AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಹೊಸ ಚಿತ್ರಕ್ಕೆ ಅಟ್ಲಿ ನಿರ್ದೇಶನ; ಸಂಭಾವನೆ ಎಷ್ಟು ಅಂತ ಕೇಳಿದ್ರೆ ಅಚ್ಚರಿ ಆಗತ್ತೆ

ಹೊಸ ಸಿನಿಮಾ ಕುರಿತಂತೆ ಮಾತನಾಡಲು ಈಗಾಗಲೇ ಅಟ್ಲಿ ಮತ್ತು ಅಲ್ಲು ಅರ್ಜುನ್​ ಅವರು ಭೇಟಿ ಆಗಿದ್ದಾರೆ. ಅಟ್ಲಿ ಹೇಳಿರುವ ಕಥೆ ಅಲ್ಲು ಅರ್ಜುನ್​ಗೆ ಸಖತ್​ ಇಷ್ಟ ಆಗಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್​ ಹೊಸ ಚಿತ್ರಕ್ಕೆ ಅಟ್ಲಿ ನಿರ್ದೇಶನ; ಸಂಭಾವನೆ ಎಷ್ಟು ಅಂತ ಕೇಳಿದ್ರೆ ಅಚ್ಚರಿ ಆಗತ್ತೆ
ಅಲ್ಲು ಅರ್ಜುನ್​, ಅಟ್ಲಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 24, 2022 | 8:39 AM

ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನ ಬಳಿಕ ವೃತ್ತಿಜೀವನದಲ್ಲಿ ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಅವರ ಸಿನಿಮಾಗಳಿಗೆ ಮೊದಲಿನಿಂದಲೂ ದೇಶಾದ್ಯಂತ ಒಳ್ಳೆಯ ಬೇಡಿಕೆ ಇದೆ. ಅದರಲ್ಲೂ ‘ಪುಷ್ಪ’ ತೆರೆಕಂಡ ನಂತರ ಆ ಮಾತು ಮತ್ತೊಮ್ಮೆ ಸಾಬೀತಾಯಿತು. ಮೂಲತಃ ತೆಲುಗಿನಲ್ಲಿ ನಿರ್ಮಾಣವಾದ ಆ ಚಿತ್ರ ಇತರೆ ಭಾಷೆಗಳಿಗೂ ಡಬ್​ ಆಗಿ ಕಳೆದ ವರ್ಷ ಡಿ.17ರಂದು ತೆರೆಕಂಡಿತ್ತು. ಉತ್ತರದ ರಾಜ್ಯಗಳಲ್ಲೂ ಧೂಳೆಬ್ಬಿಸಿದ್ದು ‘ಪುಷ್ಪ’ ಹೆಚ್ಚುಗಾರಿಕೆ. ವಿಶ್ವಾದ್ಯಂತ ಈ ಸಿನಿಮಾ 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದೆ. ಕೇವಲ ಹಿಂದಿ ಡಬ್ಬಿಂಗ್​ ವರ್ಷನ್​ನಿಂದಲೇ 91 ಕೋಟಿ ರೂಪಾಯಿ ಗಳಿಸಿದೆ. ಇಷ್ಟೆಲ್ಲ ಸಾಧನೆಗೆ ಅಲ್ಲು ಅರ್ಜುನ್​ (Allu Arjun) ಅವರ ನಟನೆಯ ಮತ್ತು ಅಭಿಮಾನಿ ಬಳಗ ಕಾರಣ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ಎಲ್ಲರಿಗೂ ಭಾರಿ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಅವರು ಹೊಸ ಚಿತ್ರಕ್ಕಾಗಿ ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ಈ ಚಿತ್ರಕ್ಕಾಗಿ ಅಲ್ಲು ಅರ್ಜುನ್​ ಪಡೆಯುತ್ತಾರೆ ಎನ್ನಲಾದ ಸಂಭಾವನೆ (Allu Arjun Remuneration) ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.

‘ಪುಷ್ಪ’ ಗೆಲುವಿನ ಬಳಕ ಅಲ್ಲು ಅರ್ಜುನ್​ ಅವರು ಸಹಜವಾಗಿಯೇ ಸಂಭಾವನೆ ಏರಿಕೆ ಮಾಡಿಕೊಂಡಿದ್ದಾರೆ. ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಅವರು ಅಟ್ಲಿ ಜೊತೆಗಿನ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆಯು ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ. ಈ ಹಿಂದೆ ‘ಕತ್ತಿ’, ‘2.0’ ಮುಂತಾದ ಹೈ ಬಜೆಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದು ಇದೇ ಲೈಕಾ ಪ್ರೊಡಕ್ಷನ್​ ಸಂಸ್ಥೆ.

ಕಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅಟ್ಲಿ ಅವರಿಗೆ ಸಲ್ಲುತ್ತದೆ. ಮೆರ್ಸೆಲ್​, ತೇರಿ, ಬಿಗಿಲ್​ ಮುಂತಾದ ಸಿನಿಮಾಗಳು ಅಟ್ಲಿ ಬತ್ತಳಿಕೆಯಿಂದ ಬಂದಂಥವು. ಈಗ ಅವರು ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಶಾರುಖ್​ ಖಾನ್​ ಅವರಿಗೆ ಒಂದು ಗೆಲುವು ಕೊಡಿಸುವ ಜವಾಬ್ದಾರಿಯನ್ನು ಅಟ್ಲಿ ಹೆಗಲಿಗೆ ಹಾಕಲಾಗಿದೆ. ಆ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಲಯನ್​’ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆ ಸಿನಿಮಾದ ಕೆಲಸಗಳು ಮುಗಿದ ಬಳಿಕ ಅಟ್ಲಿ ಅವರು ಅಲ್ಲು ಅರ್ಜುನ್​ ಜೊತೆ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಇತ್ತ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಸಿನಿಮಾದ ಎರಡನೇ ಪಾರ್ಟ್​ಗಾಗಿ ಸಜ್ಜಾಗುತ್ತಿದ್ದಾರೆ. ಮೊದಲ ಪಾರ್ಟ್​ಗೆ ಭರ್ಜರಿ ಗೆಲುವು ಸಿಕ್ಕಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಹೆಚ್ಚಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ನಿರ್ದೇಶಕ ಸುಕುಮಾರ್​ ಅವರು ಈ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಮುಗಿದ ಬಳಿಕವಷ್ಟೇ ಅಲ್ಲು ಅರ್ಜುನ್​ ಅವರು ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

ಹೊಸ ಸಿನಿಮಾ ಕುರಿತಂತೆ ಮಾತನಾಡಲು ಈಗಾಗಲೇ ಅಟ್ಲಿ ಮತ್ತು ಅಲ್ಲು ಅರ್ಜುನ್​ ಅವರು ಭೇಟಿ ಆಗಿದ್ದಾರೆ ಎನ್ನಲಾಗಿದೆ. ಅಟ್ಲಿ ಹೇಳಿರುವ ಕಥೆ ಅಲ್ಲು ಅರ್ಜುನ್​ಗೆ ಸಖತ್​ ಇಷ್ಟ ಆಗಿದೆ. ಶೀಘ್ರದಲ್ಲೇ ಅವರು ಈ ಸಿನಿಮಾಗೆ ಸಹಿ ಮಾಡಲಿದ್ದಾರೆ ಎಂಬ ಗುಸುಗುಸು ಹರಡಿದೆ.

ಇದನ್ನೂ ಓದಿ:

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ