AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲಿದೆ ಪುಷ್ಪ ತಂಡ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ

ಸಿನಿಮಾ ರಿಲೀಸ್​ಗೂ ಮೊದಲೇ ಆ ಬಗೆಗಿನ ವಿಚಾರಗಳು ಲೀಕ್ ಆಗಿ ಬಿಡುತ್ತವೆ. ಇದಕ್ಕೆ ‘ರಾಮಾಯಣ’ ಸಿನಿಮಾನೇ ಉತ್ತಮ ಉದಾಹರಣೆ. ಈ ಚಿತ್ರದ ಸೆಟ್ ಫೋಟೋಗಳು ಲೀಕ್ ಆಗುತ್ತಿವೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗುತ್ತಿದೆ. ಈಗ ‘ಪುಷ್ಪ 2’ ಚಿತ್ರತಂಡಕ್ಕೂ ಈ ಬಗ್ಗೆ ಭಯ ಕಾಡಿದೆ.

‘ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲಿದೆ ಪುಷ್ಪ ತಂಡ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ
ಅಲ್ಲು ಅರ್ಜುನ್​
ರಾಜೇಶ್ ದುಗ್ಗುಮನೆ
|

Updated on: May 28, 2024 | 11:01 AM

Share

‘ಪುಷ್ಪ 2’ ಚಿತ್ರದ (Pushpa 2) ಶೂಟಿಂಗ್ ಭರದಿಂದ ಸಾಗುತ್ತಿದೆ. ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ತಂಡ ಬ್ಯುಸಿ ಇದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ನಿರ್ದೇಶಕ ಸುಕುಮಾರ್ ಅವರು ಹೊಸ ಐಡಿಯಾ ಮಾಡಿದ್ದಾರೆ. ಈ ಚಿತ್ರಕ್ಕೆ ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲು ಅವರು ನಿರ್ಧರಿಸಿದ್ದಾರೆ.

ಸಿನಿಮಾ ರಿಲೀಸ್​ಗೂ ಮೊದಲೇ ಆ ಬಗೆಗಿನ ವಿಚಾರಗಳು ಲೀಕ್ ಆಗಿ ಬಿಡುತ್ತವೆ. ಇದಕ್ಕೆ ‘ರಾಮಾಯಣ’ ಸಿನಿಮಾನೇ ಉತ್ತಮ ಉದಾಹರಣೆ. ಈ ಚಿತ್ರದ ಸೆಟ್ ಫೋಟೋಗಳು ಲೀಕ್ ಆಗುತ್ತಿವೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗುತ್ತಿದೆ. ಈಗ ‘ಪುಷ್ಪ 2’ ಚಿತ್ರತಂಡಕ್ಕೂ ಈ ಬಗ್ಗೆ ಭಯ ಕಾಡಿದೆ. ಹೀಗಾಗಿ, ಹೆಚ್ಚಿನ ಖರ್ಚಾದರೂ ತೊಂದರೆ ಇಲ್ಲ ಎನ್ನುವ ಕಾರಣಕ್ಕೆ ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲು ತಂಡ ಮುಂದಾಗಿದೆ.

ಎರಡು ರೀತಿಯಲ್ಲಿ ಕ್ಲೈಮ್ಯಾಕ್ಸ್ ಶೂಟ್ ಮಾಡಿದರೆ ಅದರಲ್ಲಿ ಯಾವುದನ್ನು ಬೇಕಿದ್ದರೂ ಬಳಸಬಹುದು. ಈ ಬಗೆಗಿನ ಸಂಪೂರ್ಣ ನಿರ್ಧಾರ ನಿರ್ದೇಶಕ ಸುಕುಮಾರ್ ಅವರದ್ದೇ ಆಗಿರುತ್ತದೆ. ಒಂದೊಮ್ಮೆ ಒಂದು ಕ್ಲೈಮ್ಯಾಕ್ಸ್ ಲೀಕ್ ಆದರೂ ಮತ್ತೊಂದು ಕ್ಲ್ಲೈಮ್ಯಾಕ್ಸ್​ನೊಂದಿಗೆ ತಂಡ ಬರಬಹುದು.

ಸಿನಿಮಾದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ಟಾರ್ ಕಲಾವಿದರಿಂದ ಹಿಡಿದು, ಸಾಮಾನ್ಯ ಕಲಾವಿದರವರೆಗೆ ಎಲ್ಲರಿಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಸಂಪೂರ್ಣ ಸ್ಕ್ರಿಪ್ಟ್ ಯಾರ ಕೈಗೂ ಸಿಗದಂತೆ ಸುಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಆಯಾ ಕಲಾವದರಿಗೆ ಅವರ ಡೈಲಾಗ್ ಮಾತ್ರ ಸಿಗುವಂತೆ ನೋಡಿಕೊಳ್ಳಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಐಟಂ ಹಾಡಿಗೆ ಸೊಂಟ ಕುಣಿಸಲಿದ್ದಾರೆ ‘ಅತ್ತಿಗೆ 2’

ಇತ್ತೀಚೆಗೆ ‘ಪುಷ್ಪ 2’ ಚಿತ್ರದ ‘ಪುಷ್ಪ ಪುಷ್ಪ..’ ಹಾಡು ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಕೆಲವರು ಇದನ್ನು ಟ್ರೋಲ್ ಮಾಡಿದರು. ದೇವಿಶ್ರೀ ಪ್ರಸಾದ್ ಅವರು ಈ ಹಾಡನ್ನು ಕಂಪೋಸ್ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ರಿಲೀಸ್​ಗೆ ರೆಡಿ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?