AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಕೂಡ ಕುಪಿತಗೊಂಡಿದ್ದಾರೆ.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು
ಫಹಾದ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Aug 06, 2023 | 8:09 AM

Share

‘ಪುಷ್ಪ’ ಸಿನಿಮಾ (Pushpa Movie) ರಿಲೀಸ್ ಆಗಿದ್ದು 2021ರ ಡಿಸೆಂಬರ್ ತಿಂಗಳಲ್ಲಿ. ಈ ಚಿತ್ರ ಬಿಡುಗಡೆ ಆಗಿ ಹಲವು ದಾಖಲೆಗಳನ್ನು ಬರೆದಿತ್ತು. ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಮೇಲಾಗಿದೆ. ಆದರೆ, ‘ಪುಷ್ಪ 2’ ಸಿನಿಮಾ ಬಗ್ಗೆ ಚಿತ್ರತಂಡದಿಂದ  ಸರಿಯಾಗಿ ಯಾವುದೇ ಅಪ್​ಡೇಟ್ ಸಿಗುತ್ತಿಲ್ಲ. ಚಿತ್ರದ ಶೂಟಿಂಗ್ ಯಾವ ಹಂತದಲ್ಲಿದೆ? ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬಿತ್ಯಾದಿ ವಿಚಾರಗಳನ್ನು ತಂಡ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ‘ಪುಷ್ಪ 2’ ಟೀಂ ಹಾಗೂ ಮೈತ್ರಿ ಮೂವೀ ಮೇಕರ್ಸ್​ನ ಟ್ರೋಲ್ ಮಾಡಲಾಗುತ್ತಿದೆ.

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಲು ಸಾಲು ಟ್ವೀಟ್ ಮಾಡುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಸಿಟ್ಟಾಗಿದ್ದಾರೆ. ‘WakeUpTeamPushpa’ ಎಂದು ಟ್ವೀಟ್ ಮಾಡುತ್ತಿದ್ದಾರೆ. ಅಂದರೆ, ಪುಷ್ಪ ತಂಡದವರೇ ಎದ್ದೇಳಿ ಎಂದರ್ಥ. ಈ ಹ್ಯಾಶ್​​ಟ್ಯಾಗ್ ಅಡಿಯಲ್ಲಿ ಸಾವಿರಾರು ಟ್ವೀಟ್​ಗಳನ್ನು ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕ ಟ್ವೀಟ್​ಗಳು ಹರಿದಾಡಿವೆ. ಸಾಕಷ್ಟು ಮಂದಿ ಮೈತ್ರಿ ಮೂವೀ ಮೇಕರ್ಸ್​ನ ಪ್ರಶ್ನೆ ಮಾಡಿದ್ದಾರೆ. ಪ್ರಭಾಸ್ ಅಭಿಮಾನಿಗಳು ಈ ಮೊದಲು ಈ ರೀತಿ ಮಾಡುತ್ತಿದ್ದರು. ಪ್ರಭಾಸ್ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಕ್ಕಿಲ್ಲ ಎಂದರೆ ಈ ರೀತಿಯ ಟ್ವೀಟ್​ಗಳನ್ನು ಮಾಡುತ್ತಿದ್ದರು. ಈ ಟ್ರೆಂಡ್​ನ ಅಲ್ಲು ಅರ್ಜುನ್ ಫ್ಯಾನ್ಸ್ ಕೂಡ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರಿಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಫಹಾದ್ ಫಾಸಿಲ್ ಸೇರಿ ಅನೇಕ ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Sun, 6 August 23

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!