AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?

Allu Arjun: ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ 2ನೇ ಸ್ಥಾನ ಹಾಗೂ ಯಶ್​ 5ನೇ ಸ್ಥಾನದಲ್ಲಿದ್ದಾರೆ.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?
ಅಲ್ಲು ಅರ್ಜುನ್​, ಯಶ್​
TV9 Web
| Edited By: |

Updated on: Aug 31, 2021 | 9:55 AM

Share

ಟಾಲಿವುಡ್​ ನಟ ಅಲ್ಲು ಅರ್ಜುನ್ (Allu Arjun)​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ದಶಕಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅವರ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಂತೂ ಅವರು ಕೇವಲ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ಅವರು ‘ಪುಷ್ಪ’ (Pushpa) ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆಯೂ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ. ಬರೋಬ್ಬರಿ 13 ಮಿಲಿಯನ್​ (1.3 ಕೋಟಿ) ಫಾಲೋವರ್ಸ್​ ಹೊಂದುವ ಮೂಲಕ ದಕ್ಷಿಣ ಭಾರತದ ಹೀರೋಗಳ ಪೈಕಿ ನಂಬರ್​ ಒನ್​ ಪಟ್ಟ ಪಡೆದಿದ್ದಾರೆ.

ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ ಅವರಿಗೆ 2ನೇ ಸ್ಥಾನ ಸಿಕ್ಕಿದೆ. ಅವರನ್ನು 12.9 ಮಿಲಿಯನ್​ (1.2 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಮಹೇಶ್​ ಬಾಬು 71 ಲಕ್ಷ​, ಪ್ರಭಾಸ್​ 69 ಲಕ್ಷ​, ಕೆಜಿಎಫ್​ ಸ್ಟಾರ್​ ಯಶ್​ 50 ಲಕ್ಷ​, ವಿಜಯ್​ ಸೇತುಪತಿ 43 ಲಕ್ಷ​, ರಾಮ್​ ಚರಣ್​ 41 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ‘ಅಲಾ ವೈಕುಂಟಪುರಮುಲೋ’ ಸಿನಿಮಾ ಕಳೆದ ವರ್ಷ ಸೂಪರ್​ ಹಿಟ್​ ಆಗಿತ್ತು. ಹಾಡುಗಳು ಕೂಡ ದಾಖಲೆ ಬರೆದಿದ್ದವು. ಈಗ ಅವರ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಿಲೀಸ್​ ಮಾಡುವುದಾಗಿ ತಿಳಿಸಲಾಗಿದೆ. ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಚಿತ್ರ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಕನ್ನಡದ ಡಾಲಿ ಧನಂಜಯ, ಮಲಯಾಳಂ ಕಲಾವಿದ ಫಹಾದ್​ ಫಾಸಿಲ್, ಜಗಪತಿ ಬಾಬು, ಪ್ರಕಾಶ್​ ರೈ ಸೇರಿದಂತೆ ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದು, ಖ್ಯಾತ ನಿರ್ದೇಶಕ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಸೌಂಡು ಮಾಡುತ್ತಿವೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

Allu Arjun: ರಾಕ್ಷಸನಾಗಿ ಅಬ್ಬರಿಸಿದ ನಟ ಅಲ್ಲು ಅರ್ಜುನ್​; ಈ ರೀತಿ ಕೋಪ ತೋರಿಸಿದ್ದು ಯಾರ ಮೇಲೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ