AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಬರಲಿದೆ ‘ಪುಷ್ಪ 2’ ಸಿನಿಮಾ ಟೀಸರ್​? ಕೆಲವೇ ದಿನಗಳು ಮಾತ್ರ ಬಾಕಿ

ಶೀಘ್ರದಲ್ಲೇ ‘ಪುಷ್ಪ 2’ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಕೇಳಿಬರುತ್ತಿದೆ. ಏ.8ರಂದು ಈ ಸಿನಿಮಾದ ಟೀಸರ್​ ಅನಾವರಣ ಆಗಲಿದೆ. ಅಂದು ನಟ ಅಲ್ಲು ಅರ್ಜುನ್​ ಜನ್ಮದಿನ. ಹಾಗಾಗಿ ಆ ವಿಶೇಷ ದಿನವೇ ಟೀಸರ್​ ಬಿಡುಗಡೆ ಮಾಡಿದರೆ ರೀಚ್​ ಚೆನ್ನಾಗಿ ಇರುತ್ತದೆ ಎಂಬುದು ‘ಪುಷ್ಪ 2’ ತಂಡದ ಲೆಕ್ಕಾಚಾರ.

ಯಾವಾಗ ಬರಲಿದೆ ‘ಪುಷ್ಪ 2’ ಸಿನಿಮಾ ಟೀಸರ್​? ಕೆಲವೇ ದಿನಗಳು ಮಾತ್ರ ಬಾಕಿ
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 29, 2024 | 8:41 PM

Share

ಭಾರಿ ಹೈಪ್​ ಸೃಷ್ಟಿ ಮಾಡಿರುವ ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ ಭರದಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್ ನಡುವೆ ಬಿಡುವು ಪಡೆದು ಅವರು ಇತ್ತೀಚೆಗೆ ದುಬೈಗೆ ತೆರಳಿದ್ದರು. ಅಲ್ಲಿನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂನಲ್ಲಿ ಅವರ ಮೇಣದ ಪ್ರತಿಮೆ ಅನಾವರಣ ಮಾಡಲಾಗಿದೆ. ಆ ಪ್ರತಿಮೆಯು ತಗ್ಗೆದೆಲೇ ಸ್ಟೈಲ್​ನಲ್ಲಿ ಇದೆ. ಇಂಥ ಬೆಳವಣಿಗೆಗಳಿಂದ ‘ಪುಷ್ಪ 2’ ಸಿನಿಮಾಗೆ ಭರ್ಜರಿ ಪ್ರಚಾರ ಸಿಗಲಿದೆ. ಈ ನಡುವೆ ಟೀಸರ್​ (Pushpa 2 Teaser) ಯಾವಾಗ ಬರಲಿದೆ ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಶ್ನೆ ಎದ್ದಿದೆ.

ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡದವರು ಸಿದ್ಧತೆ ಮಾಡಿಕೊಂಡಿದ್ದಾರೆ. ಏಪ್ರಿಲ್​ 8ರಂದು ‘ಪುಷ್ಪ 2’ ಟೀಸರ್​ ಅನಾವರಣ ಆಗಲಿದೆ. ಅಂದು ಅಲ್ಲು ಅರ್ಜುನ್​ ಅವರ ಜನ್ಮದಿನ. ಹಾಗಾಗಿ ಆ ವಿಶೇಷ ದಿನದಂದು ಟೀಸರ್​ ರಿಲೀಸ್​ ಮಾಡಿದರೆ ಖಂಡಿತವಾಗಿಯೂ ರೀಚ್​ ಚೆನ್ನಾಗಿ ಇರುತ್ತದೆ ಎಂಬುದು ಚಿತ್ರತಂಡದವರ ಲೆಕ್ಕಾಚಾರ. ತಮ್ಮ ನೆಚ್ಚಿನ ನಟನ ಬರ್ತ್​ಡೇ ದಿನ ಸಿಗಲಿರುವ ಆ ವಿಶೇಷ ಗಿಫ್ಟ್​ಗಾಗಿ ಅಲ್ಲು ಅರ್ಜುನ್​ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

ಅಲ್ಲು ಅರ್ಜುನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಎರಡು ದಶಕ ಕಳೆದಿದೆ. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ‘ಗಂಗೋತ್ರಿ’ 2003ರ ಮಾರ್ಚ್​ 28ರಂದು ಬಿಡುಗಡೆ ಆಗಿತ್ತು. ಆ ಸಿನಿಮಾ ತೆರೆಕಂಡು 21 ವರ್ಷ ಕಳೆದಿರುವ ಪ್ರಯುಕ್ತ ಅಲ್ಲು ಅರ್ಜುನ್​ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅಭಿಮಾನಿಗಳಿಗೆ ಇನ್ನೂ ಹೆಮ್ಮೆ ಆಗುವ ರೀತಿಯಲ್ಲಿ ಕೆಲಸ ಮಾಡಲಿರುವುದಾಗಿ ಅವರು ಹೇಳಿದ್ದಾರೆ. ಆ ಮೂಲಕ ‘ಪುಷ್ಪ 2’ ಸಿನಿಮಾ ಭರ್ಜರಿಯಾಗಿ ಇರಲಿದೆ ಎಂಬುದರ ಸುಳಿವನ್ನು ಅವರು ನೀಡಿದ್ದಾರೆ.

ಇದನ್ನೂ ಓದಿ: Allu Arjun: ತಮ್ಮ ಮೇಣದ ಪ್ರತಿಮೆ ಪಕ್ಕ ನಿಂತು ಪೋಸ್ ಕೊಟ್ಟ ಅಲ್ಲು ಅರ್ಜುನ್

ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ. ಈ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಇನ್ನು ಉಳಿದಿರುವುದು ನಾಲ್ಕೂವರೆ ತಿಂಗಳು ಮಾತ್ರ. ಸಿನಿಮಾದ ಕೆಲಸಗಳು ಇನ್ನೂ ಬಾಕಿ ಇದೆ. ಅದನ್ನೆಲ್ಲ ಆದಷ್ಟು ಬೇಗ ಪೂರ್ಣಗೊಳಿಸಿಕೊಳ್ಳಬೇಕಿದೆ. ಪ್ರಚಾರಕ್ಕಾಗಿ ಚಿತ್ರತಂಡ ಹೆಚ್ಚು ಒತ್ತು ನೀಡಬೇಕಿದೆ. ಟೀಸರ್​ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗುವುದು. ವಿದೇಶದಲ್ಲಿಯೂ ‘ಪುಷ್ಪ 2’ ಶೂಟಿಂಗ್​ ನಡೆಯಲಿದೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಶೀಘ್ರದಲ್ಲೇ ಬಿಡುಗಡೆ ಆಗಲಿರುವ ಟೀಸರ್​ನಲ್ಲಿ ಯಾವ ಅಂಶ ಹೈಲೈಟ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ