AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ ದೋಚುತ್ತಿದೆ. ಬಿಡುಗಡೆ ಆದ ನಾಲ್ಕೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್ ಮಾಡಿದ್ದ ‘ಪುಷ್ಪ 2’ ಸಿನಿಮಾ, ಈಗ ‘ಬಾಹುಬಲಿ’ ಸಿನಿಮಾದ ದಾಖಲೆಯನ್ನು ಮುರಿಯಲು ಸಜ್ಜಾಗಿ ನಿಂತಿದೆ. ‘ಬಾಹುಬಲಿ’ ಮಾತ್ರವೇ ಅಲ್ಲದೆ, ‘ಆರ್​ಆರ್​ಆರ್’, ‘ಕೆಜಿಎಫ್ 2’ ಸಿನಿಮಾದ ಬಾಕ್ಸ್ ಆಫೀಸ್​ ದಾಖಲೆಗಳನ್ನು ಮುರಿಯಲಿದೆ ‘ಪುಷ್ಪ 2’.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ
Pushpa 2 Bahubali 2
Follow us
ಮಂಜುನಾಥ ಸಿ.
|

Updated on: Dec 28, 2024 | 4:52 PM

ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು. ಆದರೆ, ಈಗಿನ ಸಿನಿಮಾಗಳು ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಹೊಸ ದಾಖಲೆ ಸೃಷ್ಟಿಸುತ್ತಿವೆ. ಆದರೆ ಈಗ ಪುಷ್ಪ 2 ಚಿತ್ರ ಎಲ್ಲಾ ದಾಖಲೆಗಳನ್ನು ಮುರಿಯಲಿದೆ.

ಆಮಿರ್ ಖಾನ್ ನಟನೆಯ ‘ದಂಗಲ್’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಸೃಷ್ಟಿಸಿದೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರ ವಿಶ್ವದಾದ್ಯಂತ ರೂ. 2024.6 ಕೋಟಿ ಸಂಗ್ರಹಿಸಿದೆ. ಈ ದಾಖಲೆಯನ್ನು ಯಾವ ಸಿನಿಮಾದಿಂದ ಈವರೆಗೆ ಮುರಿಯಲಾಗಿಲ್ಲ.

‘ಬಾಹುಬಲಿ 2’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಿತ್ತು. ‘ಬಾಹುಬಲಿ 2’ ಚಿತ್ರ ವಿಶ್ವದಾದ್ಯಂತ ರೂ. 1742.3 ಕೋಟಿ ಗಳಿಸಿದೆ. ಈ ಮೂಲಕ ದಾಖಲೆ ಬರೆದಿತ್ತು. ಇದನ್ನು ‘ಪುಷ್ಪ 2’ ಮುರಿಯಲು ರೆಡಿ ಆಗಿದೆ.

ಇದನ್ನೂ ಓದಿ:‘ಪುಷ್ಪ 2’ ಹಾಡಿಗೆ ಅದ್ವಿತಿ ಶೆಟ್ಟಿ ಮಸ್ತ್ ಡ್ಯಾನ್ಸ್

‘ಪುಷ್ಪ 2’ ಈಗ ಮೂರನೇ ಸ್ಥಾನದಲ್ಲಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರಮಂದಿರಗಳಲ್ಲಿ ಇಂದಿಗೂ ಮಿಂಚುತ್ತಿದೆ. ಈ ಚಿತ್ರ ಈಗಾಗಲೇ ರೂ. 1719.5 ಕೋಟಿ ಸಂಗ್ರಹಿಸಿದೆ. ಶೀಘ್ರದಲ್ಲೇ ‘ಪುಷ್ಪ 2’ ಚಿತ್ರವು ‘ಬಾಹುಬಲಿ 2’ ದಾಖಲೆಯನ್ನು ಮುರಿಯಲಿದೆ.

ನಾಲ್ಕನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಸಿನಿಮಾ ಇದೆ. ರಾಮ್ ಚರಣ್ ಮತ್ತು ಎನ್ಟಿಆರ್ ಅಭಿನಯದ RRR ಚಿತ್ರ ವಿಶ್ವಾದ್ಯಂತ ರೂ. 1250.9 ಕೋಟಿ ಸಂಗ್ರಹಿಸಲಾಗಿದೆ. ಈ ಸಿನಿಮಾದ ನಂತರ ಯಶ್ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ ರೂ. 1176.5 ಕೋಟಿ ಸಂಗ್ರಹಿಸಿದೆ. ಈಗ ಎಲ್ಲ ದಾಖಲೆಗಳನ್ನು ‘ಪುಷ್ಪ 2’ ಉಡೀಸ್ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!