AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ ದೋಚುತ್ತಿದೆ. ಬಿಡುಗಡೆ ಆದ ನಾಲ್ಕೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್ ಮಾಡಿದ್ದ ‘ಪುಷ್ಪ 2’ ಸಿನಿಮಾ, ಈಗ ‘ಬಾಹುಬಲಿ’ ಸಿನಿಮಾದ ದಾಖಲೆಯನ್ನು ಮುರಿಯಲು ಸಜ್ಜಾಗಿ ನಿಂತಿದೆ. ‘ಬಾಹುಬಲಿ’ ಮಾತ್ರವೇ ಅಲ್ಲದೆ, ‘ಆರ್​ಆರ್​ಆರ್’, ‘ಕೆಜಿಎಫ್ 2’ ಸಿನಿಮಾದ ಬಾಕ್ಸ್ ಆಫೀಸ್​ ದಾಖಲೆಗಳನ್ನು ಮುರಿಯಲಿದೆ ‘ಪುಷ್ಪ 2’.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ
Pushpa 2 Bahubali 2
ಮಂಜುನಾಥ ಸಿ.
|

Updated on: Dec 28, 2024 | 4:52 PM

Share

ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು. ಆದರೆ, ಈಗಿನ ಸಿನಿಮಾಗಳು ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಹೊಸ ದಾಖಲೆ ಸೃಷ್ಟಿಸುತ್ತಿವೆ. ಆದರೆ ಈಗ ಪುಷ್ಪ 2 ಚಿತ್ರ ಎಲ್ಲಾ ದಾಖಲೆಗಳನ್ನು ಮುರಿಯಲಿದೆ.

ಆಮಿರ್ ಖಾನ್ ನಟನೆಯ ‘ದಂಗಲ್’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಸೃಷ್ಟಿಸಿದೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರ ವಿಶ್ವದಾದ್ಯಂತ ರೂ. 2024.6 ಕೋಟಿ ಸಂಗ್ರಹಿಸಿದೆ. ಈ ದಾಖಲೆಯನ್ನು ಯಾವ ಸಿನಿಮಾದಿಂದ ಈವರೆಗೆ ಮುರಿಯಲಾಗಿಲ್ಲ.

‘ಬಾಹುಬಲಿ 2’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಿತ್ತು. ‘ಬಾಹುಬಲಿ 2’ ಚಿತ್ರ ವಿಶ್ವದಾದ್ಯಂತ ರೂ. 1742.3 ಕೋಟಿ ಗಳಿಸಿದೆ. ಈ ಮೂಲಕ ದಾಖಲೆ ಬರೆದಿತ್ತು. ಇದನ್ನು ‘ಪುಷ್ಪ 2’ ಮುರಿಯಲು ರೆಡಿ ಆಗಿದೆ.

ಇದನ್ನೂ ಓದಿ:‘ಪುಷ್ಪ 2’ ಹಾಡಿಗೆ ಅದ್ವಿತಿ ಶೆಟ್ಟಿ ಮಸ್ತ್ ಡ್ಯಾನ್ಸ್

‘ಪುಷ್ಪ 2’ ಈಗ ಮೂರನೇ ಸ್ಥಾನದಲ್ಲಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರಮಂದಿರಗಳಲ್ಲಿ ಇಂದಿಗೂ ಮಿಂಚುತ್ತಿದೆ. ಈ ಚಿತ್ರ ಈಗಾಗಲೇ ರೂ. 1719.5 ಕೋಟಿ ಸಂಗ್ರಹಿಸಿದೆ. ಶೀಘ್ರದಲ್ಲೇ ‘ಪುಷ್ಪ 2’ ಚಿತ್ರವು ‘ಬಾಹುಬಲಿ 2’ ದಾಖಲೆಯನ್ನು ಮುರಿಯಲಿದೆ.

ನಾಲ್ಕನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಸಿನಿಮಾ ಇದೆ. ರಾಮ್ ಚರಣ್ ಮತ್ತು ಎನ್ಟಿಆರ್ ಅಭಿನಯದ RRR ಚಿತ್ರ ವಿಶ್ವಾದ್ಯಂತ ರೂ. 1250.9 ಕೋಟಿ ಸಂಗ್ರಹಿಸಲಾಗಿದೆ. ಈ ಸಿನಿಮಾದ ನಂತರ ಯಶ್ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ ರೂ. 1176.5 ಕೋಟಿ ಸಂಗ್ರಹಿಸಿದೆ. ಈಗ ಎಲ್ಲ ದಾಖಲೆಗಳನ್ನು ‘ಪುಷ್ಪ 2’ ಉಡೀಸ್ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್