AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​, ಸುಕುಮಾರ್​ ನಡುವೆ ಕಿರಿಕ್​? ‘ಪುಷ್ಪ 2’ ಬಿಡುಗಡೆ ಮತ್ತೆ ಲೇಟ್​ ಆಗುತ್ತಾ?

2024ರ ಡಿಸೆಂಬರ್​ 6ರಂದು ‘ಪುಷ್ಪ 2’ ಸಿನಿಮಾ ಬರಲಿದೆ ಎಂದು ಅಲ್ಲು ಅರ್ಜುನ್​ ಫ್ಯಾನ್ಸ್​ ಕಾಯುತ್ತಿದ್ದಾರೆ. ಆದರೆ ಈ ಚಿತ್ರತಂಡದ ಬಗ್ಗೆ ಕೆಲವು ಗಾಸಿಪ್​ಗಳು ಹರಿದಾಡಲು ಆರಂಭಿಸಿವೆ. ನಿರ್ದೇಶಕ ಸುಕುಮಾರ್​ ಹಾಗೂ ನಟ ಅಲ್ಲು ಅರ್ಜುನ್​ ಅವರ ನಡುವೆ ಶೂಟಿಂಗ್​ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಗಾಸಿಪ್​ ಕಾಲಂಗಳಲ್ಲಿ ಸುದ್ದಿ ಬಂದಿದೆ.

ಅಲ್ಲು ಅರ್ಜುನ್​, ಸುಕುಮಾರ್​ ನಡುವೆ ಕಿರಿಕ್​? ‘ಪುಷ್ಪ 2’ ಬಿಡುಗಡೆ ಮತ್ತೆ ಲೇಟ್​ ಆಗುತ್ತಾ?
ಸುಕುಮಾರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Jul 18, 2024 | 9:54 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಪುಷ್ಪ 2’ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗುತ್ತಿತ್ತು. ಆದರೆ ಸಿನಿಮಾದ ಕೆಲಸಗಳು ಇನ್ನೂ ಬಾಕಿ ಇರುವ ಕಾರಣ ಈ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಯಿತು. ಈ ವರ್ಷ ಡಿಸೆಂಬ್​ 6ರಂದು ‘ಪುಷ್ಪ 2’ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ. ಆದರೆ ಮತ್ತೆ ಈ ದಿನಾಂಕದಲ್ಲಿ ಬದಲಾವಣೆ ಆಗುತ್ತಾ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಸುಕುಮಾರ್​ ಮತ್ತು ಅಲ್ಲು ಅರ್ಜುನ್​ ನಡುವೆ ಸಣ್ಣದೊಂದು ಮನಸ್ತಾಪ ಕೂಡ ಉಂಟಾಗಿದೆ ಎಂದು ಗಾಸಿಪ್​ ಹಬ್ಬಿದೆ.

ಜುಲೈ 25ರಿಂದ ‘ಪುಷ್ಪ 2’ ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಶುರುವಾಗಲಿದೆ. ಅಲ್ಲು ಅರ್ಜುನ್​ ಅವರು 10 ದಿನಗಳ ಕಾಲ ಈ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ಒಂದೇ ಹಂತದಲ್ಲಿ ಶೂಟಿಂಗ್​ ಮುಗಿಸಬೇಕು ಎಂಬುದು ಅಲ್ಲು ಅರ್ಜುನ್​ ಪ್ಲ್ಯಾನ್​ ಅಂತೆ. ಆದರೆ ಸುಕುಮಾರ್​ ಅವರು ಒಂದೆರೆಡು ದಿನಗಳ ಚಿತ್ರೀಕರಣವನ್ನು ಕ್ಯಾನ್ಸಲ್​ ಮಾಡಿದ್ದಾರೆ ಎನ್ನಲಾಗಿದೆ. ಎಡಿಟಿಂಗ್​ ಕಡೆಗೆ ಹೆಚ್ಚು ಗಮನ ನೀಡಬೇಕು ಎಂಬ ಕಾರಣಕ್ಕೆ ನಿರ್ದೇಶಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಶೂಟಿಂಗ್​ ಪ್ಲ್ಯಾನ್​ನಲ್ಲಿ ವ್ಯತ್ಯಾಸಗಳು ಆಗುತ್ತಿರುವ ಕಾರಣದಿಂದ ನಿರ್ದೇಶಕ ಸುಕುಮಾರ್​ ಮತ್ತು ನಟ ಅಲ್ಲು ಅರ್ಜುನ್​ ನಡುವೆ ಮನಸ್ತಾಪ ಮೂಡಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಶೂಟಿಂಗ್​ ತಡವಾದರೂ ಅಚ್ಚರಿ ಏನೆಲ್ಲ ಎಂದು ಹೇಳಾಗುತ್ತಿದೆ. ಆದರೆ ಇನ್ನೊಂದು ಮೂಲದ ಪ್ರಕಾರ, ಆ ರೀತಿ ಯಾವುದೇ ಕಿರಿಕ್​ ಆಗಿಲ್ಲ. ಎಲ್ಲವೂ ಅಂದುಕೊಂಡಂತೆಯೇ ಸಾಗುತ್ತಿದೆ. ಡಿಸೆಂಬರ್​ 6ಕ್ಕೆ ‘ಪುಷ್ಪ 2’ ತೆರೆ ಕಾಣುವುದು ಖಚಿತ ಎಂದು ಭರವಸೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಹಾಡಿಗೆ ಕುಣಿದು ಕುಪ್ಪಳಿಸಿದ ಆಶಿಕಾ ರಂಗನಾಥ್

ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದ್ದರಿಂದ ಇದರ ಸೀಕ್ವೆಲ್​ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಸಿನಿಮಾ ಮಾಡಲು ಸುಕುಮಾರ್​ ಪ್ರಯತ್ನಿಸುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಭಾರಿ ಬಜೆಟ್​ನಲ್ಲಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಈ ಚಿತ್ರ ಹಲವು ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಲಿದೆ. ಹಾಡುಗಳ ಬಗ್ಗೆಯೂ ನಿರ್ದೇಶಕರು ವಿಶೇಷ ಕಾಳಜಿ ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ