AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಹೊಸ ಚಿತ್ರಕ್ಕೆ ಅಟ್ಲಿ ನಿರ್ದೇಶನ; ಸಂಭಾವನೆ ಎಷ್ಟು ಅಂತ ಕೇಳಿದ್ರೆ ಅಚ್ಚರಿ ಆಗತ್ತೆ

ಹೊಸ ಸಿನಿಮಾ ಕುರಿತಂತೆ ಮಾತನಾಡಲು ಈಗಾಗಲೇ ಅಟ್ಲಿ ಮತ್ತು ಅಲ್ಲು ಅರ್ಜುನ್​ ಅವರು ಭೇಟಿ ಆಗಿದ್ದಾರೆ. ಅಟ್ಲಿ ಹೇಳಿರುವ ಕಥೆ ಅಲ್ಲು ಅರ್ಜುನ್​ಗೆ ಸಖತ್​ ಇಷ್ಟ ಆಗಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್​ ಹೊಸ ಚಿತ್ರಕ್ಕೆ ಅಟ್ಲಿ ನಿರ್ದೇಶನ; ಸಂಭಾವನೆ ಎಷ್ಟು ಅಂತ ಕೇಳಿದ್ರೆ ಅಚ್ಚರಿ ಆಗತ್ತೆ
ಅಲ್ಲು ಅರ್ಜುನ್​, ಅಟ್ಲಿ
TV9 Web
| Edited By: |

Updated on: Jan 24, 2022 | 8:39 AM

Share

ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನ ಬಳಿಕ ವೃತ್ತಿಜೀವನದಲ್ಲಿ ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಅವರ ಸಿನಿಮಾಗಳಿಗೆ ಮೊದಲಿನಿಂದಲೂ ದೇಶಾದ್ಯಂತ ಒಳ್ಳೆಯ ಬೇಡಿಕೆ ಇದೆ. ಅದರಲ್ಲೂ ‘ಪುಷ್ಪ’ ತೆರೆಕಂಡ ನಂತರ ಆ ಮಾತು ಮತ್ತೊಮ್ಮೆ ಸಾಬೀತಾಯಿತು. ಮೂಲತಃ ತೆಲುಗಿನಲ್ಲಿ ನಿರ್ಮಾಣವಾದ ಆ ಚಿತ್ರ ಇತರೆ ಭಾಷೆಗಳಿಗೂ ಡಬ್​ ಆಗಿ ಕಳೆದ ವರ್ಷ ಡಿ.17ರಂದು ತೆರೆಕಂಡಿತ್ತು. ಉತ್ತರದ ರಾಜ್ಯಗಳಲ್ಲೂ ಧೂಳೆಬ್ಬಿಸಿದ್ದು ‘ಪುಷ್ಪ’ ಹೆಚ್ಚುಗಾರಿಕೆ. ವಿಶ್ವಾದ್ಯಂತ ಈ ಸಿನಿಮಾ 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದೆ. ಕೇವಲ ಹಿಂದಿ ಡಬ್ಬಿಂಗ್​ ವರ್ಷನ್​ನಿಂದಲೇ 91 ಕೋಟಿ ರೂಪಾಯಿ ಗಳಿಸಿದೆ. ಇಷ್ಟೆಲ್ಲ ಸಾಧನೆಗೆ ಅಲ್ಲು ಅರ್ಜುನ್​ (Allu Arjun) ಅವರ ನಟನೆಯ ಮತ್ತು ಅಭಿಮಾನಿ ಬಳಗ ಕಾರಣ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ಎಲ್ಲರಿಗೂ ಭಾರಿ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಅವರು ಹೊಸ ಚಿತ್ರಕ್ಕಾಗಿ ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ಈ ಚಿತ್ರಕ್ಕಾಗಿ ಅಲ್ಲು ಅರ್ಜುನ್​ ಪಡೆಯುತ್ತಾರೆ ಎನ್ನಲಾದ ಸಂಭಾವನೆ (Allu Arjun Remuneration) ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.

‘ಪುಷ್ಪ’ ಗೆಲುವಿನ ಬಳಕ ಅಲ್ಲು ಅರ್ಜುನ್​ ಅವರು ಸಹಜವಾಗಿಯೇ ಸಂಭಾವನೆ ಏರಿಕೆ ಮಾಡಿಕೊಂಡಿದ್ದಾರೆ. ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಅವರು ಅಟ್ಲಿ ಜೊತೆಗಿನ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆಯು ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ. ಈ ಹಿಂದೆ ‘ಕತ್ತಿ’, ‘2.0’ ಮುಂತಾದ ಹೈ ಬಜೆಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದು ಇದೇ ಲೈಕಾ ಪ್ರೊಡಕ್ಷನ್​ ಸಂಸ್ಥೆ.

ಕಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅಟ್ಲಿ ಅವರಿಗೆ ಸಲ್ಲುತ್ತದೆ. ಮೆರ್ಸೆಲ್​, ತೇರಿ, ಬಿಗಿಲ್​ ಮುಂತಾದ ಸಿನಿಮಾಗಳು ಅಟ್ಲಿ ಬತ್ತಳಿಕೆಯಿಂದ ಬಂದಂಥವು. ಈಗ ಅವರು ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಶಾರುಖ್​ ಖಾನ್​ ಅವರಿಗೆ ಒಂದು ಗೆಲುವು ಕೊಡಿಸುವ ಜವಾಬ್ದಾರಿಯನ್ನು ಅಟ್ಲಿ ಹೆಗಲಿಗೆ ಹಾಕಲಾಗಿದೆ. ಆ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಲಯನ್​’ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆ ಸಿನಿಮಾದ ಕೆಲಸಗಳು ಮುಗಿದ ಬಳಿಕ ಅಟ್ಲಿ ಅವರು ಅಲ್ಲು ಅರ್ಜುನ್​ ಜೊತೆ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಇತ್ತ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಸಿನಿಮಾದ ಎರಡನೇ ಪಾರ್ಟ್​ಗಾಗಿ ಸಜ್ಜಾಗುತ್ತಿದ್ದಾರೆ. ಮೊದಲ ಪಾರ್ಟ್​ಗೆ ಭರ್ಜರಿ ಗೆಲುವು ಸಿಕ್ಕಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಹೆಚ್ಚಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ನಿರ್ದೇಶಕ ಸುಕುಮಾರ್​ ಅವರು ಈ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಮುಗಿದ ಬಳಿಕವಷ್ಟೇ ಅಲ್ಲು ಅರ್ಜುನ್​ ಅವರು ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

ಹೊಸ ಸಿನಿಮಾ ಕುರಿತಂತೆ ಮಾತನಾಡಲು ಈಗಾಗಲೇ ಅಟ್ಲಿ ಮತ್ತು ಅಲ್ಲು ಅರ್ಜುನ್​ ಅವರು ಭೇಟಿ ಆಗಿದ್ದಾರೆ ಎನ್ನಲಾಗಿದೆ. ಅಟ್ಲಿ ಹೇಳಿರುವ ಕಥೆ ಅಲ್ಲು ಅರ್ಜುನ್​ಗೆ ಸಖತ್​ ಇಷ್ಟ ಆಗಿದೆ. ಶೀಘ್ರದಲ್ಲೇ ಅವರು ಈ ಸಿನಿಮಾಗೆ ಸಹಿ ಮಾಡಲಿದ್ದಾರೆ ಎಂಬ ಗುಸುಗುಸು ಹರಡಿದೆ.

ಇದನ್ನೂ ಓದಿ:

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು