AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್

‘ಪುಷ್ಪ’ ಚಿತ್ರದ ಮೊದಲ ಭಾಗವು ಅಭಿಮಾನಿಗಳನ್ನು ಸಾಕಷ್ಟು ರಂಜಿಸಿತು. ಈಗ ಚಿತ್ರದ ಎರಡನೇ ಭಾಗದ ಶೂಟಿಂಗ್ ನಡೆಯುತ್ತಿದೆ. ಅಭಿಮಾನಿಗಳು ಕೂಡ ‘ಪುಷ್ಪ 2′ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಈಗ ಸಿನಿಮಾ ಬಗ್ಗೆ ಅಲ್ಲು ಅರ್ಜುನ್ ಅವರು ಹೊಸ ಅಪ್​ಡೇಟ್ ಕೊಟ್ಟಿದ್ದಾರೆ.

‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್ -ಸುಕುಮಾರ್
ರಾಜೇಶ್ ದುಗ್ಗುಮನೆ
|

Updated on: Aug 22, 2024 | 6:58 AM

Share

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತು ಕೇಳಿ ಬಂದಿತ್ತು. ಈ ಕಾರಣಕ್ಕೆ ‘ಪುಷ್ಪ 2’ ಸಿನಿಮಾ ಕೆಲಸಗಳು ವಿಳಂಬ ಆಗಲಿವೆ ಎಂದೂ ಹೇಳಲಾಗಿತ್ತು. ಆದರೆ, ಆ ಯಾವ ಮಾತಿನಲ್ಲೂ ಹುರುಳಿಲ್ಲ ಎಂಬುದನ್ನು ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಸಾಬೀತು ಮಾಡಿದ್ದಾರೆ. ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಇವರು ‘ಡಿಸೆಂಬರ್ 6ರಂದು ಪುಷ್ಪ 2 ಸಿನಿಮಾ ಬರಲಿದೆ’ ಎಂಬುದನ್ನು ಘೋಷಣೆ ಮಾಡಿದರು. ಸಿನಿಮಾ ಬಗ್ಗೆ ಅಲ್ಲು ಅರ್ಜುನ್ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಮಾರುತಿ ನಗರ ಸುಬ್ರಮಣ್ಯಂ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಅವರು ಮಾತನಾಡಿದ್ದಾರೆ. ‘ಪುಷ್ಪ 2 ಸಿನಿಮಾ ಬರ್ತಿರೋ ವಿಧಾನ ಬೇರೆಯದೇ ರೀತಿ ಇದೆ. ಸಿನಿಮಾ ಎಲ್ಲರಿಗೂ ಇಷ್ಟ ಆಗಿ..’ ಎಂದು ಹೇಳಿ ಮಾತು ನಿಲ್ಲಿಸಿದ ಅಲ್ಲು ಅರ್ಜುನ್ ‘ನಾನು ಈಗ ಏನನ್ನೂ ಹೇಳುವುದಿಲ್ಲ. ಡಿಸೆಂಬರ್ 6ಕ್ಕೆ ತಗ್ಗೋ ಮಾತೇ ಇಲ್ಲ. ಇದು ಫಿಕ್ಸ್’ ಎಂದರು.

ಈ ಮಾತನ್ನು ಕೇಳುತ್ತಿದ್ದಂತೆ ಕೆಳಗೆ ಕೂತಿದ್ದ ಸುಕುಮಾರ್ ಅವರು ಸಂತಸ ಹೊರ ಹಾಕಿದರು. ಈ ಮೂಲಕ ಇಬ್ಬರ ಮಧ್ಯೆ ಯಾವುದೇ ಕಿರಿಕ್ ಇಲ್ಲ ಎನ್ನುವ ವಿಚಾರವನ್ನು ಇವರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಂಡಿದ್ದು, ಫಹಾದ್ ಫಾಸಿಲ್ ಬರುವಿಕೆಗಾಗಿ ತಂಡ ಕಾಯುತ್ತಿದೆ ಎನ್ನಲಾಗಿದೆ.

‘ಪುಷ್ಪ 2’ ಚಿತ್ರದ ಕೆಲಸಗಳನ್ನು ಅರ್ಧಕ್ಕೆ ಬಿಟ್ಟು ಅಲ್ಲು ಅರ್ಜುನ್ ಅವರು ವಿದೇಶಕ್ಕೆ ತೆರಳಿದ್ದರು ಎನ್ನಲಾಗಿತ್ತು. ಅಲ್ಲದೆ ಅವರು ಗಡ್ಡವನ್ನು ಕೂಡ ಟ್ರಿಮ್ ಮಾಡಿಕೊಂಡಿದ್ದರು. ಆದರೆ, ಆ ರೀತಿ ಇಲ್ಲ ಎನ್ನುವ ವಿಚಾರ ಈಗ ಸ್ಪಷ್ಟವಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 6ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ವಿಶೇಷ ಸಾಂಗ್​ನಲ್ಲಿ ಹೆಜ್ಜೆಹಾಕಲು ಕನ್ನಡದ ಹೀರೋಯಿನ್​ಗೆ ಆಫರ್? 

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್​ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?