AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಸಂಪೂರ್ಣ ಮಾಹಿತಿ ಕೊಟ್ಟ ನಿರ್ಮಾಪಕ

‘ಪುಷ್ಪ 2’ ಚಿತ್ರದ ಬೃಹತ್ ಯಶಸ್ಸಿನ ನಂತರ, ‘ಪುಷ್ಪ 3’ ಚಿತ್ರದ ಬಗ್ಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ನಿರ್ಮಾಪಕ ರವಿ ಶಂಕರ್ ಅವರು 2028 ರ ವೇಳೆಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮುಖ್ಯ ಪಾತ್ರಗಳಲ್ಲಿ ಮುಂದುವರಿಯಲಿದ್ದಾರೆ.

‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಸಂಪೂರ್ಣ ಮಾಹಿತಿ ಕೊಟ್ಟ ನಿರ್ಮಾಪಕ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Mar 17, 2025 | 3:59 PM

Share

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ  ‘ಪುಷ್ಪ’ ಸಿನಿಮಾ ರಿಲೀಸ್ ಆದಾಗ ಅದು ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ಪಾರ್ಟ್​​ ಬರೋಬ್ಬರಿ 1,700 ಕೋಟಿ ರೂಪಾಯಿ ಕಲೆ ಹಾಕಿದೆ. ಈ ಮೂಲಕ ಚಿತ್ರ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದೆ. 2024ರಲ್ಲಿ ಹಲ್​ಚಲ್ ಎಬ್ಬಿಸಿದ ‘ಪುಷ್ಪ 2’ (Pushpa 2 Movie) ಚಿತ್ರಕ್ಕೆ ಈಗ ಮೂರನೇ ಪಾರ್ಟ್ ಬರುತ್ತಿದೆ. ನಿರ್ಮಾಪಕರು ಸಿನಿಮಾ ರಿಲೀಸ್ ಆಗೋದು ಯಾವಾಗ ಎನ್ನುವ ಬಗ್ಗೆ ಸೂಚನೆ ಕೊಟ್ಟಿದ್ದಾರೆ.  ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಸಾಮಾನ್ಯ ವ್ಯಕ್ತಿಯಾಗಿದ್ದ ಪುಷ್ಪರಾಜ್ ಈಗ ರಕ್ತಚಂದನ ಕಳ್ಳಸಾಗಣೆಯಲ್ಲಿ ದೊಡ್ಡ ಡಾನ್ ಆಗಿ ಬೆಳೆದಿದ್ದಾನೆ. ಸಿಎಂನೇ ಬದಲಾಯಿಸುವಷ್ಟು ಹಣ ಅವನಲ್ಲಿ ಇದೆ. ‘ಪುಷ್ಪ 2’ ಚಿತ್ರದ ಕೊನೆಯಲ್ಲಿ ಮೂರನೇ ಭಾಗ ಬರಲಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಾಗಿದೆ. ನಿರ್ಮಾಪಕ ರವಿ ಶಂಕರ್ ಅವರು ಮೂರನೇ ಪಾರ್ಟ್​ ಶೂಟಿಂಗ್ ಯಾವಾಗ ಎಂಬುದನ್ನು ರಿವೀಲ್ ಮಾಡಿದ್ದಾರೆ.

‘ಪುಷ್ಪ ಚಿತ್ರಕ್ಕೆ ಮೂರನೇ ಪಾರ್ಟ್ ಬಂದೇ ಬರುತ್ತದೆ. ಅಟ್ಲಿ ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಎರಡು ಸಿನಿಮಾಗಳನ್ನು ಪೂರ್ಣಗೊಳಿಸಲು ಅವರಿಗೆ ಎರಡು ವರ್ಷ ಬೇಕಾಗುತ್ತದೆ. ಆ ಬಳಿಕ ಪುಷ್ಪ 3 ಸೆಟ್ಟೇರುತ್ತದೆ’ ಎಂದು ರವಿ ಶಂಕರ್ ಹೇಳಿದ್ದಾರೆ.

ಇದನ್ನೂ ಓದಿ
Image
23 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಅಪ್ಪು’; ಗಳಿಕೆಯಲ್ಲಿ ಎಲ್ಲ ದಾಖಲೆ ಉಡೀಸ್
Image
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
Image
ಹೀರೋ ಆಗುವುದಕ್ಕೂ ಮೊದಲು 30ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ಜಗ್ಗೇಶ್
Image
ಲೋಹಿತ್ ಎಂದಿದ್ದ ಹೆಸರನ್ನು ಪುನೀತ್ ಆಗಿ ಬದಲಿಸಿದ್ದೇಕೆ ರಾಜ್​ಕುಮಾರ್?

ಇನ್ನು, ಸುಕುಮಾರ್ ಅವರು ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಲಿವೆ. ಆ ಬಳಿಕ ಅವರು ಫ್ರೀ ಆಗಲಿದ್ದು, ‘ಪುಷ್ಪ 3’ ಚಿತ್ರದ ಬಗ್ಗೆ ಗಮನ ಹರಿಸಬಹುದಾಗಿದೆ. 2028ರ ವೇಳೆಗೆ ‘ಪುಷ್ಪ 3’ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ಪುಷ್ಪ 3’ ಸಿನಿಮಾ ಕೆಲಸ ಈಗಲೇ ಶುರುವಾಗುತ್ತಾ? ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಉತ್ತರ ಕೇಳಿ..

‘ಮುಂದಿನ ಮೂರು ವರ್ಷಗಳಲ್ಲಿ ಸಿನಿಮಾ ಸೆಟ್ಟೇರುತ್ತದೆ. 2028ರ ವೇಳೆಗೆ ಚಿತ್ರ ರಿಲೀಸ್ ಆಗಲಿದೆ’ ಎಂದು ರವಿ ಶಂಕರ್ ರಿವೀಲ್ ಮಾಡಿದ್ದಾರೆ. ಈ ವಿಚಾರ ಕೇಳಿದ ಬಳಿಕ ಫ್ಯಾನ್ಸ್ ಖುಷಿಯಾಗಿದ್ದಾರೆ. ‘ಪುಷ್ಪ 3’ ಚಿತ್ರದಲ್ಲೂ ಫಹಾದ್ ಫಾಸಿಲ್ ಅವರೇ ವಿಲನ್ ಆಗಿ ಮುಂದುವರಿಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!