‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಕೂಡ ಕುಪಿತಗೊಂಡಿದ್ದಾರೆ.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು
ಫಹಾದ್-ಅಲ್ಲು ಅರ್ಜುನ್
Follow us
|

Updated on:Aug 06, 2023 | 8:09 AM

‘ಪುಷ್ಪ’ ಸಿನಿಮಾ (Pushpa Movie) ರಿಲೀಸ್ ಆಗಿದ್ದು 2021ರ ಡಿಸೆಂಬರ್ ತಿಂಗಳಲ್ಲಿ. ಈ ಚಿತ್ರ ಬಿಡುಗಡೆ ಆಗಿ ಹಲವು ದಾಖಲೆಗಳನ್ನು ಬರೆದಿತ್ತು. ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಮೇಲಾಗಿದೆ. ಆದರೆ, ‘ಪುಷ್ಪ 2’ ಸಿನಿಮಾ ಬಗ್ಗೆ ಚಿತ್ರತಂಡದಿಂದ  ಸರಿಯಾಗಿ ಯಾವುದೇ ಅಪ್​ಡೇಟ್ ಸಿಗುತ್ತಿಲ್ಲ. ಚಿತ್ರದ ಶೂಟಿಂಗ್ ಯಾವ ಹಂತದಲ್ಲಿದೆ? ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬಿತ್ಯಾದಿ ವಿಚಾರಗಳನ್ನು ತಂಡ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ‘ಪುಷ್ಪ 2’ ಟೀಂ ಹಾಗೂ ಮೈತ್ರಿ ಮೂವೀ ಮೇಕರ್ಸ್​ನ ಟ್ರೋಲ್ ಮಾಡಲಾಗುತ್ತಿದೆ.

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಲು ಸಾಲು ಟ್ವೀಟ್ ಮಾಡುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಸಿಟ್ಟಾಗಿದ್ದಾರೆ. ‘WakeUpTeamPushpa’ ಎಂದು ಟ್ವೀಟ್ ಮಾಡುತ್ತಿದ್ದಾರೆ. ಅಂದರೆ, ಪುಷ್ಪ ತಂಡದವರೇ ಎದ್ದೇಳಿ ಎಂದರ್ಥ. ಈ ಹ್ಯಾಶ್​​ಟ್ಯಾಗ್ ಅಡಿಯಲ್ಲಿ ಸಾವಿರಾರು ಟ್ವೀಟ್​ಗಳನ್ನು ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕ ಟ್ವೀಟ್​ಗಳು ಹರಿದಾಡಿವೆ. ಸಾಕಷ್ಟು ಮಂದಿ ಮೈತ್ರಿ ಮೂವೀ ಮೇಕರ್ಸ್​ನ ಪ್ರಶ್ನೆ ಮಾಡಿದ್ದಾರೆ. ಪ್ರಭಾಸ್ ಅಭಿಮಾನಿಗಳು ಈ ಮೊದಲು ಈ ರೀತಿ ಮಾಡುತ್ತಿದ್ದರು. ಪ್ರಭಾಸ್ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಕ್ಕಿಲ್ಲ ಎಂದರೆ ಈ ರೀತಿಯ ಟ್ವೀಟ್​ಗಳನ್ನು ಮಾಡುತ್ತಿದ್ದರು. ಈ ಟ್ರೆಂಡ್​ನ ಅಲ್ಲು ಅರ್ಜುನ್ ಫ್ಯಾನ್ಸ್ ಕೂಡ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರಿಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಫಹಾದ್ ಫಾಸಿಲ್ ಸೇರಿ ಅನೇಕ ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Sun, 6 August 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ