AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2000 ಕೋಟಿ ರೂ. ಕಲೆಕ್ಷನ್ ಮಾಡಲು ‘ಪುಷ್ಪ 2’ ಚಿತ್ರತಂಡದ ಹೊಸ ತಂತ್ರ

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ವೃತ್ತಿಜೀವನಕ್ಕೆ ‘ಪುಷ್ಪ 2’ ಸಿನಿಮಾ ಅತಿ ದೊಡ್ಡ ಸಕ್ಸಸ್ ನೀಡಿದೆ. ಬಿಡುಗಡೆ ಆಗಿ ತಿಂಗಳು ಕಳೆದಿದ್ದರೂ ಈ ಸಿನಿಮಾದ ಹವಾ ನಿಂತಿಲ್ಲ. ವಿವಾದಗಳ ನಡುವೆಯೂ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ಈಗ ಹೊಸ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಈ ಚಿತ್ರತಂಡ ಇನ್ನೊಂದು ನ್ಯೂಸ್ ಹಂಚಿಕೊಂಡಿದೆ.

2000 ಕೋಟಿ ರೂ. ಕಲೆಕ್ಷನ್ ಮಾಡಲು ‘ಪುಷ್ಪ 2’ ಚಿತ್ರತಂಡದ ಹೊಸ ತಂತ್ರ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on:Jan 12, 2025 | 10:09 PM

Share

ಸುಕುಮಾರ್​ ನಿರ್ದೇಶನ ಮಾಡಿದ ‘ಪುಷ್ಪ 2’ ಸಿನಿಮಾ ಈಗಾಗಲೇ ವಿಶ್ವಾದ್ಯಂತ 1830 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಹಲವು ಸಿನಿಮಾಗಳ ದಾಖಲೆಯನ್ನು ‘ಪುಷ್ಪ 2’ ಅಳಿಸಿ ಹಾಕಿದೆ. ಈಗ ಈ ಚಿತ್ರ 2000 ಕೋಟಿ ರೂಪಾಯಿ ಗಳಿಕೆ ಮಾಡುತ್ತಾ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ಈ ಮೈಲುಗಲ್ಲು ತಲುಪಿದರೆ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಹಿರಿಹಿರಿ ಹಿಗ್ಗಲಿದ್ದಾರೆ. 2000 ಕೋಟಿ ರೂ. ಟಾರ್ಗೆಟ್​ ರೀಚ್​ ಆಗುವುದು ತುಸು ಕಷ್ಟ. ಆದರೂ ಕೂಡ ಚಿತ್ರತಂಡದಿಂದ ಹೊಸ ಪ್ರಯತ್ನ ಮಾಡಲಾಗುತ್ತಿದೆ.

ಜನವರಿ 11ರಂದು ನಿರ್ದೇಶಕ ಸುಕುಮಾರ್​ ಅವರ ಹುಟ್ಟುಹಬ್ಬ. ಅವರಿಗೆ ಎಲ್ಲರೂ ಶುಭಾಶಯ ತಿಳಿಸಿದ್ದಾರೆ. ‘ಪುಷ್ಪ 2’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡ ಕಾರಣ ಈ ವರ್ಷದ ಬರ್ತ್​ಡೇ ಸುಕುಮಾರ್ ಪಾಲಿಗೆ ತುಂಬ ಸ್ಪೆಷಲ್. ಅವರ ಜನ್ಮದಿನದ ಪ್ರಯುಕ್ತ ‘ಪುಷ್ಪ 2’ ತಂಡದಿಂದ ಹೊಸದೊಂದು ಪ್ರೋಮೋ ರಿಲೀಸ್ ಮಾಡಲಿದೆ. ಈ ಮೊದಲು ಚಿತ್ರದಲ್ಲಿ ನೋಡಿರದ ದೃಶ್ಯ ಈ ಪ್ರೋಮೋದಲ್ಲಿದೆ.

ಈಗಾಗಲೇ ‘ಪುಷ್ಪ 2’ ಸಿನಿಮಾದ ಅವಧಿ 3 ಗಂಟೆ 20 ನಿಮಿಷ ಇದೆ. ಅದಕ್ಕೆ ಇನ್ನೂ 20 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.11ರಿಂದಲೇ ಈ ರೀಲೋಡೆಡ್ ವರ್ಷನ್​ ಪ್ರದರ್ಶನ ಆರಂಭ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ. ಜನವರಿ 17ರಿಂದ ಹೆಚ್ಚುವರಿ 20 ನಿಮಿಷಗಳ ಫೂಟೇಜ್​ ಇರುವ ‘ಪುಷ್ಪ 2’ ಸಿನಿಮಾ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: ‘ಪುಷ್ಪ 2’ ಗೆದ್ದರೂ ಸಂಭ್ರಮವಿಲ್ಲ; ಇದು ಅಲ್ಲು ಅರ್ಜುನ್ ಪರಿಸ್ಥಿತಿ

ರೀಲೋಡೆಡ್ ವರ್ಷನ್​ ನೋಡಲು ಪ್ರೇಕ್ಷಕರು ಮತ್ತೆ ಚಿತ್ರಮಂದಿರಕ್ಕೆ ಬಂದರೆ ಸಿನಿಮಾದ ಕಲೆಕ್ಷನ್ ಹೆಚ್ಚಾಗಲಿದೆ. ಅದರಿಂದ 2000 ಕೋಟಿ ರೂಪಾಯಿ ತಲುಪಬಹುದು ಎಂಬ ನಿರೀಕ್ಷೆ ಕೂಡ ಕೆಲವರಿಗೆ ಇದೆ. ಒಂದು ವೇಳೆ ಅಭಿಮಾನಿಯ ನಿಧನ ಸಂಭವಿಸಿದೇ ಇದ್ದಿದ್ದರೆ ಅಲ್ಲು ಅರ್ಜುನ್ ಅವರು ಹೆಚ್ಚಿನ ಪ್ರಚಾರದಲ್ಲಿ ಭಾಗಿ ಆಗಿರುತ್ತಿದ್ದರು. ಆಗ ಖಂಡಿತವಾಗಿಯೂ ಕಲೆಕ್ಷನ್​ ಹೆಚ್ಚಾಗುತ್ತಿತ್ತು. ಆದರೆ ಬಂಧನ, ಜಾಮೀನು, ಬಿಡುಗಡೆ ಎಂಬಿತ್ಯಾದಿ ವಿವಾದಗಳಿಂದಾಗಿ ಅವರು ಮೌನವಾಗಿ ಉಳಿಯುವಂತೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:12 pm, Sun, 12 January 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ