AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರವೂ ‘ಪುಷ್ಪ 2’ ಚಿತ್ರಕ್ಕೆ ಬಂಪರ್ ಗಳಿಕೆ; ಶನಿವಾರ-ಭಾನುವಾರ ಬಂಗಾರದ ಬೆಳೆ ಗ್ಯಾರಂಟಿ

ಮೊದಲ ದಿನ ಅಂದರೆ ಡಿಸೆಂಬರ್ 5ರಂದು ‘ಪುಷ್ಪ 2’ ಸಿನಿಮಾ 175 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನವಾದ ಶುಕ್ರವಾರ ಈ ಸಿನಿಮಾ 90.1 ಕೋಟಿ ರೂಪಾಯಿ ಗಳಿಸಿದೆ. ಇದು ವಾರದ ದಿನ ಆದರೂ ಸಿನಿಮಾಗೆ ಒಳ್ಳೆಯ ಗಳಿಕೆ ಆಗಿದೆ.

ಶುಕ್ರವಾರವೂ ‘ಪುಷ್ಪ 2’ ಚಿತ್ರಕ್ಕೆ ಬಂಪರ್ ಗಳಿಕೆ; ಶನಿವಾರ-ಭಾನುವಾರ ಬಂಗಾರದ ಬೆಳೆ ಗ್ಯಾರಂಟಿ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 07, 2024 | 7:43 AM

Share

‘ಪುಷ್ಪ 2’ ಚಿತ್ರ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಮೊದಲ ದಿನವೇ 175 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿತ್ತು. ಈಗ ಎರಡನೇ ದಿನದ (ಡಿಸೆಂಬರ್ 6) ಲೆಕ್ಕಾಚಾರ ಸಿಕ್ಕಿದೆ. ‘ಪುಷ್ಪ 2’ ಸಿನಿಮಾ ಬಂಪರ್ ಕಲೆಕ್ಷನ್ ಮಾಡುತ್ತಿದೆ. ಹೀಗೆಯೇ ಮುಂದುವರಿದರೆ ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಕಲೆಕ್ಷನ್ ದಾಖಲೆಯನ್ನು ‘ಪುಷ್ಪ 2’ ಸಿನಿಮಾ ಮುರಿದರೂ ಅಚ್ಚರಿ ಏನಿಲ್ಲ.

ಮೊದಲ ದಿನ ಅಂದರೆ ಡಿಸೆಂಬರ್ 5ರಂದು ‘ಪುಷ್ಪ 2’ ಸಿನಿಮಾ 175 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನವಾದ ಶುಕ್ರವಾರ ಈ ಸಿನಿಮಾ 90.1 ಕೋಟಿ ರೂಪಾಯಿ ಗಳಿಸಿದೆ. ಇದು ವಾರದ ದಿನ ಆದರೂ ಸಿನಿಮಾಗೆ ಒಳ್ಳೆಯ ಗಳಿಕೆ ಆಗಿದೆ. ಈ ಮೂಲಕ ಭಾರತದ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 265 ಕೋಟಿ ರೂಪಾಯಿ ಆಗಿದೆ. ಇದರಿಂದ ಮೈತ್ರಿ ಮೂವೀ ಮೇಕರ್ಸ್ ಸಖತ್ ಖುಷಿ ಪಟ್ಟಿದೆ.

‘ಪುಷ್ಪ 2’ ಚಿತ್ರದ ಎರಡನೇ ದಿನದ ಗಳಿಕೆಯಲ್ಲಿ ಭಾಷಾವಾರು ಗಳಿಕೆಯೂ ಸಿಕ್ಕಿದೆ. ತೆಲುಗಿನಿಂದ 27 ಕೋಟಿ ರೂಪಾಯಿ, ತಮಿಳಿನಿಂದ 5.5 ಕೋಟಿ ರೂಪಾಯಿ, ಹಿಂದಿಯಿಂದ 55 ಕೋಟಿ ರೂಪಾಯಿ, ಮಲಯಾಳಂನಿಂದ 1.9 ಕೋಟಿ ರೂಪಾಯಿ, ಕನ್ನಡದಿಂದ 60 ಲಕ್ಷ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಹಿಂದಿ ಭಾಗದಲ್ಲಿ ಚಿತ್ರಕ್ಕೆ ಸಿಂಹ ಪಾಲು ಸಿಕ್ಕಿದೆ.

ಒಟ್ಟಾರೆ ಕಲೆಕ್ಷನ್ ಪೈಕಿ ತೆಲುಗಿನಿಂದ 118 ಕೋಟಿ ರೂಪಾಯಿ, ಹಿಂದಿಯಿಂದ 125.3 ಕೋಟಿ ರೂಪಾಯಿ, ತಮಿಳಿನಿಂದ 13.2 ಕೋಟಿ ರೂಪಾಯಿ, ಕನ್ನಡದಿಂದ 1.6 ಕೋಟಿ ರೂಪಾಯಿ ಹಾಗೂ ಮಲಯಾಳಂನಿಂದ 6.85 ಕೋಟಿ ರೂಪಾಯಿ ಗಳಿಕೆ ಆಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ‘ಪುಷ್ಪ 2’ ದಾಖಲೆಯ ಕಲೆಕ್ಷನ್; ತೆಲುಗು ಸಿನಿಮಾ ನಮ್ಮಲ್ಲಿ ಇಷ್ಟೊಂದು ಗಳಿಸಿದ್ದು ಇದೇ ಮೊದಲು  

ಶನಿವಾರ ಹಾಗೂ ಭಾನುವಾರ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನೀರಿಕ್ಷೆ ಇದೆ. ಈ ಚಿತ್ರ ದಿನ ಕಳೆದಂತೆ ಗಳಿಕೆ ಹೆಚ್ಚಿಸಿಕೊಳ್ಳುತ್ತಿದೆ. ಈ ವಾರ ಕಳೆಯುವುದರೊಳಗಾಗಿ ಸಿನಿಮಾ ಭಾರತದಲ್ಲೇ ಅನಾಯಾಸವಾಗಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!