AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರವೂ ‘ಪುಷ್ಪ 2’ ಚಿತ್ರಕ್ಕೆ ಬಂಪರ್ ಗಳಿಕೆ; ಶನಿವಾರ-ಭಾನುವಾರ ಬಂಗಾರದ ಬೆಳೆ ಗ್ಯಾರಂಟಿ

ಮೊದಲ ದಿನ ಅಂದರೆ ಡಿಸೆಂಬರ್ 5ರಂದು ‘ಪುಷ್ಪ 2’ ಸಿನಿಮಾ 175 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನವಾದ ಶುಕ್ರವಾರ ಈ ಸಿನಿಮಾ 90.1 ಕೋಟಿ ರೂಪಾಯಿ ಗಳಿಸಿದೆ. ಇದು ವಾರದ ದಿನ ಆದರೂ ಸಿನಿಮಾಗೆ ಒಳ್ಳೆಯ ಗಳಿಕೆ ಆಗಿದೆ.

ಶುಕ್ರವಾರವೂ ‘ಪುಷ್ಪ 2’ ಚಿತ್ರಕ್ಕೆ ಬಂಪರ್ ಗಳಿಕೆ; ಶನಿವಾರ-ಭಾನುವಾರ ಬಂಗಾರದ ಬೆಳೆ ಗ್ಯಾರಂಟಿ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 07, 2024 | 7:43 AM

Share

‘ಪುಷ್ಪ 2’ ಚಿತ್ರ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಮೊದಲ ದಿನವೇ 175 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿತ್ತು. ಈಗ ಎರಡನೇ ದಿನದ (ಡಿಸೆಂಬರ್ 6) ಲೆಕ್ಕಾಚಾರ ಸಿಕ್ಕಿದೆ. ‘ಪುಷ್ಪ 2’ ಸಿನಿಮಾ ಬಂಪರ್ ಕಲೆಕ್ಷನ್ ಮಾಡುತ್ತಿದೆ. ಹೀಗೆಯೇ ಮುಂದುವರಿದರೆ ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಕಲೆಕ್ಷನ್ ದಾಖಲೆಯನ್ನು ‘ಪುಷ್ಪ 2’ ಸಿನಿಮಾ ಮುರಿದರೂ ಅಚ್ಚರಿ ಏನಿಲ್ಲ.

ಮೊದಲ ದಿನ ಅಂದರೆ ಡಿಸೆಂಬರ್ 5ರಂದು ‘ಪುಷ್ಪ 2’ ಸಿನಿಮಾ 175 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನವಾದ ಶುಕ್ರವಾರ ಈ ಸಿನಿಮಾ 90.1 ಕೋಟಿ ರೂಪಾಯಿ ಗಳಿಸಿದೆ. ಇದು ವಾರದ ದಿನ ಆದರೂ ಸಿನಿಮಾಗೆ ಒಳ್ಳೆಯ ಗಳಿಕೆ ಆಗಿದೆ. ಈ ಮೂಲಕ ಭಾರತದ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 265 ಕೋಟಿ ರೂಪಾಯಿ ಆಗಿದೆ. ಇದರಿಂದ ಮೈತ್ರಿ ಮೂವೀ ಮೇಕರ್ಸ್ ಸಖತ್ ಖುಷಿ ಪಟ್ಟಿದೆ.

‘ಪುಷ್ಪ 2’ ಚಿತ್ರದ ಎರಡನೇ ದಿನದ ಗಳಿಕೆಯಲ್ಲಿ ಭಾಷಾವಾರು ಗಳಿಕೆಯೂ ಸಿಕ್ಕಿದೆ. ತೆಲುಗಿನಿಂದ 27 ಕೋಟಿ ರೂಪಾಯಿ, ತಮಿಳಿನಿಂದ 5.5 ಕೋಟಿ ರೂಪಾಯಿ, ಹಿಂದಿಯಿಂದ 55 ಕೋಟಿ ರೂಪಾಯಿ, ಮಲಯಾಳಂನಿಂದ 1.9 ಕೋಟಿ ರೂಪಾಯಿ, ಕನ್ನಡದಿಂದ 60 ಲಕ್ಷ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಹಿಂದಿ ಭಾಗದಲ್ಲಿ ಚಿತ್ರಕ್ಕೆ ಸಿಂಹ ಪಾಲು ಸಿಕ್ಕಿದೆ.

ಒಟ್ಟಾರೆ ಕಲೆಕ್ಷನ್ ಪೈಕಿ ತೆಲುಗಿನಿಂದ 118 ಕೋಟಿ ರೂಪಾಯಿ, ಹಿಂದಿಯಿಂದ 125.3 ಕೋಟಿ ರೂಪಾಯಿ, ತಮಿಳಿನಿಂದ 13.2 ಕೋಟಿ ರೂಪಾಯಿ, ಕನ್ನಡದಿಂದ 1.6 ಕೋಟಿ ರೂಪಾಯಿ ಹಾಗೂ ಮಲಯಾಳಂನಿಂದ 6.85 ಕೋಟಿ ರೂಪಾಯಿ ಗಳಿಕೆ ಆಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ‘ಪುಷ್ಪ 2’ ದಾಖಲೆಯ ಕಲೆಕ್ಷನ್; ತೆಲುಗು ಸಿನಿಮಾ ನಮ್ಮಲ್ಲಿ ಇಷ್ಟೊಂದು ಗಳಿಸಿದ್ದು ಇದೇ ಮೊದಲು  

ಶನಿವಾರ ಹಾಗೂ ಭಾನುವಾರ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನೀರಿಕ್ಷೆ ಇದೆ. ಈ ಚಿತ್ರ ದಿನ ಕಳೆದಂತೆ ಗಳಿಕೆ ಹೆಚ್ಚಿಸಿಕೊಳ್ಳುತ್ತಿದೆ. ಈ ವಾರ ಕಳೆಯುವುದರೊಳಗಾಗಿ ಸಿನಿಮಾ ಭಾರತದಲ್ಲೇ ಅನಾಯಾಸವಾಗಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ