AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಕೂಡ ಕುಪಿತಗೊಂಡಿದ್ದಾರೆ.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು
ಫಹಾದ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Aug 06, 2023 | 8:09 AM

Share

‘ಪುಷ್ಪ’ ಸಿನಿಮಾ (Pushpa Movie) ರಿಲೀಸ್ ಆಗಿದ್ದು 2021ರ ಡಿಸೆಂಬರ್ ತಿಂಗಳಲ್ಲಿ. ಈ ಚಿತ್ರ ಬಿಡುಗಡೆ ಆಗಿ ಹಲವು ದಾಖಲೆಗಳನ್ನು ಬರೆದಿತ್ತು. ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಮೇಲಾಗಿದೆ. ಆದರೆ, ‘ಪುಷ್ಪ 2’ ಸಿನಿಮಾ ಬಗ್ಗೆ ಚಿತ್ರತಂಡದಿಂದ  ಸರಿಯಾಗಿ ಯಾವುದೇ ಅಪ್​ಡೇಟ್ ಸಿಗುತ್ತಿಲ್ಲ. ಚಿತ್ರದ ಶೂಟಿಂಗ್ ಯಾವ ಹಂತದಲ್ಲಿದೆ? ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬಿತ್ಯಾದಿ ವಿಚಾರಗಳನ್ನು ತಂಡ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ‘ಪುಷ್ಪ 2’ ಟೀಂ ಹಾಗೂ ಮೈತ್ರಿ ಮೂವೀ ಮೇಕರ್ಸ್​ನ ಟ್ರೋಲ್ ಮಾಡಲಾಗುತ್ತಿದೆ.

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಲು ಸಾಲು ಟ್ವೀಟ್ ಮಾಡುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಸಿಟ್ಟಾಗಿದ್ದಾರೆ. ‘WakeUpTeamPushpa’ ಎಂದು ಟ್ವೀಟ್ ಮಾಡುತ್ತಿದ್ದಾರೆ. ಅಂದರೆ, ಪುಷ್ಪ ತಂಡದವರೇ ಎದ್ದೇಳಿ ಎಂದರ್ಥ. ಈ ಹ್ಯಾಶ್​​ಟ್ಯಾಗ್ ಅಡಿಯಲ್ಲಿ ಸಾವಿರಾರು ಟ್ವೀಟ್​ಗಳನ್ನು ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕ ಟ್ವೀಟ್​ಗಳು ಹರಿದಾಡಿವೆ. ಸಾಕಷ್ಟು ಮಂದಿ ಮೈತ್ರಿ ಮೂವೀ ಮೇಕರ್ಸ್​ನ ಪ್ರಶ್ನೆ ಮಾಡಿದ್ದಾರೆ. ಪ್ರಭಾಸ್ ಅಭಿಮಾನಿಗಳು ಈ ಮೊದಲು ಈ ರೀತಿ ಮಾಡುತ್ತಿದ್ದರು. ಪ್ರಭಾಸ್ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಕ್ಕಿಲ್ಲ ಎಂದರೆ ಈ ರೀತಿಯ ಟ್ವೀಟ್​ಗಳನ್ನು ಮಾಡುತ್ತಿದ್ದರು. ಈ ಟ್ರೆಂಡ್​ನ ಅಲ್ಲು ಅರ್ಜುನ್ ಫ್ಯಾನ್ಸ್ ಕೂಡ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರಿಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಫಹಾದ್ ಫಾಸಿಲ್ ಸೇರಿ ಅನೇಕ ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Sun, 6 August 23

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್