AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?

Allu Arjun: ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ 2ನೇ ಸ್ಥಾನ ಹಾಗೂ ಯಶ್​ 5ನೇ ಸ್ಥಾನದಲ್ಲಿದ್ದಾರೆ.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?
ಅಲ್ಲು ಅರ್ಜುನ್​, ಯಶ್​
TV9 Web
| Edited By: |

Updated on: Aug 31, 2021 | 9:55 AM

Share

ಟಾಲಿವುಡ್​ ನಟ ಅಲ್ಲು ಅರ್ಜುನ್ (Allu Arjun)​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ದಶಕಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅವರ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಂತೂ ಅವರು ಕೇವಲ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ಅವರು ‘ಪುಷ್ಪ’ (Pushpa) ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆಯೂ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ. ಬರೋಬ್ಬರಿ 13 ಮಿಲಿಯನ್​ (1.3 ಕೋಟಿ) ಫಾಲೋವರ್ಸ್​ ಹೊಂದುವ ಮೂಲಕ ದಕ್ಷಿಣ ಭಾರತದ ಹೀರೋಗಳ ಪೈಕಿ ನಂಬರ್​ ಒನ್​ ಪಟ್ಟ ಪಡೆದಿದ್ದಾರೆ.

ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ ಅವರಿಗೆ 2ನೇ ಸ್ಥಾನ ಸಿಕ್ಕಿದೆ. ಅವರನ್ನು 12.9 ಮಿಲಿಯನ್​ (1.2 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಮಹೇಶ್​ ಬಾಬು 71 ಲಕ್ಷ​, ಪ್ರಭಾಸ್​ 69 ಲಕ್ಷ​, ಕೆಜಿಎಫ್​ ಸ್ಟಾರ್​ ಯಶ್​ 50 ಲಕ್ಷ​, ವಿಜಯ್​ ಸೇತುಪತಿ 43 ಲಕ್ಷ​, ರಾಮ್​ ಚರಣ್​ 41 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ‘ಅಲಾ ವೈಕುಂಟಪುರಮುಲೋ’ ಸಿನಿಮಾ ಕಳೆದ ವರ್ಷ ಸೂಪರ್​ ಹಿಟ್​ ಆಗಿತ್ತು. ಹಾಡುಗಳು ಕೂಡ ದಾಖಲೆ ಬರೆದಿದ್ದವು. ಈಗ ಅವರ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಿಲೀಸ್​ ಮಾಡುವುದಾಗಿ ತಿಳಿಸಲಾಗಿದೆ. ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಚಿತ್ರ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಕನ್ನಡದ ಡಾಲಿ ಧನಂಜಯ, ಮಲಯಾಳಂ ಕಲಾವಿದ ಫಹಾದ್​ ಫಾಸಿಲ್, ಜಗಪತಿ ಬಾಬು, ಪ್ರಕಾಶ್​ ರೈ ಸೇರಿದಂತೆ ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದು, ಖ್ಯಾತ ನಿರ್ದೇಶಕ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಸೌಂಡು ಮಾಡುತ್ತಿವೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

Allu Arjun: ರಾಕ್ಷಸನಾಗಿ ಅಬ್ಬರಿಸಿದ ನಟ ಅಲ್ಲು ಅರ್ಜುನ್​; ಈ ರೀತಿ ಕೋಪ ತೋರಿಸಿದ್ದು ಯಾರ ಮೇಲೆ?

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!