಿರುಪತಿ ಜೈಲಿನಿಂದ ಎಸ್ಕೇಪ್​ ಆಗಿದ್ದಾನೆ. ಈಗ ಎಲ್ಲಿದ್ದಾನೆ ಪುಷ್ಪ?’ ಎಂಬ ಹಿನ್ನೆಲೆ ಧ್ವನಿ ಈ ವಿಡಿಯೋದಲ್ಲಿದೆ. ಆ ಮೂಲಕ ಕಥೆಯ ಬಗ್ಗೆ ಚಿತ್ರತಂಡ ಕೌತುಕ ಸೃಷ್ಟಿ ಮಾಡಿದೆ. ಪುಷ್ಪರಾಜ್​ ಜೈಲಿಗೆ ಹೋಗುವಂತಾಗಿದ್ದು ಹೇಗೆ? ಅಲ್ಲಿಂದ ತಪ್ಪಿಸಿಕೊಳ್ಳಲು ಆತ ಮಾಡಿದ ಸಾಹಸ ಎಂಥದ್ದು? ಇತ್ಯಾದಿ ವಿವರಗಳನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ

ಸುಕುಮಾರ್​ ಅವರು ‘ಪುಷ್ಪ 2’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ ಜೊತೆ ಫಹಾದ್​ ಫಾಸಿಲ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆಯು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ಅಲ್ಲು ಅರ್ಜುನ್​ ಅವರ ಜನ್ಮದಿನದ ಪ್ರಯುಕ್ತ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆಗಲಿರುವುದರಿಂದ ಅಭಿಮಾನಿಗಳಿಗೆ ಈ ಬಾರಿ ತಮ್ಮ ನೆಚ್ಚಿನ ನಟನ ಬರ್ತ್​ಡೇ ಸಖತ್ ವಿಶೇಷವಾಗಿರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್