Sign In

By signing in or creating an account, you agree with Associated Broadcasting Company's Terms & Conditions and Privacy Policy.

2000 ಕೋಟಿ ರೂ. ಕಲೆಕ್ಷನ್ ಮಾಡಲು ‘ಪುಷ್ಪ 2’ ಚಿತ್ರತಂಡದ ಹೊಸ ತಂತ್ರ

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ವೃತ್ತಿಜೀವನಕ್ಕೆ ‘ಪುಷ್ಪ 2’ ಸಿನಿಮಾ ಅತಿ ದೊಡ್ಡ ಸಕ್ಸಸ್ ನೀಡಿದೆ. ಬಿಡುಗಡೆ ಆಗಿ ತಿಂಗಳು ಕಳೆದಿದ್ದರೂ ಈ ಸಿನಿಮಾದ ಹವಾ ನಿಂತಿಲ್ಲ. ವಿವಾದಗಳ ನಡುವೆಯೂ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ಈಗ ಹೊಸ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಈ ಚಿತ್ರತಂಡ ಇನ್ನೊಂದು ನ್ಯೂಸ್ ಹಂಚಿಕೊಂಡಿದೆ.

2000 ಕೋಟಿ ರೂ. ಕಲೆಕ್ಷನ್ ಮಾಡಲು ‘ಪುಷ್ಪ 2’ ಚಿತ್ರತಂಡದ ಹೊಸ ತಂತ್ರ
ಅಲ್ಲು ಅರ್ಜುನ್
Follow us
ಮದನ್​ ಕುಮಾರ್​
|

Updated on:Jan 12, 2025 | 10:09 PM

ಸುಕುಮಾರ್​ ನಿರ್ದೇಶನ ಮಾಡಿದ ‘ಪುಷ್ಪ 2’ ಸಿನಿಮಾ ಈಗಾಗಲೇ ವಿಶ್ವಾದ್ಯಂತ 1830 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಹಲವು ಸಿನಿಮಾಗಳ ದಾಖಲೆಯನ್ನು ‘ಪುಷ್ಪ 2’ ಅಳಿಸಿ ಹಾಕಿದೆ. ಈಗ ಈ ಚಿತ್ರ 2000 ಕೋಟಿ ರೂಪಾಯಿ ಗಳಿಕೆ ಮಾಡುತ್ತಾ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ಈ ಮೈಲುಗಲ್ಲು ತಲುಪಿದರೆ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಹಿರಿಹಿರಿ ಹಿಗ್ಗಲಿದ್ದಾರೆ. 2000 ಕೋಟಿ ರೂ. ಟಾರ್ಗೆಟ್​ ರೀಚ್​ ಆಗುವುದು ತುಸು ಕಷ್ಟ. ಆದರೂ ಕೂಡ ಚಿತ್ರತಂಡದಿಂದ ಹೊಸ ಪ್ರಯತ್ನ ಮಾಡಲಾಗುತ್ತಿದೆ.

ಜನವರಿ 11ರಂದು ನಿರ್ದೇಶಕ ಸುಕುಮಾರ್​ ಅವರ ಹುಟ್ಟುಹಬ್ಬ. ಅವರಿಗೆ ಎಲ್ಲರೂ ಶುಭಾಶಯ ತಿಳಿಸಿದ್ದಾರೆ. ‘ಪುಷ್ಪ 2’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡ ಕಾರಣ ಈ ವರ್ಷದ ಬರ್ತ್​ಡೇ ಸುಕುಮಾರ್ ಪಾಲಿಗೆ ತುಂಬ ಸ್ಪೆಷಲ್. ಅವರ ಜನ್ಮದಿನದ ಪ್ರಯುಕ್ತ ‘ಪುಷ್ಪ 2’ ತಂಡದಿಂದ ಹೊಸದೊಂದು ಪ್ರೋಮೋ ರಿಲೀಸ್ ಮಾಡಲಿದೆ. ಈ ಮೊದಲು ಚಿತ್ರದಲ್ಲಿ ನೋಡಿರದ ದೃಶ್ಯ ಈ ಪ್ರೋಮೋದಲ್ಲಿದೆ.

ಈಗಾಗಲೇ ‘ಪುಷ್ಪ 2’ ಸಿನಿಮಾದ ಅವಧಿ 3 ಗಂಟೆ 20 ನಿಮಿಷ ಇದೆ. ಅದಕ್ಕೆ ಇನ್ನೂ 20 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.11ರಿಂದಲೇ ಈ ರೀಲೋಡೆಡ್ ವರ್ಷನ್​ ಪ್ರದರ್ಶನ ಆರಂಭ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ. ಜನವರಿ 17ರಿಂದ ಹೆಚ್ಚುವರಿ 20 ನಿಮಿಷಗಳ ಫೂಟೇಜ್​ ಇರುವ ‘ಪುಷ್ಪ 2’ ಸಿನಿಮಾ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: ‘ಪುಷ್ಪ 2’ ಗೆದ್ದರೂ ಸಂಭ್ರಮವಿಲ್ಲ; ಇದು ಅಲ್ಲು ಅರ್ಜುನ್ ಪರಿಸ್ಥಿತಿ

ರೀಲೋಡೆಡ್ ವರ್ಷನ್​ ನೋಡಲು ಪ್ರೇಕ್ಷಕರು ಮತ್ತೆ ಚಿತ್ರಮಂದಿರಕ್ಕೆ ಬಂದರೆ ಸಿನಿಮಾದ ಕಲೆಕ್ಷನ್ ಹೆಚ್ಚಾಗಲಿದೆ. ಅದರಿಂದ 2000 ಕೋಟಿ ರೂಪಾಯಿ ತಲುಪಬಹುದು ಎಂಬ ನಿರೀಕ್ಷೆ ಕೂಡ ಕೆಲವರಿಗೆ ಇದೆ. ಒಂದು ವೇಳೆ ಅಭಿಮಾನಿಯ ನಿಧನ ಸಂಭವಿಸಿದೇ ಇದ್ದಿದ್ದರೆ ಅಲ್ಲು ಅರ್ಜುನ್ ಅವರು ಹೆಚ್ಚಿನ ಪ್ರಚಾರದಲ್ಲಿ ಭಾಗಿ ಆಗಿರುತ್ತಿದ್ದರು. ಆಗ ಖಂಡಿತವಾಗಿಯೂ ಕಲೆಕ್ಷನ್​ ಹೆಚ್ಚಾಗುತ್ತಿತ್ತು. ಆದರೆ ಬಂಧನ, ಜಾಮೀನು, ಬಿಡುಗಡೆ ಎಂಬಿತ್ಯಾದಿ ವಿವಾದಗಳಿಂದಾಗಿ ಅವರು ಮೌನವಾಗಿ ಉಳಿಯುವಂತೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:12 pm, Sun, 12 January 25

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್