AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಕೂಡ ಕುಪಿತಗೊಂಡಿದ್ದಾರೆ.

‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು
ಫಹಾದ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Aug 06, 2023 | 8:09 AM

Share

‘ಪುಷ್ಪ’ ಸಿನಿಮಾ (Pushpa Movie) ರಿಲೀಸ್ ಆಗಿದ್ದು 2021ರ ಡಿಸೆಂಬರ್ ತಿಂಗಳಲ್ಲಿ. ಈ ಚಿತ್ರ ಬಿಡುಗಡೆ ಆಗಿ ಹಲವು ದಾಖಲೆಗಳನ್ನು ಬರೆದಿತ್ತು. ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಮೇಲಾಗಿದೆ. ಆದರೆ, ‘ಪುಷ್ಪ 2’ ಸಿನಿಮಾ ಬಗ್ಗೆ ಚಿತ್ರತಂಡದಿಂದ  ಸರಿಯಾಗಿ ಯಾವುದೇ ಅಪ್​ಡೇಟ್ ಸಿಗುತ್ತಿಲ್ಲ. ಚಿತ್ರದ ಶೂಟಿಂಗ್ ಯಾವ ಹಂತದಲ್ಲಿದೆ? ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬಿತ್ಯಾದಿ ವಿಚಾರಗಳನ್ನು ತಂಡ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ‘ಪುಷ್ಪ 2’ ಟೀಂ ಹಾಗೂ ಮೈತ್ರಿ ಮೂವೀ ಮೇಕರ್ಸ್​ನ ಟ್ರೋಲ್ ಮಾಡಲಾಗುತ್ತಿದೆ.

ಕೆಲವು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿರುತ್ತವೆ. ಅದರೆ ಬಗ್ಗೆ ಯಾವುದೇ ಅಪ್​ಡೇಟ್ ಸಿಗದೇ ಇದ್ದರೆ ಫ್ಯಾನ್ಸ್ ಸಿಟ್ಟಾಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಲು ಸಾಲು ಟ್ವೀಟ್ ಮಾಡುತ್ತಾರೆ. ಈಗ ಅಲ್ಲು ಅರ್ಜುನ್ ಫ್ಯಾನ್ಸ್​ ಸಿಟ್ಟಾಗಿದ್ದಾರೆ. ‘WakeUpTeamPushpa’ ಎಂದು ಟ್ವೀಟ್ ಮಾಡುತ್ತಿದ್ದಾರೆ. ಅಂದರೆ, ಪುಷ್ಪ ತಂಡದವರೇ ಎದ್ದೇಳಿ ಎಂದರ್ಥ. ಈ ಹ್ಯಾಶ್​​ಟ್ಯಾಗ್ ಅಡಿಯಲ್ಲಿ ಸಾವಿರಾರು ಟ್ವೀಟ್​ಗಳನ್ನು ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕ ಟ್ವೀಟ್​ಗಳು ಹರಿದಾಡಿವೆ. ಸಾಕಷ್ಟು ಮಂದಿ ಮೈತ್ರಿ ಮೂವೀ ಮೇಕರ್ಸ್​ನ ಪ್ರಶ್ನೆ ಮಾಡಿದ್ದಾರೆ. ಪ್ರಭಾಸ್ ಅಭಿಮಾನಿಗಳು ಈ ಮೊದಲು ಈ ರೀತಿ ಮಾಡುತ್ತಿದ್ದರು. ಪ್ರಭಾಸ್ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಕ್ಕಿಲ್ಲ ಎಂದರೆ ಈ ರೀತಿಯ ಟ್ವೀಟ್​ಗಳನ್ನು ಮಾಡುತ್ತಿದ್ದರು. ಈ ಟ್ರೆಂಡ್​ನ ಅಲ್ಲು ಅರ್ಜುನ್ ಫ್ಯಾನ್ಸ್ ಕೂಡ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರಿಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಫಹಾದ್ ಫಾಸಿಲ್ ಸೇರಿ ಅನೇಕ ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Sun, 6 August 23

Follow Us
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ