AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?

Allu Arjun: ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ 2ನೇ ಸ್ಥಾನ ಹಾಗೂ ಯಶ್​ 5ನೇ ಸ್ಥಾನದಲ್ಲಿದ್ದಾರೆ.

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?
ಅಲ್ಲು ಅರ್ಜುನ್​, ಯಶ್​
TV9 Web
| Updated By: ಮದನ್​ ಕುಮಾರ್​|

Updated on: Aug 31, 2021 | 9:55 AM

Share

ಟಾಲಿವುಡ್​ ನಟ ಅಲ್ಲು ಅರ್ಜುನ್ (Allu Arjun)​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ದಶಕಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅವರ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಂತೂ ಅವರು ಕೇವಲ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ಅವರು ‘ಪುಷ್ಪ’ (Pushpa) ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆಯೂ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ. ಬರೋಬ್ಬರಿ 13 ಮಿಲಿಯನ್​ (1.3 ಕೋಟಿ) ಫಾಲೋವರ್ಸ್​ ಹೊಂದುವ ಮೂಲಕ ದಕ್ಷಿಣ ಭಾರತದ ಹೀರೋಗಳ ಪೈಕಿ ನಂಬರ್​ ಒನ್​ ಪಟ್ಟ ಪಡೆದಿದ್ದಾರೆ.

ಅಲ್ಲು ಅರ್ಜುನ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.3 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ ಹೀರೋಗಳ ಪಟ್ಟಿಯಲ್ಲಿ ವಿಜಯ್​ ದೇವರಕೊಂಡ ಅವರಿಗೆ 2ನೇ ಸ್ಥಾನ ಸಿಕ್ಕಿದೆ. ಅವರನ್ನು 12.9 ಮಿಲಿಯನ್​ (1.2 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಮಹೇಶ್​ ಬಾಬು 71 ಲಕ್ಷ​, ಪ್ರಭಾಸ್​ 69 ಲಕ್ಷ​, ಕೆಜಿಎಫ್​ ಸ್ಟಾರ್​ ಯಶ್​ 50 ಲಕ್ಷ​, ವಿಜಯ್​ ಸೇತುಪತಿ 43 ಲಕ್ಷ​, ರಾಮ್​ ಚರಣ್​ 41 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ‘ಅಲಾ ವೈಕುಂಟಪುರಮುಲೋ’ ಸಿನಿಮಾ ಕಳೆದ ವರ್ಷ ಸೂಪರ್​ ಹಿಟ್​ ಆಗಿತ್ತು. ಹಾಡುಗಳು ಕೂಡ ದಾಖಲೆ ಬರೆದಿದ್ದವು. ಈಗ ಅವರ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಿಲೀಸ್​ ಮಾಡುವುದಾಗಿ ತಿಳಿಸಲಾಗಿದೆ. ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಚಿತ್ರ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಕನ್ನಡದ ಡಾಲಿ ಧನಂಜಯ, ಮಲಯಾಳಂ ಕಲಾವಿದ ಫಹಾದ್​ ಫಾಸಿಲ್, ಜಗಪತಿ ಬಾಬು, ಪ್ರಕಾಶ್​ ರೈ ಸೇರಿದಂತೆ ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದು, ಖ್ಯಾತ ನಿರ್ದೇಶಕ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಸೌಂಡು ಮಾಡುತ್ತಿವೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

Allu Arjun: ರಾಕ್ಷಸನಾಗಿ ಅಬ್ಬರಿಸಿದ ನಟ ಅಲ್ಲು ಅರ್ಜುನ್​; ಈ ರೀತಿ ಕೋಪ ತೋರಿಸಿದ್ದು ಯಾರ ಮೇಲೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ